AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈನಿಕರ ಜೊತೆ ಹಾಡಿ ಕುಣಿದು, ಶಾಲೆ ನಿರ್ಮಾಣಕ್ಕೆ ಒಂದು ಕೋಟಿ ರೂ. ದೇಣಿಗೆ ನೀಡಿದ ಅಕ್ಷಯ್​ ಕುಮಾರ್​

ಅಕ್ಷಯ್ ಕುಮಾರ್​ ಇತ್ತೀಚೆಗೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಜನರೊಂದಿಗೆ ಕೆಲ ಕಾಲ ಬೆರೆತರು. ನಂತರ ಸೈನಿಕರ ಜೊತೆ ಸಂವಾದ ನಡೆಸಿದರು.

ಸೈನಿಕರ ಜೊತೆ ಹಾಡಿ ಕುಣಿದು, ಶಾಲೆ ನಿರ್ಮಾಣಕ್ಕೆ ಒಂದು ಕೋಟಿ ರೂ. ದೇಣಿಗೆ ನೀಡಿದ ಅಕ್ಷಯ್​ ಕುಮಾರ್​
ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Jun 18, 2021 | 8:56 AM

Share

ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂದಿರುತ್ತಾರೆ ನಟ ಅಕ್ಷಯ್​ ಕುಮಾರ್​. ದೇಶದ ಬಗ್ಗೆ ಅವರಿಗೆ ಅಪಾರ ಗೌರವ. ಹಾಗಾಗಿ ಮತ್ತೆ ಮತ್ತೆ ಅವರು ದೇಶಭಕ್ತಿ ಸಿನಿಮಾಗಳನ್ನು ಮಾಡುತ್ತಾರೆ. ಬರೀ ಸಿನಿಮಾದಲ್ಲಿ ದೇಶಭಕ್ತಿ ತೋರಿಸುವುದು ಮಾತ್ರವಲ್ಲದೆ, ದೇಶಕ್ಕೆ ಕಷ್ಟ ಬಂದಾಗ ಅವರು ತಕ್ಷಣ ಸ್ಪಂದಿಸುತ್ತಾರೆ. ಕಳೆದ ವರ್ಷ ಲಾಕ್​ಡೌನ್​ ಆರಂಭ ಆದಾಗ ಪಿಎಂ​ ಕೇರ್ಸ್​ ಫಂಡ್​ಗೆ ಬರೋಬ್ಬರಿ 25 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡುವ ಮೂಲಕ ಅಕ್ಷಯ್​ ಕುಮಾರ್​ ಎಲ್ಲರಿಗೂ ಮಾದರಿ ಆಗಿದ್ದರು. ಈಗ ಶಾಲೆ ನಿರ್ಮಾಣಕ್ಕಾಗಿ ಒಂದು ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಅಕ್ಷಯ್ ಕುಮಾರ್​ ಇತ್ತೀಚೆಗೆ ಜಮ್ಮು ಕಾಶ್ಮೀರ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಜನರೊಂದಿಗೆ ಕೆಲ ಕಾಲ ಬೆರೆತರು. ನಂತರ ಸೈನಿಕರ ಜೊತೆ ಸಂವಾದ ನಡೆಸಿದರು. ಅವರಿಗೆ ಉತ್ಸಾಹ ತುಂಬಲು ಹಾಡಿ, ಕುಣಿದರು. ಬಿಎಸ್​ಎಫ್​ ಸೈನಿಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು. ಬಾಲಿವುಡ್​ ನಟನನ್ನು ನೋಡಲು ಸುತ್ತಮುತ್ತಲಿನ ಹಳ್ಳಿಯ ಜನರು ಮುಗಿಬಿದ್ದಿದ್ದರು. ಈ ವೇಳೆ ಅಲ್ಲಿನ ನೀರೂ ಗ್ರಾಮದಲ್ಲಿ ಶಾಲೆ ನಿರ್ಮಾಣಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವ ಮೂಲಕ ಅವರ ಎಲ್ಲರ ಮನ ಗೆದ್ದರು.

ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್​ ಬ್ಯುಸಿ ಆಗಿದ್ದಾರೆ. ರೋಹಿತ್​ ಶೆಟ್ಟಿ ನಿರ್ದೇಶನದಲ್ಲಿ ಅವರು ನಟಿಸಿರುವ ‘ಸೂರ್ಯವಂಶಿ’ ಚಿತ್ರದ ಬಿಡುಗಡೆಯು ಲಾಕ್​ಡೌನ್​ ಕಾರಣದಿಂದ ತಡವಾಗಿದೆ. ಬಹುನಿರೀಕ್ಷಿತ ಬೆಲ್​ ಬಾಟಂ ಸಿನಿಮಾ ಜುಲೈ 27ರಂದು ಚಿತ್ರಮಂದಿರದಲ್ಲಿಯೇ ರಿಲೀಸ್​ ಆಗಲಿದೆ ಎಂದು ಅವರು ಇತ್ತೀಚೆಗೆ ಸುದ್ದಿ ನೀಡಿದ್ದಾರೆ. ಇದಲ್ಲದೆ ಅತರಂಗಿರೇ, ಬಚ್ಚನ್​ ಪಾಂಡೆ, ರಾಮ್​ ಸೇತು ಮುಂತಾದ ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್​ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ:

ಕೊರೊನಾ ಏರಿಕೆ ಮಧ್ಯೆಯೇ ಅಕ್ಷಯ್​ ಕುಮಾರ್​ ಮಾಡಿದ್ರು ಅತಿ ದೊಡ್ಡ ಸಹಾಯ; ಗೌತಮ್​ ಗಂಭೀರ್​ ಮೆಚ್ಚುಗೆ

‘ಪದ್ಮಾವತ್​ ಸಿನಿಮಾಗಾದ ಗತಿಯೇ ನಿಮಗೂ ಆಗುತ್ತದೆ’; ಚಿತ್ರದ ಟೈಟಲ್​ ಬದಲಿಸಲು ಅಕ್ಷಯ್​ ಕುಮಾರ್​ಗೆ ಬಂತು ಬೆದರಿಕೆ

Follow Us
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ