AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯದ ಗೆಳೆಯನಿಗೆ ಅನಾರೋಗ್ಯ, ಕೂಡಲೇ ಸಹಾಯಕ್ಕೆ ಧಾವಿಸಿದ ಮೆಗಾಸ್ಟಾರ್ ಚಿರಂಜೀವಿ

ಚಿತ್ರರಂಗದ ಹಿನ್ನೆಲೆಯಿಲ್ಲದೆ ಸ್ವಂತ ಪ್ರಯತ್ನದಿಂದ ಮೆಗಾಸ್ಟಾರ್ ಎನಿಸಿಕೊಂಡಿರುವ ನಾಯಕ ಚಿರಂಜೀವಿ. ತಮ್ಮ ಅಭಿನಯದಿಂದ ಕೋಟಿಗಟ್ಟಲೆ ಜನರ ಮೆಚ್ಚುಗೆಯನ್ನು ಗಳಿಸಿದ್ದಾರೆ. ಸಾಕಷ್ಟು ನಟರಿಗೆ ಚಿರಂಜೀವಿ ಸ್ಫೂರ್ತಿ ಕೂಡ. ಸಿನಿಮಾಗಳ ಹೊರತಾಗಿಯೂ ಚಿರಂಜೀವಿ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಯಾರೇ ಕಷ್ಟದಲ್ಲಿದ್ದೇವೆ ಎಂದು ಕೇಳಿದರೂ ಕೂಡಲೇ ಅವರಿಗೆ ಸಹಾಯ ಮಾಡುವ ಮನೋಭಾವ ಅವರದ್ದು.

ಬಾಲ್ಯದ ಗೆಳೆಯನಿಗೆ ಅನಾರೋಗ್ಯ, ಕೂಡಲೇ ಸಹಾಯಕ್ಕೆ ಧಾವಿಸಿದ ಮೆಗಾಸ್ಟಾರ್ ಚಿರಂಜೀವಿ
ಚಿರಂಜೀವಿ
ನಯನಾ ರಾಜೀವ್
|

Updated on: Oct 23, 2023 | 12:58 PM

Share

ಚಿತ್ರರಂಗದ ಹಿನ್ನೆಲೆಯಿಲ್ಲದೆ ಸ್ವಂತ ಪ್ರಯತ್ನದಿಂದ ಮೆಗಾಸ್ಟಾರ್ ಎನಿಸಿಕೊಂಡಿರುವ ನಾಯಕ ಚಿರಂಜೀವಿ(Chiranjeevi). ತಮ್ಮ ಅಭಿನಯದಿಂದ ಕೋಟಿಗಟ್ಟಲೆ ಜನರ ಮೆಚ್ಚುಗೆಯನ್ನು ಗಳಿಸಿದ್ದಾರೆ. ಸಾಕಷ್ಟು ನಟರಿಗೆ ಚಿರಂಜೀವಿ ಸ್ಫೂರ್ತಿ ಕೂಡ. ಸಿನಿಮಾಗಳ ಹೊರತಾಗಿಯೂ ಚಿರಂಜೀವಿ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಯಾರೇ ಕಷ್ಟದಲ್ಲಿದ್ದೇವೆ ಎಂದು ಕೇಳಿದರೂ ಕೂಡಲೇ ಅವರಿಗೆ ಸಹಾಯ ಮಾಡುವ ಮನೋಭಾವ ಅವರದ್ದು.

ಕೊರೊನಾ ಸಮಯದಲ್ಲಿ ಆಕ್ಸಿಜನ್ ಬ್ಯಾಂಕ್​ಗಳನ್ನು ಸ್ಥಾಪಿಸಿದ್ದರು. ಅಷ್ಟೇ ಅಲ್ಲ ಕಷ್ಟದಲ್ಲಿರುವ ಸಹ ನಟ ನಟರು, ಅಭಿಮಾನಿಗಳಿಗೆ ಸಾಕಷ್ಟು ಬಾರಿ ಸಹಾಯ ಮಾಡಿರುವ ನಿದರ್ಶನಗಳೂ ಇವೆ. ಇದೀಗ ಚಿರಂಜೀವಿಯವರು ತಮ್ಮ 157ನೇ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಅದರ ನಡುವೆಯೇ ಹೈದರಾಬಾದ್​ನ ಅಪೋಲೊ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದಾರೆ. ದಂಪತಿಯೊಂದಿಗೆ ಚಿರಂಜೀವಿ ತೆಗೆಸಿಕೊಂಡಿರುವ ಫೋಟೊ ಎಲ್ಲೆಡೆ ವೈರಲ್ ಆಗಿದೆ.

ಆದರೆ ಅವರು ಮತ್ಯಾರು ಅಲ್ಲ ಚಿರಂಜೀವಿ ಅವರ ಬಾಲ್ಯ ಸ್ನೇಹಿತ. ಮೊಗಲೂರಿನಲ್ಲಿ ಹುಟ್ಟಿ ಬೆಳೆದ ಚಿರಂಜೀವಿಗೆ ಸಾಕಷ್ಟು ಸ್ನೇಹಿತರಿದ್ದಾರೆ. ಅವರಲ್ಲಿ ಓರ್ವರು ಪುವ್ವಾಡ ರಾಜ. ಈಗ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ, ಇದನ್ನು ತಿಳಿದ ಚಿರಂಜೀವಿ ತಕ್ಷಣವೇ ಆಸ್ಪತ್ರೆಗೆ ಧಾವಿಸಿ ಸ್ನೇಹಿತನಿಗೆ ಸಹಾಯ ಮಾಡಿದ್ದಾರೆ.

ಮತ್ತಷ್ಟು ಓದಿ: ಚಿರಂಜೀವಿಗೆ ಸಂಭಾವನೆ ಕೊಡಲು ಮನೆ ಮಾರಿಕೊಂಡ್ರಾ ನಿರ್ಮಾಪಕರು? ಕೊನೆಗೂ ಸಿಕ್ತು ಸ್ಪಷ್ಟನೆ

ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿ ತನ್ನ ಸ್ನೇಹಿತನಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಅವರ ಯೋಗಕ್ಷೇಮ ವಿಚಾರಿಸಿದರು. ಮೇಲಾಗಿ ವೈದ್ಯರೊಂದಿಗೆ ಮಾತನಾಡಿ ಚಿಕಿತ್ಸೆಯ ವಿವರಗಳನ್ನು ಕೇಳಿದರು. ಸದ್ಯ ಚಿರಂಜೀವಿ ಅವರ ಈ ಫೋಟೋಗಳು ವೈರಲ್ ಆಗುತ್ತಿವೆ. ಇವುಗಳನ್ನು ನೋಡಿದ ಅಭಿಮಾನಿಗಳು ಅಣ್ಣನ್ನ ಮನಸು ಬಂಗಾರ, ನೀವು ನಿಜವಾದ ಹೀರೋ ಎಂದು ಕಮೆಂಟ್​ಗಳ ಸುರಿಮಳೆಗೈಯ್ಯುತ್ತಿದ್ದಾರೆ.

ಈ ಹಿಂದೆ ಸಹನಟ ಪೊನ್ನಂ ಬಾಲನ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದ ಅವರು ಚೆನ್ನೈ ಅಪೋಲೋ ಆಸ್ಪತ್ರೆಯಲ್ಲಿ 40 ಲಕ್ಷ ರೂ ಕೊಟ್ಟು ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದರು.

ಮನರಂಜನೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ