AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

68th National Film Awards: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ‘ಡೊಳ್ಳು’ ಕನ್ನಡದ ಅತ್ಯುತ್ತಮ ಚಿತ್ರ

68th National Film Awards Full List: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ‘ಡೊಳ್ಳು’ ಸಿನಿಮಾ ‘ಕನ್ನಡದ ಅತ್ಯುತ್ತಮ ಚಿತ್ರ’ ಪ್ರಶಸ್ತಿ ಪಡೆದಿದೆ.

68th National Film Awards: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ‘ಡೊಳ್ಳು’ ಕನ್ನಡದ ಅತ್ಯುತ್ತಮ ಚಿತ್ರ
ಡೊಳ್ಳು ಸಿನಿಮಾ ಪೋಸ್ಟರ್​
TV9 Web
| Edited By: |

Updated on:Jul 22, 2022 | 5:32 PM

Share

2020ನೇ ಸಾಲಿನ ಸಿನಿಮಾಗಳಿಗೆ ಶುಕ್ರವಾರ (ಜುಲೈ 22) ರಾಷ್ಟ್ರ ಪ್ರಶಸ್ತಿ (National Film Awards) ಘೋಷಿಸಲಾಗಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ (68th National Film Awards) 30 ಭಾಷೆಗಳ 300 ಫೀಚರ್​ ಫಿಲ್ಮ್​, 150 ನಾನ್​-ಫೀಚರ್​ ಫಿಲ್ಮ್​ ಸೇರಿ 400ಕ್ಕೂ ಅಧಿಕ ಸಿನಿಮಾಗಳು ಅರ್ಜಿ ಸಲ್ಲಿಸಿದ್ದವು. ‘ಡೊಳ್ಳು’ (Dollu Kannada Cinema) ಸಿನಿಮಾ ‘ಕನ್ನಡದ ಅತ್ಯುತ್ತಮ ಚಿತ್ರ’ ಪ್ರಶಸ್ತಿ ಪಡೆದಿದೆ. ಈ ಚಿತ್ರಕ್ಕೆ ಸಾಗರ್​ ಪುರಾಣಿಕ್​ ನಿರ್ದೇಶನ ಮಾಡಿದ್ದು, ಪವನ್​ ಒಡೆಯರ್​ ಮತ್ತು ಅಪೇಕ್ಷಾ ಪುರೋಹಿತ್​ ನಿರ್ಮಾಣ ಮಾಡಿದ್ದಾರೆ. ‘ದ ಲಾಂಗೆಸ್ಟ್​ ಕಿಸ್’​ ಪುಸ್ತಕಕ್ಕೆ ‘ಸಿನಿಮಾ ಕುರಿತು ಅತ್ಯುತ್ತಮ ಕೃತಿ’ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ.

ಅಜಯ್​ ದೇವಗನ್​ (ತಾನಾಜಿ: ದಿ ಅನ್​ಸಂಗ್​ ಹೀರೋ) ಹಾಗೂ ಸೂರ್ಯ (ಸೂರರೈ ಪೋಟ್ರು) ‘ಅತ್ಯುತ್ತಮ ನಟ’ ಪ್ರಶಸ್ತಿ ಹಂಚಿಕೊಂಡಿದ್ದಾರೆ. ‘ಸೂರರೈ ಪೋಟ್ರು’ ಚಿತ್ರದಲ್ಲಿನ ನಟನೆಗಾಗಿ ಅಪರ್ಣಾ ಬಾಲಮುರಳಿ ಅವರು ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಅಯ್ಯಪ್ಪನುಮ್​ ಕೋಶಿಯುಂ’ ಚಿತ್ರದಲ್ಲಿನ ಅಭಿನಯಕ್ಕೆ ಬಿಜು ಮೆನನ್​ ಅವರು ‘ಅತ್ಯುತ್ತಮ ಪೋಷಕ ನಟ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತಮಿಳು ನಟಿ ಲಕ್ಷ್ಮೀ ಪ್ರಿಯಾ ಚಂದ್ರಮೌಳಿ ಅವರಿಗೆ ‘ಅತ್ಯುತ್ತಮ ಪೋಷಕ ನಟಿ’ ಪ್ರಶಸ್ತಿ ನೀಡಲಾಗಿದೆ.

ಸಂಚಾರಿ ವಿಜಯ್​ ನಟನೆಯ ‘ತಲೆದಂಡ’ ಚಿತ್ರಕ್ಕೆ ‘ಪರಿಸರ ಸಂರಕ್ಷಣೆ ಕುರಿತ ಅತ್ಯುತ್ತಮ ಚಿತ್ರ’ ಪ್ರಶಸ್ತಿಯನ್ನು ನೀಡಲಾಗಿದೆ. ಈ ಸಿನಿಮಾದಲ್ಲಿ ವಿಜಯ್ ಅವರು ಭಿನ್ನವಾದ ಪಾತ್ರ ಮಾಡಿದ್ದಾರೆ. ಅವರು ಈ ಹಿಂದೆ ನಟಿಸಿದ್ದ ‘ನಾತಿಚರಾಮಿ’, ‘ಹರಿವು’ ಸಿನಿಮಾಗಳು ಕೂಡ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದವು. ಅಂಥ ನಟ ಇಂದು ನಮ್ಮೊಂದಿಗೆ ಇಲ್ಲ ಎಂಬುದು ನೋವಿನ ಸಂಗತಿ.

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ:

ಅತ್ಯುತ್ತಮ ನಟ: ಅಜಯ್​ ದೇವಗನ್​ ಮತ್ತು ಸೂರ್ಯ

ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ

ಅತ್ಯುತ್ತಮ ಕನ್ನಡ ಸಿನಿಮಾ: ಡೊಳ್ಳು

ಅತ್ಯುತ್ತಮ ಕಥಾಚಿತ್ರ: ಸೂರರೈ ಪೋಟ್ರು

ಅತ್ಯುತ್ತಮ ಜನಪ್ರಿಯ ಚಿತ್ರ: ತಾನಾಜಿ

ಅತ್ಯುತ್ತಮ ನಿರ್ದೇಶಕ: ಸಚ್ಚಿದಾನಂದನ್​ ಕೆ.ಆರ್​.

ಅತ್ಯುತ್ತಮ ಸಿನಿಮಾಸ್ನೇಹಿ ರಾಜ್ಯ: ಮಧ್ಯ ಪ್ರದೇಶ

ಅತ್ಯುತ್ತಮ ಆಡಿಯೋಗ್ರಫಿ: ಡೊಳ್ಳು ಕನ್ನಡ ಸಿನಿಮಾ

ಅತ್ಯುತ್ತಮ ಚಿತ್ರಕಥೆ: ಶಾಲಿನಿ ಉಷಾ ನಾಯರ್​, ಸುಧಾ ಕೊಂಗರು (ಸೂರರೈ ಪೋಟ್ರು)

ಅತ್ಯುತ್ತಮ ಹಿನ್ನೆಲೆ ಗಾಯಕಿ: ನಂಚಮ್ಮ (ಅಯ್ಯಪ್ಪನುಂ ಕೋಶಿಯುಂ)

ಅತ್ಯುತ್ತಮ ಹಿನ್ನೆಲೆ ಗಾಯಕ: ರಾಹುಲ್​ ದೇಶಪಾಂಡೆ (ಮಿ ವಸಂತ್​ ರಾವ್​)

ಅತ್ಯುತ್ತಮ ಮಕ್ಕಳ ಸಿನಿಮಾ: ಸುಮಿ (ಮರಾಠಿ)

ಅತ್ಯುತ್ತಮ ಪರಿಸರ ಸಂರಕ್ಷಣಾ ಚಿತ್ರ: ತಲೆದಂಡ (ಕನ್ನಡ)

ಅತ್ಯುತ್ತಮ ತುಳು ಸಿನಿಮಾ: ಜೀಟಿಗೆ

Published On - 4:46 pm, Fri, 22 July 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?