AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈನಿಕರ ಜೊತೆ ಹಾಡಿ ಕುಣಿದು, ಶಾಲೆ ನಿರ್ಮಾಣಕ್ಕೆ ಒಂದು ಕೋಟಿ ರೂ. ದೇಣಿಗೆ ನೀಡಿದ ಅಕ್ಷಯ್​ ಕುಮಾರ್​

ಅಕ್ಷಯ್ ಕುಮಾರ್​ ಇತ್ತೀಚೆಗೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಜನರೊಂದಿಗೆ ಕೆಲ ಕಾಲ ಬೆರೆತರು. ನಂತರ ಸೈನಿಕರ ಜೊತೆ ಸಂವಾದ ನಡೆಸಿದರು.

ಸೈನಿಕರ ಜೊತೆ ಹಾಡಿ ಕುಣಿದು, ಶಾಲೆ ನಿರ್ಮಾಣಕ್ಕೆ ಒಂದು ಕೋಟಿ ರೂ. ದೇಣಿಗೆ ನೀಡಿದ ಅಕ್ಷಯ್​ ಕುಮಾರ್​
ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Jun 18, 2021 | 8:56 AM

Share

ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂದಿರುತ್ತಾರೆ ನಟ ಅಕ್ಷಯ್​ ಕುಮಾರ್​. ದೇಶದ ಬಗ್ಗೆ ಅವರಿಗೆ ಅಪಾರ ಗೌರವ. ಹಾಗಾಗಿ ಮತ್ತೆ ಮತ್ತೆ ಅವರು ದೇಶಭಕ್ತಿ ಸಿನಿಮಾಗಳನ್ನು ಮಾಡುತ್ತಾರೆ. ಬರೀ ಸಿನಿಮಾದಲ್ಲಿ ದೇಶಭಕ್ತಿ ತೋರಿಸುವುದು ಮಾತ್ರವಲ್ಲದೆ, ದೇಶಕ್ಕೆ ಕಷ್ಟ ಬಂದಾಗ ಅವರು ತಕ್ಷಣ ಸ್ಪಂದಿಸುತ್ತಾರೆ. ಕಳೆದ ವರ್ಷ ಲಾಕ್​ಡೌನ್​ ಆರಂಭ ಆದಾಗ ಪಿಎಂ​ ಕೇರ್ಸ್​ ಫಂಡ್​ಗೆ ಬರೋಬ್ಬರಿ 25 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡುವ ಮೂಲಕ ಅಕ್ಷಯ್​ ಕುಮಾರ್​ ಎಲ್ಲರಿಗೂ ಮಾದರಿ ಆಗಿದ್ದರು. ಈಗ ಶಾಲೆ ನಿರ್ಮಾಣಕ್ಕಾಗಿ ಒಂದು ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಅಕ್ಷಯ್ ಕುಮಾರ್​ ಇತ್ತೀಚೆಗೆ ಜಮ್ಮು ಕಾಶ್ಮೀರ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಜನರೊಂದಿಗೆ ಕೆಲ ಕಾಲ ಬೆರೆತರು. ನಂತರ ಸೈನಿಕರ ಜೊತೆ ಸಂವಾದ ನಡೆಸಿದರು. ಅವರಿಗೆ ಉತ್ಸಾಹ ತುಂಬಲು ಹಾಡಿ, ಕುಣಿದರು. ಬಿಎಸ್​ಎಫ್​ ಸೈನಿಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು. ಬಾಲಿವುಡ್​ ನಟನನ್ನು ನೋಡಲು ಸುತ್ತಮುತ್ತಲಿನ ಹಳ್ಳಿಯ ಜನರು ಮುಗಿಬಿದ್ದಿದ್ದರು. ಈ ವೇಳೆ ಅಲ್ಲಿನ ನೀರೂ ಗ್ರಾಮದಲ್ಲಿ ಶಾಲೆ ನಿರ್ಮಾಣಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವ ಮೂಲಕ ಅವರ ಎಲ್ಲರ ಮನ ಗೆದ್ದರು.

ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್​ ಬ್ಯುಸಿ ಆಗಿದ್ದಾರೆ. ರೋಹಿತ್​ ಶೆಟ್ಟಿ ನಿರ್ದೇಶನದಲ್ಲಿ ಅವರು ನಟಿಸಿರುವ ‘ಸೂರ್ಯವಂಶಿ’ ಚಿತ್ರದ ಬಿಡುಗಡೆಯು ಲಾಕ್​ಡೌನ್​ ಕಾರಣದಿಂದ ತಡವಾಗಿದೆ. ಬಹುನಿರೀಕ್ಷಿತ ಬೆಲ್​ ಬಾಟಂ ಸಿನಿಮಾ ಜುಲೈ 27ರಂದು ಚಿತ್ರಮಂದಿರದಲ್ಲಿಯೇ ರಿಲೀಸ್​ ಆಗಲಿದೆ ಎಂದು ಅವರು ಇತ್ತೀಚೆಗೆ ಸುದ್ದಿ ನೀಡಿದ್ದಾರೆ. ಇದಲ್ಲದೆ ಅತರಂಗಿರೇ, ಬಚ್ಚನ್​ ಪಾಂಡೆ, ರಾಮ್​ ಸೇತು ಮುಂತಾದ ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್​ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ:

ಕೊರೊನಾ ಏರಿಕೆ ಮಧ್ಯೆಯೇ ಅಕ್ಷಯ್​ ಕುಮಾರ್​ ಮಾಡಿದ್ರು ಅತಿ ದೊಡ್ಡ ಸಹಾಯ; ಗೌತಮ್​ ಗಂಭೀರ್​ ಮೆಚ್ಚುಗೆ

‘ಪದ್ಮಾವತ್​ ಸಿನಿಮಾಗಾದ ಗತಿಯೇ ನಿಮಗೂ ಆಗುತ್ತದೆ’; ಚಿತ್ರದ ಟೈಟಲ್​ ಬದಲಿಸಲು ಅಕ್ಷಯ್​ ಕುಮಾರ್​ಗೆ ಬಂತು ಬೆದರಿಕೆ

Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ