AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎ.ಆರ್​. ರೆಹಮಾನ್​ ಪುತ್ರಿ ಖತಿಜಾ ಮದುವೆ; ಅಳಿಯ ರಿಯಾಸ್ದೀನ್​ ಶೇಖ್​ ಮೊಹಮ್ಮದ್​ ಹಿನ್ನೆಲೆ ಏನು?

A R Rahman Daughter Marriage: ಎ.ಆರ್​. ರೆಹಮಾನ್​ ಮಗಳು ಖತಿಜಾ ರೆಹಮಾನ್​ ಮದುವೆ ನೆರವೇರಿದೆ. ಕುಟುಂಬದವರು ಮತ್ತು ಆಪ್ತರು ಮಾತ್ರ ಈ ಸಮಾರಂಭದಲ್ಲಿ ಭಾಗಿ ಆಗಿದ್ದರು.

ಎ.ಆರ್​. ರೆಹಮಾನ್​ ಪುತ್ರಿ ಖತಿಜಾ ಮದುವೆ; ಅಳಿಯ ರಿಯಾಸ್ದೀನ್​ ಶೇಖ್​ ಮೊಹಮ್ಮದ್​ ಹಿನ್ನೆಲೆ ಏನು?
ಎ.ಆರ್. ರೆಹಮಾನ್ ಕುಟುಂಬ
TV9 Web
| Edited By: |

Updated on: May 06, 2022 | 9:00 AM

Share

ಖ್ಯಾತ ಸಂಗೀತ ನಿರ್ದೇಶಕ ಎ.ಆರ್​. ರೆಹಮಾನ್ (A R Rahman)​ ಅವರು ತಮ್ಮ ಕುಟುಂಬದ ವಿಚಾರವನ್ನು ಸಾಧ್ಯವಾದಷ್ಟು ಖಾಸಗಿಯಾಗಿ ಇರುವಂತೆ ನೋಡಿಕೊಳ್ಳುತ್ತಾರೆ. ಈಗ ಅವರ ಮಗಳ ಮದುವೆ ಕೂಡ ಸದ್ದಿಲ್ಲದೇ ನಡೆದಿದೆ. ಎ.ಆರ್​. ರೆಹಮಾನ್ ಪುತ್ರಿ ಖತಿಜಾ ರೆಹಮಾನ್​ (Khatija Rahman) ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಗಳ ಮದುವೆಯ ನಂತರ ಕ್ಲಿಕ್ಕಿಸಿದ ಫೋಟೋವನ್ನು ಎ.ಆರ್​. ರೆಹಮಾನ್ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಅಭಿಮಾನಿಗಳ ವಲಯದಲ್ಲಿ ಈ ಫೋಟೋ ವೈರಲ್​ ಆಗಿದೆ. ರಿಯಾಸ್ದೀನ್​ ಶೇಖ್​ ಮೊಹಮ್ಮದ್ (Riyasdeen Shaik Mohamed) ಜೊತೆ ಖತಿಜಾ ರೆಹಮಾನ್​ ಅವರು ಜೀವನದ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಕುಟುಂಬದವರು ಮತ್ತು ಆಪ್ತರು ಮಾತ್ರ ಈ ವಿವಾಹ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ. 2021ರ ಡಿಸೆಂಬರ್​ 29ರಂದು ರಿಯಾಸ್ದೀನ್​ ಶೇಖ್​ ಮೊಹಮ್ಮದ್ ಮತ್ತು ಖತಿಜಾ ರೆಹಮಾನ್​ ನಿಶ್ಚಿತಾರ್ಥ ನೆರವೇರಿತ್ತು. ಈಗ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನವದಂಪತಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಎ.ಆರ್​. ರೆಹಮಾನ್​ ಪುತ್ರಿಯ ಕೈ ಹಿಡಿದಿರುವ ರಿಯಾಸ್ದೀನ್​ ಶೇಖ್​ ಮೊಹಮ್ಮದ್ ಅವರ ಹಿನ್ನೆಲೆ ತಿಳಿಯಲು ಫ್ಯಾನ್ಸ್​ ಹಂಬಲಿಸಿದ್ದಾರೆ. ಆ ಕುರಿತು ಇಲ್ಲಿದೆ ಮಾಹಿತಿ..

ಎ.ಆರ್. ರೆಹಮಾನ್​ ಅವರದ್ದು ಸಂಗೀತದ ಹಿನ್ನೆಲೆಯ ಕುಟುಂಬ. ಅವರ ಅಳಿಯ ರಿಯಾಸ್ದೀನ್​ ಶೇಖ್​ ಮೊಹಮ್ಮದ್ ಕೂಡ ಸಂಗೀತವನ್ನೇ ವೃತ್ತಿಯಾಗಿಸಿಕೊಂಡಿದ್ದಾರೆ. ಅವರು ಸೌಂಡ್​ ಇಂಜಿನಿಯರ್​ ಆಗಿ ಕೆಲಸ ಮಾಡುತ್ತಿದ್ದಾರೆ. ತಮ್ಮದೇ ಸ್ಟುಡಿಯೋ ಹೊಂದಿರುವ ಅವರು ಬ್ಯುಸಿ ಆಗಿದ್ದಾರೆ. ಎ.ಆರ್​. ರೆಹಮಾನ್​ ಅವರ ಅನೇಕ ಲೈವ್​ ಸಂಗೀತ ಸಮಾರಂಭಗಳಲ್ಲಿ ರಿಯಾಸ್ದೀನ್​ ಶೇಖ್​ ಮೊಹಮ್ಮದ್ ಅವರು ಸೌಂಡ್​ ಇಂಜಿನಿಯರ್​ ಆಗಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ
Image
‘ವಿಲ್ ಸ್ಮಿತ್​ ಒಳ್ಳೆಯ ವ್ಯಕ್ತಿ’; ಸಂಗೀತ ನಿರ್ದೇಶಕ ಎ.ಆರ್​​. ರೆಹಮಾನ್ ಮೆಚ್ಚುಗೆಯ ಮಾತು
Image
ಮನೆಯಲ್ಲಿದ್ದ ಆಸ್ಕರ್​ ಟ್ರೋಫಿ ಕಳೆದುಹಾಕಿದ್ದ ಎ.ಆರ್​. ರೆಹಮಾನ್​; ಸಂಗೀತ ನಿರ್ದೇಶಕನ ಸಿನಿ ಪಯಣಕ್ಕೆ 29 ವರ್ಷ
Image
ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್​ಗೆ 54ನೇ ಹುಟ್ಟುಹಬ್ಬದ ಸಂಭ್ರಮ
Image
ಸಂಗೀತ ಸಂಯೋಜಕ, ಗಾಯಕ ಎ.ಆರ್. ರೆಹಮಾನ್​ಗೆ ಮಾತೃ ವಿಯೋಗ

ಖತಿಜಾ ರೆಹಮಾನ್ ಅವರು ಕೂಡ ಸಂಗೀತದಲ್ಲಿ ಪಳಗಿದ್ದಾರೆ. ಅನೇಕ ಸಿನಿಮಾ ಗೀತೆಗಳನ್ನು ಅವರು ಹಾಡಿದ್ದಾರೆ. ಮಗಳ ಮದುವೆಯ ಖುಷಿಯ ಕ್ಷಣಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿರುವ ಎ.ಆರ್​. ರೆಹಮಾನ್​ ಅವರು ಎಲ್ಲರ ಶುಭ ಹಾರೈಕೆ ಬೇಡಿದ್ದಾರೆ. ‘ಈ ದಂಪತಿ ಮೇಲೆ ದೇವರ ಕೃಪೆ ಇರಲಿ. ನಿಮ್ಮೆಲ್ಲರ ಪ್ರೀತಿ ಮತ್ತು ಶುಭ ಹಾರೈಕೆಗಳಿಗಾಗಿ ಮುಂಚಿತವಾಗಿಯೇ ಧನ್ಯವಾದಗಳು’ ಎಂದು ಎ.ಆರ್​. ರೆಹಮಾನ್​ ಬರೆದುಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ಈ ಫೋಟೋದ ಹಿನ್ನೆಲೆಯಲ್ಲಿ ಅವರ ತಾಯಿ ಕರೀಮಾ ಬೇಗಂ ಅವರ ಭಾವಚಿತ್ರ ಕೂಡ ಹೈಲೈಟ್​ ಆಗಿದೆ. 2020ರಲ್ಲಿ ಕರೀಮಾ ಬೇಗಂ ನಿಧನ ಹೊಂದಿದ್ದು ರೆಹಮಾನ್​ ಕುಟುಂಬಕ್ಕೆ ತೀವ್ರ ನೋವು ಉಂಟು ಮಾಡಿತ್ತು. ಈಗ ಅವರ ಭಾವಚಿತ್ರದ ಎದುರು ಆಶೀರ್ವಾದ ಪಡೆದು ಖತಿಜಾ ಹಾಗೂ ರಿಯಾಸ್ದೀನ್​ ಶೇಖ್​ ಮೊಹಮ್ಮದ್​​ ಅವರು ದಾಂಪತ್ಯ ಜೀವನ ಆರಂಭಿಸಿದ್ದಾರೆ.

ಮದುವೆ ನಂತರದ ಫೋಟೋ ಹಂಚಿಕೊಂಡಿರುವ ಖತಿಜಾ ರೆಹಮಾನ್ ಅವರು, ‘ಇದು ನನ್ನ ಜೀವನದ ಬಹುನಿರೀಕ್ಷಿತ ದಿನ’ ಎಂದು ಬರೆದುಕೊಂಡಿದ್ದಾರೆ. ಖತಿಜಾ ಮತ್ತು ರಿಯಾಸ್ದೀನ್​ ಶೇಖ್​ ಮೊಹಮ್ಮದ್​ ಅವರಿಗೆ ಅನೇಕರು ಅಭಿನಂದನೆ ತಿಳಿಸಿದ್ದಾರೆ. ಗಾಯಕರಾದ ನೀತಿ ಮೋಹನ್​, ಚಿನ್ಮಯಿ ಶ್ರೀಪಾದ​, ಹರ್ಷದೀಪ್​ ಖೌರ್​, ಶ್ರೇಯಾ ಘೋಷಾಲ್​ ಸೇರಿದಂತೆ ಸಂಗೀತ ಲೋಕದ ಹಲವರು ಶುಭ ಹಾರೈಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್