AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 4ನೇ ವಯಸ್ಸಿಗೆ ಕಮಲ್ ಹಾಸನ್ ದಾಖಲೆ ಮುರಿದಿದ್ದ ಬಾಲನಟಿ ತ್ರೀಶಾ ಥೋಸರ್‌

4ನೇ ವಯಸ್ಸಿಗೆ ರಾಷ್ಟ್ರ ಪ್ರಶಸ್ತಿ ಪಡೆಯುವುದು ಎಂದರೆ ತಮಾಷೆ ಅಲ್ಲ. ಅಂಥ ಸಾಧನೆ ಮಾಡಿದ ಬಾಲನಟಿ ತ್ರೀಶಾ ಥೋಸರ್‌ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ವೈರಲ್ ಆಗುತ್ತಿದೆ. ‘ನಾಳ್ 2’ ಚಿತ್ರದಲ್ಲಿ ನಟಿಸಿ ಜನಮನ ಗೆದ್ದ ತ್ರೀಶಾ ಥೋಸರ್​ಗೆ ಹಲವು ಅವಕಾಶಗಳು ಬಂದಿವೆ.

ಕೇವಲ 4ನೇ ವಯಸ್ಸಿಗೆ ಕಮಲ್ ಹಾಸನ್ ದಾಖಲೆ ಮುರಿದಿದ್ದ ಬಾಲನಟಿ ತ್ರೀಶಾ ಥೋಸರ್‌
Treesha Thosar
ಮದನ್​ ಕುಮಾರ್​
|

Updated on: May 27, 2026 | 3:40 PM

Share

ಖ್ಯಾತ ನಟ ಕಮಲ್ ಹಾಸನ್ (Kamal Haasan) ಅವರು 6ನೇ ವಯಸ್ಸಿಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ನ್ಯಾಷನಲ್ ಅವಾರ್ಡ್ ಪಡೆದ ಅತಿ ಕಿರಿಯ ಬಾಲನಟ ಎಂಬ ಖ್ಯಾತಿ ಅವರ ಹೆಸರಿನಲ್ಲಿತ್ತು. ಆದರೆ 2025ರಲ್ಲಿ ಮರಾಠಿ ನಟಿ ತ್ರೀಶಾ ವಿವೇಕ್ ಥೋಸರ್ ಆ ದಾಖಲೆಯನ್ನು ಮುರಿದಳು. ಕೇವಲ 4ನೇ ವಯಸ್ಸಿಗೆ ಅವಳು ‘ಅತ್ಯುತ್ತಮ ಬಾಲ ನಟಿ’ ರಾಷ್ಟ್ರ ಪ್ರಶಸ್ತಿ (National Film Award) ಪಡೆದಳು. ಮರಾಠಿಯ ‘ನಾಳ್ 2’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಆಕೆಗೆ ಈ ಪ್ರಶಸ್ತಿ ಸಿಕ್ಕಿತು. ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ತ್ರೀಶಾ ಥೋಸರ್ (Treesha Thosar) ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ಮೆಚ್ಚುಗೆಯ ಕಮೆಂಟ್ ಮಾಡುತ್ತಿದ್ದಾರೆ.

‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ತ್ರೀಶಾ ಥೋಸರ್‌ ಅವರ ವಿಡಿಯೋವನ್ನು ಹಂಚಿಕೊಳ್ಳುತ್ತಾ ಬಳಕೆದಾರರೊಬ್ಬರು ಹೀಗೆ ಬರೆದಿದ್ದಾರೆ, ‘ಅವಳು ಸ್ಕೂಲ್ ಬ್ಯಾಗ್ ಹೆಗಲಿಗೇರಿಸಿಕೊಳ್ಳುವ ಮುನ್ನವೇ ಸೀರೆ ಉಟ್ಟಿದ್ದಳು. ನಾಲ್ಕು ವರ್ಷ ದಾಟದ ಪುಟ್ಟ ಬಾಲಕಿ ಗರಿಗರಿ ಸೀರೆಯನ್ನು ಉಟ್ಟು ಭಾರತದ ಅತ್ಯಂತ ಭವ್ಯವಾದ ವೇದಿಕೆಯ ಮೇಲೆ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕುತ್ತಿದ್ದಾಳೆ. ಯಾವುದೇ ಆತಂಕವಿಲ್ಲ, ಹಿಂಜರಿಕೆಯೂ ಇಲ್ಲ. ಕೇವಲ ಶಾಂತ ಹಾಗೂ ಅಚಲವಾದ ಗಾಂಭೀರ್ಯವಷ್ಟೇ ಅಲ್ಲಿತ್ತು. ಅವಳು ಭಾರತದ ರಾಷ್ಟ್ರಪತಿಗಳಿಂದ ಅತ್ಯುತ್ತಮ ಬಾಲನಟಿಗಾಗಿ ರಾಷ್ಟ್ರ ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದಾಳೆ ಮತ್ತು ಆ ಒಂದು ಕ್ಷಣದಲ್ಲಿ ಇತಿಹಾಸವನ್ನೇ ಮರುಸೃಷ್ಟಿಸುತ್ತಿದ್ದಾಳೆ’

ತ್ರೀಶಾ ಥೋಸರ್‌ ವೈರಲ್ ವಿಡಿಯೋ:

‘ಅವಳ ಹೆಸರು ತ್ರೀಶಾ ವಿವೇಕ್ ಥೋಸರ್. ಮತ್ತು ಆಕೆ ಆರು ದಶಕಗಳಿಗೂ ಹೆಚ್ಚು ಕಾಲ ಉಳಿದಿದ್ದ ದಾಖಲೆಯೊಂದನ್ನು ಇದೀಗ ಮುರಿದಿದ್ದಾಳೆ. ಅವಳು ಮೂರನೇ ವಯಸ್ಸಿನಲ್ಲಿ ನಟಿಸಿದಳು, ನಾಲ್ಕನೇ ವಯಸ್ಸಿನಲ್ಲಿ ಪ್ರಶಸ್ತಿ ಗೆದ್ದಳು. ತ್ರೀಶಾ ಮರಾಠಿ ಚಿತ್ರ ‘ನಾಳ್ 2’ ಸಿನಿಮಾದಲ್ಲಿ ಮುಗ್ಧ ಗ್ರಾಮೀಣ ಬಾಲಕಿ ‘ಚಿಮಿ’ ಎಂಬ ಪಾತ್ರವನ್ನು ನಿರ್ವಹಿಸಿದ್ದಾಳೆ. ಅವಳು ಅಲ್ಲಿ ಕೇವಲ ನಟಿಸುತ್ತಿರಲಿಲ್ಲ, ಬದಲಿಗೆ ಆ ಪಾತ್ರದಲ್ಲೇ ಜೀವಿಸುತ್ತಿದ್ದಳು. ಹೆಚ್ಚಿನ ಮಕ್ಕಳು ಅಕ್ಷರಗಳನ್ನು ಕಲಿಯುವ ವಯಸ್ಸಿನಲ್ಲಿ, ಈಕೆ ತನ್ನ ಸಹಜ ಭಾವನೆಗಳಿಂದ ರಾಷ್ಟ್ರೀಯ ತೀರ್ಪುಗಾರರ ಮನಗೆದ್ದಿದ್ದಾಳೆ. ಈ ಮೂಲಕ ಅವಳು ಕಮಲ್ ಹಾಸನ್ ಅವರ 60 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾಳೆ’ ಎಂದು ಪೋಸ್ಟ್ ಮಾಡಿದ್ದಾರೆ.

2025ರಲ್ಲಿ ಬಾಲನಟಿಯನ್ನು ಅಭಿನಂದಿಸಿದವರಲ್ಲಿ ಹಿರಿಯ ನಟ ಕಮಲ್ ಹಾಸನ್ ಕೂಡ ಪ್ರಮುಖರಾಗಿದ್ದರು. ಅವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಪೋಸ್ಟ್ ಹಂಚಿಕೊಂಡಿದ್ದರು. ‘ಆತ್ಮೀಯ ಕುಮಾರಿ ತ್ರೀಶಾ ಥೋಸರ್, ನನ್ನ ಅತ್ಯಂತ ಜೋರಾದ ಚಪ್ಪಾಳೆಗಳು ನಿನಗೆ ಸಲ್ಲುತ್ತವೆ. ನೀನು ನನ್ನ ದಾಖಲೆಯನ್ನು ಮುರಿದಿದ್ದೀಯ. ಏಕೆಂದರೆ ನನಗೆ ಮೊದಲ ಪ್ರಶಸ್ತಿ ಬಂದಾಗ ನನಗೆ ಈಗಾಗಲೇ ಆರು ವರ್ಷ ವಯಸ್ಸಾಗಿತ್ತು. ನಿನ್ನ ಈ ಅದ್ಭುತ ಪ್ರತಿಭೆಯೊಂದಿಗೆ ಸದಾ ಕೆಲಸ ಮಾಡುತ್ತಿರು. ನಿನ್ನ ಮನೆಯ ಹಿರಿಯರಿಗೂ ನನ್ನ ಅಭಿನಂದನೆಗಳು’ ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ: ಭಾರತದ ಶ್ರೀಮಂತ ಬಾಲನಟಿ ಇವರೇ ನೋಡಿ; ಒಟ್ಟೂ ಆಸ್ತಿ ಎಷ್ಟು ಕೋಟಿ ರೂಪಾಯಿ?  

ರಾಷ್ಟ್ರ ಪ್ರಶಸ್ತಿ ಗೆದ್ದ ನಂತರ ತ್ರೀಶಾ ಕೂಡ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಳು. ಸುದ್ದಿ ಸಂಸ್ಥೆ ‘ಎಎನ್‌ಐ’ ಜೊತೆ ಮಾತನಾಡಿದ ಆಕೆ, ‘ರಾಷ್ಟ್ರಪತಿಗಳು ನನಗೆ ಅಭಿನಂದನೆ ಸಲ್ಲಿಸಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ’ ಎಂದು ಹೇಳುವ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದಕ್ಕೆ ತಮ್ಮ ಸಂತಸವನ್ನು ಹಂಚಿಕೊಂಡಿದ್ದಳು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ