AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈನಿಕರ ಜೊತೆ ಹಾಡಿ ಕುಣಿದು, ಶಾಲೆ ನಿರ್ಮಾಣಕ್ಕೆ ಒಂದು ಕೋಟಿ ರೂ. ದೇಣಿಗೆ ನೀಡಿದ ಅಕ್ಷಯ್​ ಕುಮಾರ್​

ಅಕ್ಷಯ್ ಕುಮಾರ್​ ಇತ್ತೀಚೆಗೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಜನರೊಂದಿಗೆ ಕೆಲ ಕಾಲ ಬೆರೆತರು. ನಂತರ ಸೈನಿಕರ ಜೊತೆ ಸಂವಾದ ನಡೆಸಿದರು.

ಸೈನಿಕರ ಜೊತೆ ಹಾಡಿ ಕುಣಿದು, ಶಾಲೆ ನಿರ್ಮಾಣಕ್ಕೆ ಒಂದು ಕೋಟಿ ರೂ. ದೇಣಿಗೆ ನೀಡಿದ ಅಕ್ಷಯ್​ ಕುಮಾರ್​
ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Jun 18, 2021 | 8:56 AM

Share

ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂದಿರುತ್ತಾರೆ ನಟ ಅಕ್ಷಯ್​ ಕುಮಾರ್​. ದೇಶದ ಬಗ್ಗೆ ಅವರಿಗೆ ಅಪಾರ ಗೌರವ. ಹಾಗಾಗಿ ಮತ್ತೆ ಮತ್ತೆ ಅವರು ದೇಶಭಕ್ತಿ ಸಿನಿಮಾಗಳನ್ನು ಮಾಡುತ್ತಾರೆ. ಬರೀ ಸಿನಿಮಾದಲ್ಲಿ ದೇಶಭಕ್ತಿ ತೋರಿಸುವುದು ಮಾತ್ರವಲ್ಲದೆ, ದೇಶಕ್ಕೆ ಕಷ್ಟ ಬಂದಾಗ ಅವರು ತಕ್ಷಣ ಸ್ಪಂದಿಸುತ್ತಾರೆ. ಕಳೆದ ವರ್ಷ ಲಾಕ್​ಡೌನ್​ ಆರಂಭ ಆದಾಗ ಪಿಎಂ​ ಕೇರ್ಸ್​ ಫಂಡ್​ಗೆ ಬರೋಬ್ಬರಿ 25 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡುವ ಮೂಲಕ ಅಕ್ಷಯ್​ ಕುಮಾರ್​ ಎಲ್ಲರಿಗೂ ಮಾದರಿ ಆಗಿದ್ದರು. ಈಗ ಶಾಲೆ ನಿರ್ಮಾಣಕ್ಕಾಗಿ ಒಂದು ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಅಕ್ಷಯ್ ಕುಮಾರ್​ ಇತ್ತೀಚೆಗೆ ಜಮ್ಮು ಕಾಶ್ಮೀರ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಜನರೊಂದಿಗೆ ಕೆಲ ಕಾಲ ಬೆರೆತರು. ನಂತರ ಸೈನಿಕರ ಜೊತೆ ಸಂವಾದ ನಡೆಸಿದರು. ಅವರಿಗೆ ಉತ್ಸಾಹ ತುಂಬಲು ಹಾಡಿ, ಕುಣಿದರು. ಬಿಎಸ್​ಎಫ್​ ಸೈನಿಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು. ಬಾಲಿವುಡ್​ ನಟನನ್ನು ನೋಡಲು ಸುತ್ತಮುತ್ತಲಿನ ಹಳ್ಳಿಯ ಜನರು ಮುಗಿಬಿದ್ದಿದ್ದರು. ಈ ವೇಳೆ ಅಲ್ಲಿನ ನೀರೂ ಗ್ರಾಮದಲ್ಲಿ ಶಾಲೆ ನಿರ್ಮಾಣಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವ ಮೂಲಕ ಅವರ ಎಲ್ಲರ ಮನ ಗೆದ್ದರು.

ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್​ ಬ್ಯುಸಿ ಆಗಿದ್ದಾರೆ. ರೋಹಿತ್​ ಶೆಟ್ಟಿ ನಿರ್ದೇಶನದಲ್ಲಿ ಅವರು ನಟಿಸಿರುವ ‘ಸೂರ್ಯವಂಶಿ’ ಚಿತ್ರದ ಬಿಡುಗಡೆಯು ಲಾಕ್​ಡೌನ್​ ಕಾರಣದಿಂದ ತಡವಾಗಿದೆ. ಬಹುನಿರೀಕ್ಷಿತ ಬೆಲ್​ ಬಾಟಂ ಸಿನಿಮಾ ಜುಲೈ 27ರಂದು ಚಿತ್ರಮಂದಿರದಲ್ಲಿಯೇ ರಿಲೀಸ್​ ಆಗಲಿದೆ ಎಂದು ಅವರು ಇತ್ತೀಚೆಗೆ ಸುದ್ದಿ ನೀಡಿದ್ದಾರೆ. ಇದಲ್ಲದೆ ಅತರಂಗಿರೇ, ಬಚ್ಚನ್​ ಪಾಂಡೆ, ರಾಮ್​ ಸೇತು ಮುಂತಾದ ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್​ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ:

ಕೊರೊನಾ ಏರಿಕೆ ಮಧ್ಯೆಯೇ ಅಕ್ಷಯ್​ ಕುಮಾರ್​ ಮಾಡಿದ್ರು ಅತಿ ದೊಡ್ಡ ಸಹಾಯ; ಗೌತಮ್​ ಗಂಭೀರ್​ ಮೆಚ್ಚುಗೆ

‘ಪದ್ಮಾವತ್​ ಸಿನಿಮಾಗಾದ ಗತಿಯೇ ನಿಮಗೂ ಆಗುತ್ತದೆ’; ಚಿತ್ರದ ಟೈಟಲ್​ ಬದಲಿಸಲು ಅಕ್ಷಯ್​ ಕುಮಾರ್​ಗೆ ಬಂತು ಬೆದರಿಕೆ

Follow Us
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!