Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯದ ಗೆಳೆಯನಿಗೆ ಅನಾರೋಗ್ಯ, ಕೂಡಲೇ ಸಹಾಯಕ್ಕೆ ಧಾವಿಸಿದ ಮೆಗಾಸ್ಟಾರ್ ಚಿರಂಜೀವಿ

ಚಿತ್ರರಂಗದ ಹಿನ್ನೆಲೆಯಿಲ್ಲದೆ ಸ್ವಂತ ಪ್ರಯತ್ನದಿಂದ ಮೆಗಾಸ್ಟಾರ್ ಎನಿಸಿಕೊಂಡಿರುವ ನಾಯಕ ಚಿರಂಜೀವಿ. ತಮ್ಮ ಅಭಿನಯದಿಂದ ಕೋಟಿಗಟ್ಟಲೆ ಜನರ ಮೆಚ್ಚುಗೆಯನ್ನು ಗಳಿಸಿದ್ದಾರೆ. ಸಾಕಷ್ಟು ನಟರಿಗೆ ಚಿರಂಜೀವಿ ಸ್ಫೂರ್ತಿ ಕೂಡ. ಸಿನಿಮಾಗಳ ಹೊರತಾಗಿಯೂ ಚಿರಂಜೀವಿ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಯಾರೇ ಕಷ್ಟದಲ್ಲಿದ್ದೇವೆ ಎಂದು ಕೇಳಿದರೂ ಕೂಡಲೇ ಅವರಿಗೆ ಸಹಾಯ ಮಾಡುವ ಮನೋಭಾವ ಅವರದ್ದು.

ಬಾಲ್ಯದ ಗೆಳೆಯನಿಗೆ ಅನಾರೋಗ್ಯ, ಕೂಡಲೇ ಸಹಾಯಕ್ಕೆ ಧಾವಿಸಿದ ಮೆಗಾಸ್ಟಾರ್ ಚಿರಂಜೀವಿ
ಚಿರಂಜೀವಿ
Follow us
ನಯನಾ ರಾಜೀವ್
|

Updated on: Oct 23, 2023 | 12:58 PM

ಚಿತ್ರರಂಗದ ಹಿನ್ನೆಲೆಯಿಲ್ಲದೆ ಸ್ವಂತ ಪ್ರಯತ್ನದಿಂದ ಮೆಗಾಸ್ಟಾರ್ ಎನಿಸಿಕೊಂಡಿರುವ ನಾಯಕ ಚಿರಂಜೀವಿ(Chiranjeevi). ತಮ್ಮ ಅಭಿನಯದಿಂದ ಕೋಟಿಗಟ್ಟಲೆ ಜನರ ಮೆಚ್ಚುಗೆಯನ್ನು ಗಳಿಸಿದ್ದಾರೆ. ಸಾಕಷ್ಟು ನಟರಿಗೆ ಚಿರಂಜೀವಿ ಸ್ಫೂರ್ತಿ ಕೂಡ. ಸಿನಿಮಾಗಳ ಹೊರತಾಗಿಯೂ ಚಿರಂಜೀವಿ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಯಾರೇ ಕಷ್ಟದಲ್ಲಿದ್ದೇವೆ ಎಂದು ಕೇಳಿದರೂ ಕೂಡಲೇ ಅವರಿಗೆ ಸಹಾಯ ಮಾಡುವ ಮನೋಭಾವ ಅವರದ್ದು.

ಕೊರೊನಾ ಸಮಯದಲ್ಲಿ ಆಕ್ಸಿಜನ್ ಬ್ಯಾಂಕ್​ಗಳನ್ನು ಸ್ಥಾಪಿಸಿದ್ದರು. ಅಷ್ಟೇ ಅಲ್ಲ ಕಷ್ಟದಲ್ಲಿರುವ ಸಹ ನಟ ನಟರು, ಅಭಿಮಾನಿಗಳಿಗೆ ಸಾಕಷ್ಟು ಬಾರಿ ಸಹಾಯ ಮಾಡಿರುವ ನಿದರ್ಶನಗಳೂ ಇವೆ. ಇದೀಗ ಚಿರಂಜೀವಿಯವರು ತಮ್ಮ 157ನೇ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಅದರ ನಡುವೆಯೇ ಹೈದರಾಬಾದ್​ನ ಅಪೋಲೊ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದಾರೆ. ದಂಪತಿಯೊಂದಿಗೆ ಚಿರಂಜೀವಿ ತೆಗೆಸಿಕೊಂಡಿರುವ ಫೋಟೊ ಎಲ್ಲೆಡೆ ವೈರಲ್ ಆಗಿದೆ.

ಆದರೆ ಅವರು ಮತ್ಯಾರು ಅಲ್ಲ ಚಿರಂಜೀವಿ ಅವರ ಬಾಲ್ಯ ಸ್ನೇಹಿತ. ಮೊಗಲೂರಿನಲ್ಲಿ ಹುಟ್ಟಿ ಬೆಳೆದ ಚಿರಂಜೀವಿಗೆ ಸಾಕಷ್ಟು ಸ್ನೇಹಿತರಿದ್ದಾರೆ. ಅವರಲ್ಲಿ ಓರ್ವರು ಪುವ್ವಾಡ ರಾಜ. ಈಗ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ, ಇದನ್ನು ತಿಳಿದ ಚಿರಂಜೀವಿ ತಕ್ಷಣವೇ ಆಸ್ಪತ್ರೆಗೆ ಧಾವಿಸಿ ಸ್ನೇಹಿತನಿಗೆ ಸಹಾಯ ಮಾಡಿದ್ದಾರೆ.

ಮತ್ತಷ್ಟು ಓದಿ: ಚಿರಂಜೀವಿಗೆ ಸಂಭಾವನೆ ಕೊಡಲು ಮನೆ ಮಾರಿಕೊಂಡ್ರಾ ನಿರ್ಮಾಪಕರು? ಕೊನೆಗೂ ಸಿಕ್ತು ಸ್ಪಷ್ಟನೆ

ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿ ತನ್ನ ಸ್ನೇಹಿತನಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಅವರ ಯೋಗಕ್ಷೇಮ ವಿಚಾರಿಸಿದರು. ಮೇಲಾಗಿ ವೈದ್ಯರೊಂದಿಗೆ ಮಾತನಾಡಿ ಚಿಕಿತ್ಸೆಯ ವಿವರಗಳನ್ನು ಕೇಳಿದರು. ಸದ್ಯ ಚಿರಂಜೀವಿ ಅವರ ಈ ಫೋಟೋಗಳು ವೈರಲ್ ಆಗುತ್ತಿವೆ. ಇವುಗಳನ್ನು ನೋಡಿದ ಅಭಿಮಾನಿಗಳು ಅಣ್ಣನ್ನ ಮನಸು ಬಂಗಾರ, ನೀವು ನಿಜವಾದ ಹೀರೋ ಎಂದು ಕಮೆಂಟ್​ಗಳ ಸುರಿಮಳೆಗೈಯ್ಯುತ್ತಿದ್ದಾರೆ.

ಈ ಹಿಂದೆ ಸಹನಟ ಪೊನ್ನಂ ಬಾಲನ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದ ಅವರು ಚೆನ್ನೈ ಅಪೋಲೋ ಆಸ್ಪತ್ರೆಯಲ್ಲಿ 40 ಲಕ್ಷ ರೂ ಕೊಟ್ಟು ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದರು.

ಮನರಂಜನೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ