AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

875 ಶೋಗೆ ರೆಡಿ ಆದ ‘ಮುಖ್ಯಮಂತ್ರಿ’ ನಾಟಕ; ಎಲ್ಲಿ, ಯಾವಾಗ?

ಕಲಾಗಂಗೋತ್ರಿ ರಂಗಭೂಮಿಯ ‘ಮುಖ್ಯಮಂತ್ರಿ’ ನಾಟಕವು 875ನೇ ಪ್ರದರ್ಶನವನ್ನು ಈ ವಾರಾಂತ್ಯದಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದೆ. 1980ರಿಂದ ಪ್ರದರ್ಶನಗೊಳ್ಳುತ್ತಿರುವ ಈ ನಾಟಕವು ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆ. ಚಂದ್ರು ಅವರ ಅಭಿನಯ ಹಾಗೂ ಹಾಸ್ಯದ ಅಂಶಗಳು ನಾಟಕಕ್ಕೆ ವಿಶೇಷ ಆಕರ್ಷಣೆಯಾಗಿದೆ. ಟಿಕೆಟ್‌ಗಳು ಬುಕ್‌ಮೈಶೋದಲ್ಲಿ ಲಭ್ಯವಿದೆ.

875 ಶೋಗೆ ರೆಡಿ ಆದ ‘ಮುಖ್ಯಮಂತ್ರಿ’ ನಾಟಕ; ಎಲ್ಲಿ, ಯಾವಾಗ?
ಮುಖ್ಯಮಂತ್ರಿ ಚಂದ್ರು
ರಾಜೇಶ್ ದುಗ್ಗುಮನೆ
|

Updated on: May 14, 2025 | 10:52 AM

Share

ರಂಗಭೂಮಿಯಲ್ಲಿ ನಿರಂತರ ಸೇವೆ ಸಲ್ಲಿಸುತ್ತಾ ಬಂದಿರೋ ಕಲಾಗಂಗೋತ್ರಿ ಈಗ ‘ಮುಖ್ಯಮಂತ್ರಿ’ ನಾಟಕದ (Mukhyamantri Play) 875ನೇ ಶೋನ ಆಯೋಜನೆ ಮಾಡಿದೆ. ಈ ವೀಕೆಂಡ್​ನಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಶೋ ವೀಕ್ಷಿಸಬಹುದಾಗಿದೆ. ಹಲವು ದಶಕಗಳಿಂದ ಈ ನಾಟಕವನ್ನು ಮಾಡಿಕೊಂಡು ಬರಲಾಗುತ್ತಿದೆ. ಎಷ್ಟೇ ಶೋ ಪ್ರದರ್ಶನ ಕಂಡರೂ ಮುಖ್ಯಮಂತ್ರಿ ನಾಟಕದ ಜನಪ್ರಿಯತೆ ಎಂದಿಗೂ ಕಡಿಮೆ ಆಗಿಲ್ಲ. ಪ್ರತಿ ಬಾರಿಯೂ ಈ ನಾಟಕ ಹೌಸ್​ಫುಲ್ ಪ್ರದರ್ಶನ ಕಾಣುತ್ತದೆ. ವೀಕೆಂಡ್​ನಲ್ಲಿ ಈ ನಾಟಕವನ್ನು ನೀವು ನೋಡಬಹುದಾಗಿದೆ.

ಬಿವಿ ರಾಜಾರಾಮ್ ಅವರು ‘ಮುಖ್ಯಮಂತ್ರಿ’ ನಾಟಕವನ್ನು ನಿರ್ದೇಶನ ಮಾಡಿದರು. 1980ರಲ್ಲಿ ಈ ನಾಟಕದ ಮೊದಲ ಶೋ ಪ್ರದರ್ಶನ ಕಂಡಿತು. ಆಗ ಯಾರೊಬ್ಬರೂ ಈ ನಾಟಕ ಇಷ್ಟು ದೀರ್ಘ ಪ್ರಯಾಣ ಕಾಣುತ್ತದೆ ಎಂದು ಭಾವಿಸಿರಲಿಲ್ಲ. ರೆಂಜಿತ್ ಕಪೂರ್ ಅವರು ಹಿಂದಿಯಲ್ಲಿ ಬರೆದ ಕಥೆಯನ್ನು ಆಧರಿಸಿ ‘ಮುಖ್ಯಮಂತ್ರಿ’ ನಾಟಕ ಜನಿಸಿತು.

ಟಿಎಸ್ ಲೋಹಿತಾಶ್ವ ಅವರು ಈ ನಾಟಕವನ್ನು ಕನ್ನಡಕ್ಕೆ ತರ್ಜಮ್ಯ ಮಾಡಿದರು. ಅವರು ಮುಖ್ಯಮಂತ್ರಿ ಪಾತ್ರ ಮಾಡಬೇಕಿತ್ತು. ಆದರೆ, ಅವರಿಗೆ ಅನಾರೋಗ್ಯ ಆಗಿದ್ದರಿಂದ ಚಂದ್ರು ಅವರಿಗೆ ಅವಕಾಶ ಹೋಯಿತು.  ಗಂಭೀರ ರಾಜಕೀಯ ವಿಚಾರ ಹೊಂದಿದ್ದ ಈ ನಾಟಕವು ಅದರ ಪ್ರಥಮ ಪ್ರದರ್ಶನದ ನಂತರ ರಾಜಕೀಯ ವಿಡಂಬನೆಯಾಗಿ ಬದಲಾಯಿತು ಅನ್ನೋದು ವಿಶೇಷ.

ಇದನ್ನೂ ಓದಿ
Image
ಅನುಷ್ಕಾ-ವಿರಾಟ್ ಕೈಯಲ್ಲಿ ಎಲೆಕ್ಟ್ರಾನಿಕ್ ಉಂಗುರ; ವಿಶೇಷತೆ ಏನು?
Image
ಉಪೇಂದ್ರ ನಿರ್ದೇಶನಕ್ಕೆ ನಾನು ದೊಡ್ಡ ಫ್ಯಾನ್ ಎಂದ ರಜನಿ ಸಿನಿಮಾ ಡೈರೆಕ್ಟರ್
Image
ಪವನ್ ಕಲ್ಯಾಣ್ ಹಳೆಯ ಚಿತ್ರಕ್ಕೆ ಕೊನೆಗೂ ಬಂತು ರಿಲೀಸ್ ಭಾಗ್ಯ
Image
ರಶ್ಮಿಕಾ ಮಂದಣ್ಣ ಹೀರೋ ಜೊತೆ ತೆಲುಗು ಸಿನಿಮಾ ಘೋಷಿಸಿದ ಸಪ್ತಮಿ ಗೌಡ

ಮುಖ್ಯಮಂತ್ರಿ ಚಂದ್ರುಗೆ ಬಾಯ್ಪಾಟ ಮಾಡಿಕೊಂಡು ಡೈಲಾಗ್ ಹೇಳಲು ಇಷ್ಟ ಇರಲಿಲ್ಲ. ಹೀಗಾಗಿ, ಅವರು ನಾಟಕಕ್ಕೆ ಹಾಸ್ಯದ ಟಚ್ ಕೊಟ್ಟರು. ಆ ಬಳಿಕ ಈ ನಾಟಕವನ್ನು ಎಲ್ಲರೂ ಹೆಚ್ಚು ಇಷ್ಟಪಟ್ಟರು. ಚಂದ್ರಶೇಖರ್ ಎಂದಿದ್ದವರು ಮುಖ್ಯಮಂತ್ರಿ ಚಂದ್ರು ಆಗಿ ಬದಲಾಗಲು ಈ ನಾಟಕವೇ ಕಾರಣ ಆಯಿತು.

ವರ್ಷಗಳು ಕಳೆದಂತೆ ಸ್ಥಿತಿ-ಗತಿಗಳು, ರಾಜಕೀಯ ವಿಚಾರಗಳು ಬದಲಾಗುತ್ತಾ ಬಂದಿವೆ. ಅದಕ್ಕೆ ತಕ್ಕಂತೆ ತಂಡದವರು ಡೈಲಾಗ್​ನ ಬದಲಾಯಿಸುತ್ತಾ ಬಂದಿದ್ದಾರೆ. ಇದರಿಂದ ನಾಟಕ ಇನ್ನೂ ಹೊಸತನ ಕಾಪಾಡಿಕೊಂಡಿದೆ.

ಇದನ್ನೂ ಓದಿ: ಕಲ್ಪನಾ ಮೃತಪಟ್ಟಿದ್ದ ಐಬಿಯಲ್ಲಿ ರಾತ್ರಿ ಭಯನಾಕ ಅನುಭವ; ಕಿಲಕಿಲ ನಗುವಿಗೆ ಬೆಚ್ಚಿಬಿದ್ದ ಮುಖ್ಯಮಂತ್ರಿ ಚಂದ್ರು

‘ಮುಖ್ಯಮಂತ್ರಿ’ ನಾಟಕ ಮೇ 17ರಂದು ಬೆಂಗಳೂರಿನ ಜೆಸಿ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ರಾತ್ರಿ 7 ಗಂಟೆಗೆ ಪ್ರಸಾರ ಕಾಣಲಿದೆ. ಬುಕ್ ಮೈ ಶೋನಲ್ಲಿ ಟಿಕೆಟ್​ಗಳು ಲಭ್ಯ ಇವೆ. ಸ್ಥಳದಲ್ಲಿ ತೆರಳಿಯೂ ನೀವು ಟಿಕೆಟ್ ಖರೀದಿಸಿಬಹುದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ