AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

68ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪ್ರದಾನ; ಅವಾರ್ಡ್​​ ಸ್ವೀಕರಿಸಿದ ಕನ್ನಡಿಗರು ಇವರೇ ನೋಡಿ

National Film Awards 2022: ಅಜಯ್​ ದೇವಗನ್​ (ತಾನಾಜಿ: ದಿ ಅನ್​ಸಂಗ್​ ಹೀರೋ) ಹಾಗೂ ಸೂರ್ಯ (ಸೂರರೈ ಪೋಟ್ರು) ‘ಅತ್ಯುತ್ತಮ ನಟ’ ಪ್ರಶಸ್ತಿ ಹಂಚಿಕೊಂಡಿದ್ದರು. ‘ಸೂರರೈ ಪೋಟ್ರು’ ಚಿತ್ರದಲ್ಲಿನ ನಟನೆಗಾಗಿ ಅಪರ್ಣಾ ಬಾಲಮುರಳಿ ಅವರು ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದುಕೊಂಡಿದ್ದರು.

68ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪ್ರದಾನ; ಅವಾರ್ಡ್​​ ಸ್ವೀಕರಿಸಿದ ಕನ್ನಡಿಗರು ಇವರೇ ನೋಡಿ
TV9 Web
| Edited By: |

Updated on:Sep 30, 2022 | 6:28 PM

Share

ಇತ್ತೀಚೆಗಷ್ಟೇ 68ನೇ ಸಾಲಿನ ರಾಷ್ಟ್ರ ಪ್ರಶಸ್ತಿ (National Award) ಬಗ್ಗೆ ಘೋಷಣೆ ಮಾಡಲಾಗಿತ್ತು. ಇಂದು (ಸೆಪ್ಟೆಂಬರ್ 30) ದೆಹಲಿಯ ವಿಗ್ಯಾನ್​ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ವಿಶಿಷ್ಟ ಕಥಾಹಂದರ ಹೊಂದಿರುವ ಕನ್ನಡದ ‘ಡೊಳ್ಳು’ ಸಿನಿಮಾ, ಪರಿಸರ ಕಾಳಜಿಯ ಕಥಾವಸ್ತುವುಳ್ಳು ‘ತಲೆದಂಡ’, ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್​ ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ ಡಾ. ಪಿಟಿ ವೆಂಕಟೇಶ್​ ಕುಮಾರ್​’ ಚಿತ್ರಕ್ಕೆ ಈ ಬಾರಿ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ಈ ಸಿನಿಮಾಗಳಿಗೆ ಇಂದು ಪ್ರಶಸ್ತಿ ನೀಡಲಾಗಿದೆ.

ಅಜಯ್​ ದೇವಗನ್​ (ತಾನಾಜಿ: ದಿ ಅನ್​ಸಂಗ್​ ಹೀರೋ) ಹಾಗೂ ಸೂರ್ಯ (ಸೂರರೈ ಪೋಟ್ರು) ‘ಅತ್ಯುತ್ತಮ ನಟ’ ಪ್ರಶಸ್ತಿ ಹಂಚಿಕೊಂಡಿದ್ದರು. ‘ಸೂರರೈ ಪೋಟ್ರು’ ಚಿತ್ರದಲ್ಲಿನ ನಟನೆಗಾಗಿ ಅಪರ್ಣಾ ಬಾಲಮುರಳಿ ಅವರು ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದುಕೊಂಡಿದ್ದರು. ‘ಅಯ್ಯಪ್ಪನುಮ್​ ಕೋಶಿಯುಂ’ ಚಿತ್ರದಲ್ಲಿನ ಅಭಿನಯಕ್ಕೆ ಬಿಜು ಮೆನನ್​ ಅವರು ‘ಅತ್ಯುತ್ತಮ ಪೋಷಕ ನಟ’ ಪ್ರಶಸ್ತಿಗೆ ಭಾಜನರಾಗಿದ್ದರು. ತಮಿಳು ನಟಿ ಲಕ್ಷ್ಮೀ ಪ್ರಿಯಾ ಚಂದ್ರಮೌಳಿ ಅವರಿಗೆ ‘ಅತ್ಯುತ್ತಮ ಪೋಷಕ ನಟಿ’ ಪ್ರಶಸ್ತಿ ಘೋಷಿಸಲಾಗಿತ್ತು. ಅವರಿಗೆ ಇಂದು ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇದನ್ನೂ ಓದಿ
Image
ಒರಾಯನ್ ಮಾಲ್​ನಲ್ಲಿ ಡೊಳ್ಳು ಸಿನಿಮಾ ನೋಡಲು ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ
Image
Dollu Movie: ‘ಡೊಳ್ಳು’ ಚಿತ್ರ ವೀಕ್ಷಿಸಲು ರಾಜ್ಯಪಾಲರಿಗೆ ವಿಶೇಷ ಆಹ್ವಾನ ನೀಡಿದ ಚಿತ್ರತಂಡ
Image
‘ರಾಷ್ಟ್ರ ಪ್ರಶಸ್ತಿ’ ಪುರಸ್ಕೃತ ‘ಡೊಳ್ಳು’ ಚಿತ್ರದ ಮೊದಲ ಹಾಡು ರಿಲೀಸ್​ ಮಾಡಿದ ಡಾಲಿ ಧನಂಜಯ್​
Image
68th National Film Awards: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ‘ಡೊಳ್ಳು’ ಕನ್ನಡದ ಅತ್ಯುತ್ತಮ ಚಿತ್ರ

ಇದನ್ನೂ ಓದಿ: Dollu Movie: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ‘ಡೊಳ್ಳು’ ಚಿತ್ರ ವೀಕ್ಷಿಸಿ, ಮೆಚ್ಚುಗೆ ಸೂಚಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ:

ಅತ್ಯುತ್ತಮ ನಟ: ಅಜಯ್​ ದೇವಗನ್​ ಮತ್ತು ಸೂರ್ಯ

ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ

ಅತ್ಯುತ್ತಮ ಕನ್ನಡ ಸಿನಿಮಾ: ಡೊಳ್ಳು

ಅತ್ಯುತ್ತಮ ಕಥಾಚಿತ್ರ: ಸೂರರೈ ಪೋಟ್ರು

ಅತ್ಯುತ್ತಮ ಜನಪ್ರಿಯ ಚಿತ್ರ: ತಾನಾಜಿ

ಅತ್ಯುತ್ತಮ ನಿರ್ದೇಶಕ: ಸಚ್ಚಿದಾನಂದನ್​ ಕೆ.ಆರ್​.

ಅತ್ಯುತ್ತಮ ಸಿನಿಮಾಸ್ನೇಹಿ ರಾಜ್ಯ: ಮಧ್ಯ ಪ್ರದೇಶ

ಅತ್ಯುತ್ತಮ ಆಡಿಯೋಗ್ರಫಿ: ಡೊಳ್ಳು ಕನ್ನಡ ಸಿನಿಮಾ

ಅತ್ಯುತ್ತಮ ಚಿತ್ರಕಥೆ: ಶಾಲಿನಿ ಉಷಾ ನಾಯರ್​, ಸುಧಾ ಕೊಂಗರು (ಸೂರರೈ ಪೋಟ್ರು)

ಅತ್ಯುತ್ತಮ ಹಿನ್ನೆಲೆ ಗಾಯಕಿ: ನಂಚಮ್ಮ (ಅಯ್ಯಪ್ಪನುಂ ಕೋಶಿಯುಂ)

ಅತ್ಯುತ್ತಮ ಹಿನ್ನೆಲೆ ಗಾಯಕ: ರಾಹುಲ್​ ದೇಶಪಾಂಡೆ (ಮಿ ವಸಂತ್​ ರಾವ್​)

ಅತ್ಯುತ್ತಮ ಮಕ್ಕಳ ಸಿನಿಮಾ: ಸುಮಿ (ಮರಾಠಿ)

ಅತ್ಯುತ್ತಮ ಪರಿಸರ ಸಂರಕ್ಷಣಾ ಚಿತ್ರ: ತಲೆದಂಡ (ಕನ್ನಡ)

ಅತ್ಯುತ್ತಮ ತುಳು ಸಿನಿಮಾ: ಜೀಟಿಗೆ

Published On - 6:27 pm, Fri, 30 September 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್