Sign In

By signing in or creating an account, you agree with Associated Broadcasting Company's Terms & Conditions and Privacy Policy.

777 Charlie: ಭರ್ಜರಿ ಕಲೆಕ್ಷನ್: ಬಾಕ್ಸಾಫೀಸ್​ನಲ್ಲಿ ಧೂಳೆಬ್ಬಿಸುತ್ತಿರುವ ಚಾರ್ಲಿ

777 Charlie Box Office Collection: ಕೇರಳದಲ್ಲಿ ಈ ವಾರ ಮೂರು ಮಲಯಾಳಂ ಚಿತ್ರಗಳು ಬಿಡುಗಡೆಯಾಗಿದ್ದರೂ ಅಲ್ಲಿ 777 ಚಾರ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ತಮಿಳುನಾಡಿನಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

777 Charlie: ಭರ್ಜರಿ ಕಲೆಕ್ಷನ್: ಬಾಕ್ಸಾಫೀಸ್​ನಲ್ಲಿ ಧೂಳೆಬ್ಬಿಸುತ್ತಿರುವ ಚಾರ್ಲಿ
777 charlie
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jun 16, 2022 | 6:30 PM

ಚಿತ್ರಮಂದಿರಗಳಲ್ಲಿ 777 ಚಾರ್ಲಿ (777 Charlie) ಚಿತ್ರದ ಅಬ್ಬರ ಮುಂದುವರೆದಿದೆ. ಧರ್ಮ ಮತ್ತು ಚಾರ್ಲಿಯ ಹೃದಯಸ್ಪರ್ಶಿ ಪ್ರಯಾಣವನ್ನು ವೀಕ್ಷಿಸಲು ದಿನದಿಂದ ದಿನಕ್ಕೆ ಜನರು ಥಿಯೇಟರ್​ನತ್ತ ಧಾವಿಸುತ್ತಿದ್ದಾರೆ. ಪರಿಣಾಮ ಬಾಕ್ಸಾಫೀಸ್​ನಲ್ಲಿ ಚಾರ್ಲಿ ಸಖತ್ ಕಲೆಕ್ಷನ್ ಮಾಡ್ತಿದೆ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshit Shetty) ಚಿತ್ರ ಎಂಬ ಟ್ಯಾಗ್​ ಲೈನ್​ನೊಂದಿಗೆ ಭರ್ಜರಿ ಓಪನಿಂಗ್ ಪಡೆದಿದ್ದ 777 ಚಾರ್ಲಿ ಚಿತ್ರವು ಇದೀಗ ಚಾರ್ಲಿಯ ಕಾರಣದಿಂದಲೇ ಜನರನ್ನು ಸೆಳೆಯುತ್ತಿದೆ. ಈಗಾಗಲೇ ಚಿತ್ರದ ಕಲೆಕ್ಷನ್ ಎರಡಂಕಿ ಕೋಟಿಯನ್ನು ದಾಟಿದೆ. ಈ ಬಗ್ಗೆ ಖುಷಿ ಹಂಚಿಕೊಂಡಿರುವ ನಿರ್ದೇಶಕ ಕಿರಣ್ ರಾಜ್, ಎಲ್ಲಾ ಭಾಷೆಯ ಪ್ರೇಕ್ಷಕರು ಚಾರ್ಲಿಯನ್ನು ಮೆಚ್ಚಿಕೊಂಡಿದ್ದಾರೆ. ಅದರಂತೆ ಚಿತ್ರದ ಗಳಿಕೆಯಲ್ಲೂ ಏರಿಕೆ ಕಾಣುತ್ತಿದೆ ಎಂದಿದ್ದಾರೆ.

ಐಬಿಟೈಮ್ಸ್ ವರದಿ ಪ್ರಕಾರ, 777 ಚಾರ್ಲಿ ಕೇವಲ 5 ದಿನಗಳಲ್ಲಿ 35 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಕರ್ನಾಟಕದಲ್ಲಿ ಚಿತ್ರವು ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಕುಟುಂಬ ಪ್ರೇಕ್ಷಕರಿಂದಾಗಿ ಚಿತ್ರವು ಉತ್ತಮ ಕಲೆಕ್ಷನ್ ಕಾಣುತ್ತಿದೆ. ಅಲ್ಲದೆ, ತೆಲುಗು ವಿತರಕರು 777 ಚಾರ್ಲಿಯ ವಾರಾಂತ್ಯದ ಪ್ರದರ್ಶನದಿಂದ ಫುಲ್ ಖುಷಿಯಾಗಿದ್ದಾರೆ. ಅತ್ತ ಕೇರಳದಲ್ಲೂ ಧರ್ಮ ಹಾಗೂ ಚಾರ್ಲಿಯ ಅಭಿನಯವನ್ನು ಸಿನಿಪ್ರಿಯರು ಮೆಚ್ಚಿಕೊಂಡಿದ್ದಾರೆ.

ಕೇರಳದಲ್ಲಿ ಈ ವಾರ ಮೂರು ಮಲಯಾಳಂ ಚಿತ್ರಗಳು ಬಿಡುಗಡೆಯಾಗಿದ್ದರೂ ಅಲ್ಲಿ 777 ಚಾರ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ತಮಿಳುನಾಡಿನಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪುಣೆಯಲ್ಲಿ ಕನ್ನಡ ಮತ್ತು ಹಿಂದಿ ಎರಡೂ ಆವೃತ್ತಿಗಳು ಭರ್ಜರಿ ಪ್ರದರ್ಶನ ಕಾಣುತ್ತಿವೆ ಎಂದು ನಿರ್ದೇಶಕ ಕಿರಣ್‌ ರಾಜ್‌ ಹೇಳಿದ್ದಾರೆ.

ಇದನ್ನೂ ಓದಿ
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!
Image
Rakshit Shetty: ನಂಗೆ ಲವ್ ಫೈಲ್ಯುರ್ ಆಗಿಲ್ಲ: ರವಿಚಂದ್ರನ್ ಮುಂದೆ ಮನಬಿಚ್ಚಿದ ರಕ್ಷಿತ್ ಶೆಟ್ಟಿ

ಇತ್ತ ಕರ್ನಾಟಕದಲ್ಲಿ ರಕ್ಷಿತ್ ಶೆಟ್ಟಿ ಅಭಿಮಾನಿಗಳು ಚಿತ್ರವನ್ನು ಬೇರೆ ಲೆವೆಲ್​ಗೆ ಕೊಂಡೊಯ್ಯುತ್ತಿದ್ದರೆ, ಪರಭಾಷೆಯಲ್ಲೂ ಚಿತ್ರವು ಭರ್ಜರಿಯಾಗಿ ಓಡುತ್ತಿದೆ. ಇದರ ಫಲವಾಗಿ 777 ಚಾರ್ಲಿ ಕೇವಲ 5 ದಿನಗಳಲ್ಲಿ 35 ಕೋಟಿಗೂ ಅಧಿಕ ಮೊತ್ತವನ್ನು ಬಾಚಿಕೊಂಡಿದೆ. ವಿಶೇಷ ಎಂದರೆ 777 ಚಾರ್ಲಿ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರೂ, ಕನ್ನಡ ಹೊರತುಪಡಿಸಿ ಉಳಿದೆಡೆ ಕಡಿಮೆ ಶೋಗಳಲ್ಲಿ ರಿಲೀಸ್ ಮಾಡಲಾಗಿತ್ತು. ಇದೀಗ ಚಿತ್ರಕ್ಕೆ ಸಿಕ್ಕಿರುವ ಭರ್ಜರಿ ಓಪನಿಂಗ್​ ನೋಡಿ ಸ್ಕ್ರೀನ್‍ಗಳ ಸಂಖ್ಯೆಗಳನ್ನು ಹೆಚ್ಚಿಸುವಂತೆ ಬೇಡಿಕೆಗಳು ಬರುತ್ತಿದೆಯಂತೆ. ಹೀಗಾಗಿ ಮೊದಲ ವಾರದಲ್ಲೇ ಚಾರ್ಲಿಯ ಗಳಿಕೆ 40 ಕೋಟಿ ದಾಟುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

ಮತ್ತೊಂದೆಡೆ, ಅನೇಕ ಸೆಲೆಬ್ರಿಟಿಗಳು ಚಾರ್ಲಿ 777 ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಮಲ್ಟಿ-ಗ್ರ್ಯಾಮಿ ಪ್ರಶಸ್ತಿ ವಿಜೇತ ಭಾರತೀಯ ಸಂಗೀತ ಸಂಯೋಜಕ ರಿಕಿ ಕೇಜ್ ಟ್ವಿಟರ್‌ನಲ್ಲಿ ಚಿತ್ರವನ್ನು ಶ್ಲಾಘಿಸಿದ್ದಾರೆ. ಹಾಗೆಯೇ ಬಾಲಿವುಡ್ ನಟಿ ರಾಕುಲ್ ಪ್ರೀತ್ ಕೂಡ ಈ ಅಧ್ಭುತ ಚಿತ್ರವನ್ನು ವೀಕ್ಷಿಸುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಒಟ್ಟಿನಲ್ಲಿ ಚಾರ್ಲಿಯ ತುಂಟಾಟ, ಧರ್ಮನ ಪ್ರಾಣ ಸಂಕಟವನ್ನು ವೀಕ್ಷಿಸಿ ಪ್ರೇಕ್ಷಕರು ಕಣ್ಣೀರಿನೊಂದಿಗೆ ಥಿಯೇಟರ್​ನಿಂದ ಹೊರಬರುತ್ತಿದ್ದಾರೆ. ಹೀಗೆ ಚಿತ್ರದ ಭಾವುಕ ಸನ್ನಿವೇಶಗಳಿಗೆ ಕಣ್ಣೀರಿಡುತ್ತಾ ಪ್ರೇಕ್ಷಕರು ಬಾಕ್ಸಾಫೀಸ್ ತುಂಬಿಸುತ್ತಿರುವುದು ನೋಡಿ ನಿರ್ದೇಶಕ ಕಿರಣ್ ರಾಜ್ ಅ್ಯಂಡ್ ರಕ್ಷಿತ್ ಶೆಟ್ಟಿ ಟೀಮ್ ಫುಲ್ ಖುಷಿಯಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:28 pm, Thu, 16 June 22

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!