AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯದ ಗೆಳೆಯನಿಗೆ ಅನಾರೋಗ್ಯ, ಕೂಡಲೇ ಸಹಾಯಕ್ಕೆ ಧಾವಿಸಿದ ಮೆಗಾಸ್ಟಾರ್ ಚಿರಂಜೀವಿ

ಚಿತ್ರರಂಗದ ಹಿನ್ನೆಲೆಯಿಲ್ಲದೆ ಸ್ವಂತ ಪ್ರಯತ್ನದಿಂದ ಮೆಗಾಸ್ಟಾರ್ ಎನಿಸಿಕೊಂಡಿರುವ ನಾಯಕ ಚಿರಂಜೀವಿ. ತಮ್ಮ ಅಭಿನಯದಿಂದ ಕೋಟಿಗಟ್ಟಲೆ ಜನರ ಮೆಚ್ಚುಗೆಯನ್ನು ಗಳಿಸಿದ್ದಾರೆ. ಸಾಕಷ್ಟು ನಟರಿಗೆ ಚಿರಂಜೀವಿ ಸ್ಫೂರ್ತಿ ಕೂಡ. ಸಿನಿಮಾಗಳ ಹೊರತಾಗಿಯೂ ಚಿರಂಜೀವಿ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಯಾರೇ ಕಷ್ಟದಲ್ಲಿದ್ದೇವೆ ಎಂದು ಕೇಳಿದರೂ ಕೂಡಲೇ ಅವರಿಗೆ ಸಹಾಯ ಮಾಡುವ ಮನೋಭಾವ ಅವರದ್ದು.

ಬಾಲ್ಯದ ಗೆಳೆಯನಿಗೆ ಅನಾರೋಗ್ಯ, ಕೂಡಲೇ ಸಹಾಯಕ್ಕೆ ಧಾವಿಸಿದ ಮೆಗಾಸ್ಟಾರ್ ಚಿರಂಜೀವಿ
ಚಿರಂಜೀವಿ
ನಯನಾ ರಾಜೀವ್
|

Updated on: Oct 23, 2023 | 12:58 PM

Share

ಚಿತ್ರರಂಗದ ಹಿನ್ನೆಲೆಯಿಲ್ಲದೆ ಸ್ವಂತ ಪ್ರಯತ್ನದಿಂದ ಮೆಗಾಸ್ಟಾರ್ ಎನಿಸಿಕೊಂಡಿರುವ ನಾಯಕ ಚಿರಂಜೀವಿ(Chiranjeevi). ತಮ್ಮ ಅಭಿನಯದಿಂದ ಕೋಟಿಗಟ್ಟಲೆ ಜನರ ಮೆಚ್ಚುಗೆಯನ್ನು ಗಳಿಸಿದ್ದಾರೆ. ಸಾಕಷ್ಟು ನಟರಿಗೆ ಚಿರಂಜೀವಿ ಸ್ಫೂರ್ತಿ ಕೂಡ. ಸಿನಿಮಾಗಳ ಹೊರತಾಗಿಯೂ ಚಿರಂಜೀವಿ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಯಾರೇ ಕಷ್ಟದಲ್ಲಿದ್ದೇವೆ ಎಂದು ಕೇಳಿದರೂ ಕೂಡಲೇ ಅವರಿಗೆ ಸಹಾಯ ಮಾಡುವ ಮನೋಭಾವ ಅವರದ್ದು.

ಕೊರೊನಾ ಸಮಯದಲ್ಲಿ ಆಕ್ಸಿಜನ್ ಬ್ಯಾಂಕ್​ಗಳನ್ನು ಸ್ಥಾಪಿಸಿದ್ದರು. ಅಷ್ಟೇ ಅಲ್ಲ ಕಷ್ಟದಲ್ಲಿರುವ ಸಹ ನಟ ನಟರು, ಅಭಿಮಾನಿಗಳಿಗೆ ಸಾಕಷ್ಟು ಬಾರಿ ಸಹಾಯ ಮಾಡಿರುವ ನಿದರ್ಶನಗಳೂ ಇವೆ. ಇದೀಗ ಚಿರಂಜೀವಿಯವರು ತಮ್ಮ 157ನೇ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಅದರ ನಡುವೆಯೇ ಹೈದರಾಬಾದ್​ನ ಅಪೋಲೊ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದಾರೆ. ದಂಪತಿಯೊಂದಿಗೆ ಚಿರಂಜೀವಿ ತೆಗೆಸಿಕೊಂಡಿರುವ ಫೋಟೊ ಎಲ್ಲೆಡೆ ವೈರಲ್ ಆಗಿದೆ.

ಆದರೆ ಅವರು ಮತ್ಯಾರು ಅಲ್ಲ ಚಿರಂಜೀವಿ ಅವರ ಬಾಲ್ಯ ಸ್ನೇಹಿತ. ಮೊಗಲೂರಿನಲ್ಲಿ ಹುಟ್ಟಿ ಬೆಳೆದ ಚಿರಂಜೀವಿಗೆ ಸಾಕಷ್ಟು ಸ್ನೇಹಿತರಿದ್ದಾರೆ. ಅವರಲ್ಲಿ ಓರ್ವರು ಪುವ್ವಾಡ ರಾಜ. ಈಗ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ, ಇದನ್ನು ತಿಳಿದ ಚಿರಂಜೀವಿ ತಕ್ಷಣವೇ ಆಸ್ಪತ್ರೆಗೆ ಧಾವಿಸಿ ಸ್ನೇಹಿತನಿಗೆ ಸಹಾಯ ಮಾಡಿದ್ದಾರೆ.

ಮತ್ತಷ್ಟು ಓದಿ: ಚಿರಂಜೀವಿಗೆ ಸಂಭಾವನೆ ಕೊಡಲು ಮನೆ ಮಾರಿಕೊಂಡ್ರಾ ನಿರ್ಮಾಪಕರು? ಕೊನೆಗೂ ಸಿಕ್ತು ಸ್ಪಷ್ಟನೆ

ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿ ತನ್ನ ಸ್ನೇಹಿತನಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಅವರ ಯೋಗಕ್ಷೇಮ ವಿಚಾರಿಸಿದರು. ಮೇಲಾಗಿ ವೈದ್ಯರೊಂದಿಗೆ ಮಾತನಾಡಿ ಚಿಕಿತ್ಸೆಯ ವಿವರಗಳನ್ನು ಕೇಳಿದರು. ಸದ್ಯ ಚಿರಂಜೀವಿ ಅವರ ಈ ಫೋಟೋಗಳು ವೈರಲ್ ಆಗುತ್ತಿವೆ. ಇವುಗಳನ್ನು ನೋಡಿದ ಅಭಿಮಾನಿಗಳು ಅಣ್ಣನ್ನ ಮನಸು ಬಂಗಾರ, ನೀವು ನಿಜವಾದ ಹೀರೋ ಎಂದು ಕಮೆಂಟ್​ಗಳ ಸುರಿಮಳೆಗೈಯ್ಯುತ್ತಿದ್ದಾರೆ.

ಈ ಹಿಂದೆ ಸಹನಟ ಪೊನ್ನಂ ಬಾಲನ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದ ಅವರು ಚೆನ್ನೈ ಅಪೋಲೋ ಆಸ್ಪತ್ರೆಯಲ್ಲಿ 40 ಲಕ್ಷ ರೂ ಕೊಟ್ಟು ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದರು.

ಮನರಂಜನೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್