AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

68ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪ್ರದಾನ; ಅವಾರ್ಡ್​​ ಸ್ವೀಕರಿಸಿದ ಕನ್ನಡಿಗರು ಇವರೇ ನೋಡಿ

National Film Awards 2022: ಅಜಯ್​ ದೇವಗನ್​ (ತಾನಾಜಿ: ದಿ ಅನ್​ಸಂಗ್​ ಹೀರೋ) ಹಾಗೂ ಸೂರ್ಯ (ಸೂರರೈ ಪೋಟ್ರು) ‘ಅತ್ಯುತ್ತಮ ನಟ’ ಪ್ರಶಸ್ತಿ ಹಂಚಿಕೊಂಡಿದ್ದರು. ‘ಸೂರರೈ ಪೋಟ್ರು’ ಚಿತ್ರದಲ್ಲಿನ ನಟನೆಗಾಗಿ ಅಪರ್ಣಾ ಬಾಲಮುರಳಿ ಅವರು ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದುಕೊಂಡಿದ್ದರು.

68ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪ್ರದಾನ; ಅವಾರ್ಡ್​​ ಸ್ವೀಕರಿಸಿದ ಕನ್ನಡಿಗರು ಇವರೇ ನೋಡಿ
TV9 Web
| Edited By: |

Updated on:Sep 30, 2022 | 6:28 PM

Share

ಇತ್ತೀಚೆಗಷ್ಟೇ 68ನೇ ಸಾಲಿನ ರಾಷ್ಟ್ರ ಪ್ರಶಸ್ತಿ (National Award) ಬಗ್ಗೆ ಘೋಷಣೆ ಮಾಡಲಾಗಿತ್ತು. ಇಂದು (ಸೆಪ್ಟೆಂಬರ್ 30) ದೆಹಲಿಯ ವಿಗ್ಯಾನ್​ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ವಿಶಿಷ್ಟ ಕಥಾಹಂದರ ಹೊಂದಿರುವ ಕನ್ನಡದ ‘ಡೊಳ್ಳು’ ಸಿನಿಮಾ, ಪರಿಸರ ಕಾಳಜಿಯ ಕಥಾವಸ್ತುವುಳ್ಳು ‘ತಲೆದಂಡ’, ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್​ ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ ಡಾ. ಪಿಟಿ ವೆಂಕಟೇಶ್​ ಕುಮಾರ್​’ ಚಿತ್ರಕ್ಕೆ ಈ ಬಾರಿ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ಈ ಸಿನಿಮಾಗಳಿಗೆ ಇಂದು ಪ್ರಶಸ್ತಿ ನೀಡಲಾಗಿದೆ.

ಅಜಯ್​ ದೇವಗನ್​ (ತಾನಾಜಿ: ದಿ ಅನ್​ಸಂಗ್​ ಹೀರೋ) ಹಾಗೂ ಸೂರ್ಯ (ಸೂರರೈ ಪೋಟ್ರು) ‘ಅತ್ಯುತ್ತಮ ನಟ’ ಪ್ರಶಸ್ತಿ ಹಂಚಿಕೊಂಡಿದ್ದರು. ‘ಸೂರರೈ ಪೋಟ್ರು’ ಚಿತ್ರದಲ್ಲಿನ ನಟನೆಗಾಗಿ ಅಪರ್ಣಾ ಬಾಲಮುರಳಿ ಅವರು ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದುಕೊಂಡಿದ್ದರು. ‘ಅಯ್ಯಪ್ಪನುಮ್​ ಕೋಶಿಯುಂ’ ಚಿತ್ರದಲ್ಲಿನ ಅಭಿನಯಕ್ಕೆ ಬಿಜು ಮೆನನ್​ ಅವರು ‘ಅತ್ಯುತ್ತಮ ಪೋಷಕ ನಟ’ ಪ್ರಶಸ್ತಿಗೆ ಭಾಜನರಾಗಿದ್ದರು. ತಮಿಳು ನಟಿ ಲಕ್ಷ್ಮೀ ಪ್ರಿಯಾ ಚಂದ್ರಮೌಳಿ ಅವರಿಗೆ ‘ಅತ್ಯುತ್ತಮ ಪೋಷಕ ನಟಿ’ ಪ್ರಶಸ್ತಿ ಘೋಷಿಸಲಾಗಿತ್ತು. ಅವರಿಗೆ ಇಂದು ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇದನ್ನೂ ಓದಿ
Image
ಒರಾಯನ್ ಮಾಲ್​ನಲ್ಲಿ ಡೊಳ್ಳು ಸಿನಿಮಾ ನೋಡಲು ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ
Image
Dollu Movie: ‘ಡೊಳ್ಳು’ ಚಿತ್ರ ವೀಕ್ಷಿಸಲು ರಾಜ್ಯಪಾಲರಿಗೆ ವಿಶೇಷ ಆಹ್ವಾನ ನೀಡಿದ ಚಿತ್ರತಂಡ
Image
‘ರಾಷ್ಟ್ರ ಪ್ರಶಸ್ತಿ’ ಪುರಸ್ಕೃತ ‘ಡೊಳ್ಳು’ ಚಿತ್ರದ ಮೊದಲ ಹಾಡು ರಿಲೀಸ್​ ಮಾಡಿದ ಡಾಲಿ ಧನಂಜಯ್​
Image
68th National Film Awards: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ‘ಡೊಳ್ಳು’ ಕನ್ನಡದ ಅತ್ಯುತ್ತಮ ಚಿತ್ರ

ಇದನ್ನೂ ಓದಿ: Dollu Movie: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ‘ಡೊಳ್ಳು’ ಚಿತ್ರ ವೀಕ್ಷಿಸಿ, ಮೆಚ್ಚುಗೆ ಸೂಚಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ:

ಅತ್ಯುತ್ತಮ ನಟ: ಅಜಯ್​ ದೇವಗನ್​ ಮತ್ತು ಸೂರ್ಯ

ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ

ಅತ್ಯುತ್ತಮ ಕನ್ನಡ ಸಿನಿಮಾ: ಡೊಳ್ಳು

ಅತ್ಯುತ್ತಮ ಕಥಾಚಿತ್ರ: ಸೂರರೈ ಪೋಟ್ರು

ಅತ್ಯುತ್ತಮ ಜನಪ್ರಿಯ ಚಿತ್ರ: ತಾನಾಜಿ

ಅತ್ಯುತ್ತಮ ನಿರ್ದೇಶಕ: ಸಚ್ಚಿದಾನಂದನ್​ ಕೆ.ಆರ್​.

ಅತ್ಯುತ್ತಮ ಸಿನಿಮಾಸ್ನೇಹಿ ರಾಜ್ಯ: ಮಧ್ಯ ಪ್ರದೇಶ

ಅತ್ಯುತ್ತಮ ಆಡಿಯೋಗ್ರಫಿ: ಡೊಳ್ಳು ಕನ್ನಡ ಸಿನಿಮಾ

ಅತ್ಯುತ್ತಮ ಚಿತ್ರಕಥೆ: ಶಾಲಿನಿ ಉಷಾ ನಾಯರ್​, ಸುಧಾ ಕೊಂಗರು (ಸೂರರೈ ಪೋಟ್ರು)

ಅತ್ಯುತ್ತಮ ಹಿನ್ನೆಲೆ ಗಾಯಕಿ: ನಂಚಮ್ಮ (ಅಯ್ಯಪ್ಪನುಂ ಕೋಶಿಯುಂ)

ಅತ್ಯುತ್ತಮ ಹಿನ್ನೆಲೆ ಗಾಯಕ: ರಾಹುಲ್​ ದೇಶಪಾಂಡೆ (ಮಿ ವಸಂತ್​ ರಾವ್​)

ಅತ್ಯುತ್ತಮ ಮಕ್ಕಳ ಸಿನಿಮಾ: ಸುಮಿ (ಮರಾಠಿ)

ಅತ್ಯುತ್ತಮ ಪರಿಸರ ಸಂರಕ್ಷಣಾ ಚಿತ್ರ: ತಲೆದಂಡ (ಕನ್ನಡ)

ಅತ್ಯುತ್ತಮ ತುಳು ಸಿನಿಮಾ: ಜೀಟಿಗೆ

Published On - 6:27 pm, Fri, 30 September 22

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​