AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈನಿಕರ ಜೊತೆ ಹಾಡಿ ಕುಣಿದು, ಶಾಲೆ ನಿರ್ಮಾಣಕ್ಕೆ ಒಂದು ಕೋಟಿ ರೂ. ದೇಣಿಗೆ ನೀಡಿದ ಅಕ್ಷಯ್​ ಕುಮಾರ್​

ಅಕ್ಷಯ್ ಕುಮಾರ್​ ಇತ್ತೀಚೆಗೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಜನರೊಂದಿಗೆ ಕೆಲ ಕಾಲ ಬೆರೆತರು. ನಂತರ ಸೈನಿಕರ ಜೊತೆ ಸಂವಾದ ನಡೆಸಿದರು.

ಸೈನಿಕರ ಜೊತೆ ಹಾಡಿ ಕುಣಿದು, ಶಾಲೆ ನಿರ್ಮಾಣಕ್ಕೆ ಒಂದು ಕೋಟಿ ರೂ. ದೇಣಿಗೆ ನೀಡಿದ ಅಕ್ಷಯ್​ ಕುಮಾರ್​
ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Jun 18, 2021 | 8:56 AM

Share

ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂದಿರುತ್ತಾರೆ ನಟ ಅಕ್ಷಯ್​ ಕುಮಾರ್​. ದೇಶದ ಬಗ್ಗೆ ಅವರಿಗೆ ಅಪಾರ ಗೌರವ. ಹಾಗಾಗಿ ಮತ್ತೆ ಮತ್ತೆ ಅವರು ದೇಶಭಕ್ತಿ ಸಿನಿಮಾಗಳನ್ನು ಮಾಡುತ್ತಾರೆ. ಬರೀ ಸಿನಿಮಾದಲ್ಲಿ ದೇಶಭಕ್ತಿ ತೋರಿಸುವುದು ಮಾತ್ರವಲ್ಲದೆ, ದೇಶಕ್ಕೆ ಕಷ್ಟ ಬಂದಾಗ ಅವರು ತಕ್ಷಣ ಸ್ಪಂದಿಸುತ್ತಾರೆ. ಕಳೆದ ವರ್ಷ ಲಾಕ್​ಡೌನ್​ ಆರಂಭ ಆದಾಗ ಪಿಎಂ​ ಕೇರ್ಸ್​ ಫಂಡ್​ಗೆ ಬರೋಬ್ಬರಿ 25 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡುವ ಮೂಲಕ ಅಕ್ಷಯ್​ ಕುಮಾರ್​ ಎಲ್ಲರಿಗೂ ಮಾದರಿ ಆಗಿದ್ದರು. ಈಗ ಶಾಲೆ ನಿರ್ಮಾಣಕ್ಕಾಗಿ ಒಂದು ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಅಕ್ಷಯ್ ಕುಮಾರ್​ ಇತ್ತೀಚೆಗೆ ಜಮ್ಮು ಕಾಶ್ಮೀರ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಜನರೊಂದಿಗೆ ಕೆಲ ಕಾಲ ಬೆರೆತರು. ನಂತರ ಸೈನಿಕರ ಜೊತೆ ಸಂವಾದ ನಡೆಸಿದರು. ಅವರಿಗೆ ಉತ್ಸಾಹ ತುಂಬಲು ಹಾಡಿ, ಕುಣಿದರು. ಬಿಎಸ್​ಎಫ್​ ಸೈನಿಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು. ಬಾಲಿವುಡ್​ ನಟನನ್ನು ನೋಡಲು ಸುತ್ತಮುತ್ತಲಿನ ಹಳ್ಳಿಯ ಜನರು ಮುಗಿಬಿದ್ದಿದ್ದರು. ಈ ವೇಳೆ ಅಲ್ಲಿನ ನೀರೂ ಗ್ರಾಮದಲ್ಲಿ ಶಾಲೆ ನಿರ್ಮಾಣಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವ ಮೂಲಕ ಅವರ ಎಲ್ಲರ ಮನ ಗೆದ್ದರು.

ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್​ ಬ್ಯುಸಿ ಆಗಿದ್ದಾರೆ. ರೋಹಿತ್​ ಶೆಟ್ಟಿ ನಿರ್ದೇಶನದಲ್ಲಿ ಅವರು ನಟಿಸಿರುವ ‘ಸೂರ್ಯವಂಶಿ’ ಚಿತ್ರದ ಬಿಡುಗಡೆಯು ಲಾಕ್​ಡೌನ್​ ಕಾರಣದಿಂದ ತಡವಾಗಿದೆ. ಬಹುನಿರೀಕ್ಷಿತ ಬೆಲ್​ ಬಾಟಂ ಸಿನಿಮಾ ಜುಲೈ 27ರಂದು ಚಿತ್ರಮಂದಿರದಲ್ಲಿಯೇ ರಿಲೀಸ್​ ಆಗಲಿದೆ ಎಂದು ಅವರು ಇತ್ತೀಚೆಗೆ ಸುದ್ದಿ ನೀಡಿದ್ದಾರೆ. ಇದಲ್ಲದೆ ಅತರಂಗಿರೇ, ಬಚ್ಚನ್​ ಪಾಂಡೆ, ರಾಮ್​ ಸೇತು ಮುಂತಾದ ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್​ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ:

ಕೊರೊನಾ ಏರಿಕೆ ಮಧ್ಯೆಯೇ ಅಕ್ಷಯ್​ ಕುಮಾರ್​ ಮಾಡಿದ್ರು ಅತಿ ದೊಡ್ಡ ಸಹಾಯ; ಗೌತಮ್​ ಗಂಭೀರ್​ ಮೆಚ್ಚುಗೆ

‘ಪದ್ಮಾವತ್​ ಸಿನಿಮಾಗಾದ ಗತಿಯೇ ನಿಮಗೂ ಆಗುತ್ತದೆ’; ಚಿತ್ರದ ಟೈಟಲ್​ ಬದಲಿಸಲು ಅಕ್ಷಯ್​ ಕುಮಾರ್​ಗೆ ಬಂತು ಬೆದರಿಕೆ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!