AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣನ ಅವತಾರದಲ್ಲಿರುವ ಈ ಬಾಲಕ ಈಗ ಪ್ಯಾನ್ ಇಂಡಿಯಾ ಸ್ಟಾರ್..

ಈ ಹೀರೋ ದೇಶ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಹೀರೋನ ಸಿನಿಮಾಗಳಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಾರೆ.

ಕೃಷ್ಣನ ಅವತಾರದಲ್ಲಿರುವ ಈ ಬಾಲಕ ಈಗ ಪ್ಯಾನ್ ಇಂಡಿಯಾ ಸ್ಟಾರ್..
ಸ್ಟಾರ್ ಹೀರೋನ ಬಾಲ್ಯದ ಫೋಟೋ
ರಾಜೇಶ್ ದುಗ್ಗುಮನೆ
|

Updated on: Jun 19, 2023 | 10:16 AM

Share

ಇತ್ತೀಚೆಗೆ ಸ್ಟಾರ್ ಹೀರೋ-ಹೀರೋಯಿನ್​ಗಳ ಬಾಲ್ಯದ ಫೋಟೋಗಳು ವೈರಲ್ ಆಗುತ್ತಿವೆ. ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಫೋಟೋ ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಮೇಲಿರುವ ಫೋಟೋದಲ್ಲಿ ಇರುವ ಈ ಬಾಲಕ ಈಗ ಸೌತ್ ಇಂಡಸ್ಟ್ರಿಯ (South Industry) ಸ್ಟಾರ್ ಹೀರೋ. ತಮಿಳು ಸಿನಿಮಾಗಳಲ್ಲಿ ನಟಿಸಿದರೂ ದೇಶ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಹೀರೋನ ಸಿನಿಮಾಗಳಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಾರೆ. ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ನಾಯಕನಾಗಿ ಮುಂದುವರಿದಿದ್ದಾರೆ. 48ರ ಹರೆಯದಲ್ಲೂ 27ರ ಹರೆಯದ ಯುವಕನಾಗಿ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಅವರು ಬೇರಾರು ಅಲ್ಲ ದಳಪತಿ ವಿಜಯ್ (Thalapathy Vijay). ಕಾಲಿವುಡ್​​ನಲ್ಲಿ ಟಾಪ್ ಹೀರೋ. ಅವರ ಬಾಲ್ಯದ ಫೋಟೋ ವೈರಲ್ ಆಗಿದೆ.

ವಿಜಯ್ ಜೂನ್ 22, 1974ರಂದು ಜನಿಸಿದರು. ಇನ್ನು ಕೆಲವೇ ದಿನಗಳಲ್ಲಿ ಅವರು ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ವಿಜಯ್ ತಂದೆ ಎಸ್.ಎ. ಚಂದ್ರಶೇಖರ್, ತಾಯಿ ಶೋಭಾ. ಇಬ್ಬರಿಗೂ ಚಿತ್ರರಂಗದ ಹಿನ್ನೆಲೆ ಇದೆ. 90ರ ದಶಕದಲ್ಲಿ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿ ವಿಜಯ್ ಗಮನ ಸೆಳೆದರು. ಈಗ ಅವರ ಬಾಲ್ಯದ ಫೋಟೋ ವೈರಲ್ ಆಗಿವೆ.

ತಮಿಳಿನಲ್ಲಿ ವಿಜಯ್ ಅಭಿನಯದ ಚಿತ್ರಗಳು ತೆಲುಗಿನಲ್ಲೂ ಡಬ್ ಆಗಿ ಸೂಪರ್ ಹಿಟ್ ಆದವು. ತೆಲುಗಿನಲ್ಲೂ ಅವರಿಗೆ ಒಳ್ಳೆಯ ಫ್ಯಾನ್ ಫಾಲೋಯಿಂಗ್ ಇದೆ. ಕರ್ನಾಟಕದಲ್ಲೂ ವಿಜಯ್ ಅಭಿಮಾನಿಗಳನ್ನು ಹೊಂದಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ‘ವಾರಿಸು’ ಸಿನಿಮಾ ಸೂಪರ್ ಹಿಟ್ ಆಯಿತು. ಈಗ ‘ಲಿಯೋ’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ನಿರ್ದೇಶಕ ಲೊಕೇಶ್ ಕನಗರಾಜ್ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದು, ತ್ರಿಷಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಸುಮಾರು 17 ವರ್ಷಗಳ ನಂತರ ತ್ರಿಷಾ ಮತ್ತು ವಿಜಯ್ ಈ ಚಿತ್ರಕ್ಕಾಗಿ ಜೊತೆಗಿದ್ದು, ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ: ರಾಜಕೀಯಕ್ಕೆ ದಳಪತಿ ವಿಜಯ್ ಎಂಟ್ರಿ ಖಚಿತ? 234 ವಿಧಾನಸಭಾ ಕ್ಷೇತ್ರಗಳ ಗುರಿ ಇಟ್ಟುಕೊಂಡ ನಟ

ವಿಜಯ್ ರಾಜಕೀಯಕ್ಕೆ ಬರುತ್ತಾರೆ ಎನ್ನುವ ಮಾತು ಜೋರಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಹತ್ತನೇ ತರಗತಿ ಹಾಗೂ 12ನೇ ತರಗತಿಯ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದವರನ್ನು ಸನ್ಮಾನಿಸಲಾಗಿದೆ. ಕ್ಷೇತ್ರಾವಾರು ರೀತಿಯಲ್ಲಿ ಇವರನ್ನು ಸನ್ಮಾನಿಸಲಾಗಿದ್ದು, ಸಾಕಷ್ಟು ಕುತೂಹಲ ಹುಟ್ಟುಹಾಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?