AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ನಿರ್ದೇಶನದ ‘ಎ’ ಚಿತ್ರಕ್ಕೆ 25 ವರ್ಷ; ಈ ಕ್ಲಾಸಿಕ್ ಚಿತ್ರಕ್ಕೆ ಈಗಲೂ ಇದೆ ಬೇಡಿಕೆ

‘ಎ’ ಚಿತ್ರದ ‘ಮಾರಿ ಕಣ್ಣು..’ ಮೊದಲಾದ ಹಾಡುಗಳು ಹಿಟ್ ಆದವು. ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ಸಂಯೋಜನೆ ಮಾಡಿದ್ದರು. ಗುರುಕಿರಣ್ ಸಂಗೀತ ಚಿತ್ರಕ್ಕೆ ಮತ್ತಷ್ಟು ಬಲ ಕೊಟ್ಟಿತ್ತು.

ಉಪೇಂದ್ರ ನಿರ್ದೇಶನದ ‘ಎ’ ಚಿತ್ರಕ್ಕೆ 25 ವರ್ಷ; ಈ ಕ್ಲಾಸಿಕ್ ಚಿತ್ರಕ್ಕೆ ಈಗಲೂ ಇದೆ ಬೇಡಿಕೆ
ಉಪೇಂದ್ರ
TV9 Web
| Edited By: |

Updated on: Jan 16, 2023 | 11:48 AM

Share

ನಟನಾಗಿ, ನಿರ್ದೇಶಕನಾಗಿ ಉಪೇಂದ್ರ ಅವರು ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ನಿರ್ದೇಶನದ ‘ಎ’ ಸಿನಿಮಾ (A Movie) ತೆರೆಗೆ ಬಂದು ಇಂದಿಗೆ (ಜನವರಿ 16) 25 ವರ್ಷ ತುಂಬಿದೆ. ಉಪೇಂದ್ರ ವೃತ್ತಿಜೀವನದಲ್ಲಿ ಇದು ವಿಶೇಷ ಸಿನಿಮಾ ಎನಿಸಿಕೊಂಡಿದೆ. ನಟನಾಗಿ, ನಿರ್ದೇಶಕನಾಗಿ ಉಪೇಂದ್ರ (Upendra) ಅವರು ಈ ಚಿತ್ರದ ಮೂಲಕ ಗಮನ ಸೆಳೆದರು. ಈ ಚಿತ್ರವನ್ನು ಈಗಲೂ ಎಲ್ಲರೂ ನೆನಪಿಸಿಕೊಳ್ಳುತ್ತಾರೆ.

1992ರಲ್ಲಿ ತೆರೆಗೆ ಬಂದ ‘ತರ್ಲೆ ನನ್ಮಗ’ ಸಿನಿಮಾ ಮೂಲಕ ಉಪೇಂದ್ರ ಅವರು ನಿರ್ದೇಶನಕ್ಕೆ ಕಾಲಿಟ್ಟರು. ‘ಶ್​’, ‘ಓಂ’, ‘ಆಪರೇಷನ್​ ಅಂತ’ ಸಿನಿಮಾಗಳನ್ನು ನೀಡಿ ಉಪೇಂದ್ರ ಫೇಮಸ್ ಆದರು. 1998ರಲ್ಲಿ ತೆರೆಗೆ ಬಂದ ಉಪೇಂದ್ರ ನಿರ್ದೇಶನದ ‘ಎ’ ಸಿನಿಮಾ ಯಶಸ್ಸು ಕಂಡಿತು. ಈ ಚಿತ್ರದ ಮೂಲಕ ಅವರು ಮೊದಲ ಬಾರಿಗೆ ಪೂರ್ಣ ಪ್ರಮಾಣದ ಹೀರೋ ಆಗಿ ಕಾಣಿಸಿಕೊಂಡರು.

ಉಪ್ಪಿ ಎಂಟರ್​​ಟೈನರ್ಸ್ ಮೂಲಕ ಬಿ. ಜಗನ್ನಾಥ್ ಹಾಗೂ ಬಿ.ಜಿ. ಮಂಜುನಾಥ್ ಮೂಲಕ ‘ಎ’ ಸಿನಿಮಾ ಮೂಡಿಬಂದಿತ್ತು. ಕೋಟಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ 20 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ಉಪೇಂದ್ರ ಅವರು ಸಿದ್ಧಸೂತ್ರಗಳನ್ನು ಬದಿಗಿಟ್ಟು ಗಮನ ಸೆಳೆದಿದ್ದರು. ಈ ಮೂಲಕ ಬೇರೆ ರೀತಿಯಲ್ಲಿ ಆಲೋಚನೆ ಮಾಡುವುದನ್ನು ಹೇಳಿಕೊಟ್ಟರು.

ಇದನ್ನೂ ಓದಿ
Image
‘ಅದು ತುಂಬಾ ನಂಬಿಕೆ ಇರೋ ಜಾಗ, ಆ ಬಗ್ಗೆ ಮಾತನಾಡಬಾರದು’; ದೈವಗಳ ಬಗ್ಗೆ ಉಪೇಂದ್ರ ಮಾತು
Image
Upendra: ಪ್ಯಾನ್​ ಇಂಡಿಯಾ ಚಿತ್ರದಲ್ಲಿ ಶಿವಣ್ಣ-ಉಪೇಂದ್ರ; ಬಿಗ್​ ನ್ಯೂ​ಸ್​ ನೀಡಿದ ‘45’ ಚಿತ್ರತಂಡ
Image
Upendra: ‘ಯುಐ’ ಚಿತ್ರಕ್ಕೆ ಶೂಟಿಂಗ್​ ಶುರು; ಸೆಟ್​ನಲ್ಲಿ ಡೈರೆಕ್ಟರ್​ ಕ್ಯಾಪ್​ ಧರಿಸಿ ನಿಂತ ಉಪೇಂದ್ರ

‘ಎ’ ಚಿತ್ರದ ‘ಮಾರಿ ಕಣ್ಣು..’ ಮೊದಲಾದ ಹಾಡುಗಳು ಹಿಟ್ ಆದವು. ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ಸಂಯೋಜನೆ ಮಾಡಿದ್ದರು. ಗುರುಕಿರಣ್ ಸಂಗೀತ ಚಿತ್ರಕ್ಕೆ ಮತ್ತಷ್ಟು ಬಲ ಕೊಟ್ಟಿತ್ತು. ಈ ಚಿತ್ರದಲ್ಲಿ ಉಪ್ಪಿಗೆ ಜತೆಯಾಗಿ ಚಾಂದಿನಿ ಮೊದಲಾದವರು ನಟಿಸಿದ್ದರು. ಈ ಸಿನಿಮಾ ಸೈಕಾಲಾಜಿಕಲ್ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬಂದಿತ್ತು. ಆರಂಭದಲ್ಲೇ ಕ್ಲೈಮ್ಯಾಕ್ಸ್ ತೋರಿಸಿ ಎಲ್ಲರ ತಲೆಗೆ ಹುಳಬಿಟ್ಟಿದ್ದರು ಉಪೇಂದ್ರ.

ಇದನ್ನೂ ಓದಿ: ಪಾಕ್ ಆಕ್ರಮಿತ ಪ್ರದೇಶ ಮರಳಿ ಪಡೆಯಲು ಭಾರತೀಯ ಸೈನ್ಯ ಸಿದ್ಧ: ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ

ಸೋಶಿಯಲ್ ಮೀಡಿಯಾದಲ್ಲಿ ‘ಎ’ ಚಿತ್ರವನ್ನು ನೆನಪಿಸಿಕೊಳ್ಳಲಾಗುತ್ತಿದೆ. ಈ ಸಿನಿಮಾ ಈಗಲೂ ಕ್ಲಾಸಿಕ್ ಚಿತ್ರ ಎನಿಸಿಕೊಂಡಿದೆ. ಈ ಚಿತ್ರವನ್ನು ಭಕ್ತಿಯಿಂದ ನೋಡುವವರ ಸಂಖ್ಯೆ ದೊಡ್ಡದಿದೆ. ಈ ರೀತಿಯ ಚಿತ್ರಗಳನ್ನು ಉಪೇಂದ್ರ ಮತ್ತೆ ಮಾಡಲಿ ಎಂಬುದು ಪ್ರೇಕ್ಷಕರ ಆಸೆ. ಸದ್ಯ, ಉಪೇಂದ್ರ ಅವರು ‘ಯುಐ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಈ ವರ್ಷ ತೆರೆಗೆ ಬರುವ ನಿರೀಕ್ಷೆ ಇದೆ. ಉಪೇಂದ್ರ ಅವರು ಚಿತ್ರದ ನಿರ್ದೇಶನ ಮಾಡುತ್ತಿದ್ದಾರೆ. ಜತೆಗೆ ಸಿನಿಮಾದಲ್ಲಿ ಅವರು ಬಣ್ಣ ಹಚ್ಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ