AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

68th National Film Awards: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ‘ಡೊಳ್ಳು’ ಕನ್ನಡದ ಅತ್ಯುತ್ತಮ ಚಿತ್ರ

68th National Film Awards Full List: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ‘ಡೊಳ್ಳು’ ಸಿನಿಮಾ ‘ಕನ್ನಡದ ಅತ್ಯುತ್ತಮ ಚಿತ್ರ’ ಪ್ರಶಸ್ತಿ ಪಡೆದಿದೆ.

68th National Film Awards: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ‘ಡೊಳ್ಳು’ ಕನ್ನಡದ ಅತ್ಯುತ್ತಮ ಚಿತ್ರ
ಡೊಳ್ಳು ಸಿನಿಮಾ ಪೋಸ್ಟರ್​
TV9 Web
| Edited By: |

Updated on:Jul 22, 2022 | 5:32 PM

Share

2020ನೇ ಸಾಲಿನ ಸಿನಿಮಾಗಳಿಗೆ ಶುಕ್ರವಾರ (ಜುಲೈ 22) ರಾಷ್ಟ್ರ ಪ್ರಶಸ್ತಿ (National Film Awards) ಘೋಷಿಸಲಾಗಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ (68th National Film Awards) 30 ಭಾಷೆಗಳ 300 ಫೀಚರ್​ ಫಿಲ್ಮ್​, 150 ನಾನ್​-ಫೀಚರ್​ ಫಿಲ್ಮ್​ ಸೇರಿ 400ಕ್ಕೂ ಅಧಿಕ ಸಿನಿಮಾಗಳು ಅರ್ಜಿ ಸಲ್ಲಿಸಿದ್ದವು. ‘ಡೊಳ್ಳು’ (Dollu Kannada Cinema) ಸಿನಿಮಾ ‘ಕನ್ನಡದ ಅತ್ಯುತ್ತಮ ಚಿತ್ರ’ ಪ್ರಶಸ್ತಿ ಪಡೆದಿದೆ. ಈ ಚಿತ್ರಕ್ಕೆ ಸಾಗರ್​ ಪುರಾಣಿಕ್​ ನಿರ್ದೇಶನ ಮಾಡಿದ್ದು, ಪವನ್​ ಒಡೆಯರ್​ ಮತ್ತು ಅಪೇಕ್ಷಾ ಪುರೋಹಿತ್​ ನಿರ್ಮಾಣ ಮಾಡಿದ್ದಾರೆ. ‘ದ ಲಾಂಗೆಸ್ಟ್​ ಕಿಸ್’​ ಪುಸ್ತಕಕ್ಕೆ ‘ಸಿನಿಮಾ ಕುರಿತು ಅತ್ಯುತ್ತಮ ಕೃತಿ’ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ.

ಅಜಯ್​ ದೇವಗನ್​ (ತಾನಾಜಿ: ದಿ ಅನ್​ಸಂಗ್​ ಹೀರೋ) ಹಾಗೂ ಸೂರ್ಯ (ಸೂರರೈ ಪೋಟ್ರು) ‘ಅತ್ಯುತ್ತಮ ನಟ’ ಪ್ರಶಸ್ತಿ ಹಂಚಿಕೊಂಡಿದ್ದಾರೆ. ‘ಸೂರರೈ ಪೋಟ್ರು’ ಚಿತ್ರದಲ್ಲಿನ ನಟನೆಗಾಗಿ ಅಪರ್ಣಾ ಬಾಲಮುರಳಿ ಅವರು ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಅಯ್ಯಪ್ಪನುಮ್​ ಕೋಶಿಯುಂ’ ಚಿತ್ರದಲ್ಲಿನ ಅಭಿನಯಕ್ಕೆ ಬಿಜು ಮೆನನ್​ ಅವರು ‘ಅತ್ಯುತ್ತಮ ಪೋಷಕ ನಟ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತಮಿಳು ನಟಿ ಲಕ್ಷ್ಮೀ ಪ್ರಿಯಾ ಚಂದ್ರಮೌಳಿ ಅವರಿಗೆ ‘ಅತ್ಯುತ್ತಮ ಪೋಷಕ ನಟಿ’ ಪ್ರಶಸ್ತಿ ನೀಡಲಾಗಿದೆ.

ಸಂಚಾರಿ ವಿಜಯ್​ ನಟನೆಯ ‘ತಲೆದಂಡ’ ಚಿತ್ರಕ್ಕೆ ‘ಪರಿಸರ ಸಂರಕ್ಷಣೆ ಕುರಿತ ಅತ್ಯುತ್ತಮ ಚಿತ್ರ’ ಪ್ರಶಸ್ತಿಯನ್ನು ನೀಡಲಾಗಿದೆ. ಈ ಸಿನಿಮಾದಲ್ಲಿ ವಿಜಯ್ ಅವರು ಭಿನ್ನವಾದ ಪಾತ್ರ ಮಾಡಿದ್ದಾರೆ. ಅವರು ಈ ಹಿಂದೆ ನಟಿಸಿದ್ದ ‘ನಾತಿಚರಾಮಿ’, ‘ಹರಿವು’ ಸಿನಿಮಾಗಳು ಕೂಡ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದವು. ಅಂಥ ನಟ ಇಂದು ನಮ್ಮೊಂದಿಗೆ ಇಲ್ಲ ಎಂಬುದು ನೋವಿನ ಸಂಗತಿ.

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ:

ಅತ್ಯುತ್ತಮ ನಟ: ಅಜಯ್​ ದೇವಗನ್​ ಮತ್ತು ಸೂರ್ಯ

ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ

ಅತ್ಯುತ್ತಮ ಕನ್ನಡ ಸಿನಿಮಾ: ಡೊಳ್ಳು

ಅತ್ಯುತ್ತಮ ಕಥಾಚಿತ್ರ: ಸೂರರೈ ಪೋಟ್ರು

ಅತ್ಯುತ್ತಮ ಜನಪ್ರಿಯ ಚಿತ್ರ: ತಾನಾಜಿ

ಅತ್ಯುತ್ತಮ ನಿರ್ದೇಶಕ: ಸಚ್ಚಿದಾನಂದನ್​ ಕೆ.ಆರ್​.

ಅತ್ಯುತ್ತಮ ಸಿನಿಮಾಸ್ನೇಹಿ ರಾಜ್ಯ: ಮಧ್ಯ ಪ್ರದೇಶ

ಅತ್ಯುತ್ತಮ ಆಡಿಯೋಗ್ರಫಿ: ಡೊಳ್ಳು ಕನ್ನಡ ಸಿನಿಮಾ

ಅತ್ಯುತ್ತಮ ಚಿತ್ರಕಥೆ: ಶಾಲಿನಿ ಉಷಾ ನಾಯರ್​, ಸುಧಾ ಕೊಂಗರು (ಸೂರರೈ ಪೋಟ್ರು)

ಅತ್ಯುತ್ತಮ ಹಿನ್ನೆಲೆ ಗಾಯಕಿ: ನಂಚಮ್ಮ (ಅಯ್ಯಪ್ಪನುಂ ಕೋಶಿಯುಂ)

ಅತ್ಯುತ್ತಮ ಹಿನ್ನೆಲೆ ಗಾಯಕ: ರಾಹುಲ್​ ದೇಶಪಾಂಡೆ (ಮಿ ವಸಂತ್​ ರಾವ್​)

ಅತ್ಯುತ್ತಮ ಮಕ್ಕಳ ಸಿನಿಮಾ: ಸುಮಿ (ಮರಾಠಿ)

ಅತ್ಯುತ್ತಮ ಪರಿಸರ ಸಂರಕ್ಷಣಾ ಚಿತ್ರ: ತಲೆದಂಡ (ಕನ್ನಡ)

ಅತ್ಯುತ್ತಮ ತುಳು ಸಿನಿಮಾ: ಜೀಟಿಗೆ

Published On - 4:46 pm, Fri, 22 July 22

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?