ಎ.ಆರ್​. ರೆಹಮಾನ್​ ಪುತ್ರಿ ಖತಿಜಾ ಮದುವೆ; ಅಳಿಯ ರಿಯಾಸ್ದೀನ್​ ಶೇಖ್​ ಮೊಹಮ್ಮದ್​ ಹಿನ್ನೆಲೆ ಏನು?

A R Rahman Daughter Marriage: ಎ.ಆರ್​. ರೆಹಮಾನ್​ ಮಗಳು ಖತಿಜಾ ರೆಹಮಾನ್​ ಮದುವೆ ನೆರವೇರಿದೆ. ಕುಟುಂಬದವರು ಮತ್ತು ಆಪ್ತರು ಮಾತ್ರ ಈ ಸಮಾರಂಭದಲ್ಲಿ ಭಾಗಿ ಆಗಿದ್ದರು.

ಎ.ಆರ್​. ರೆಹಮಾನ್​ ಪುತ್ರಿ ಖತಿಜಾ ಮದುವೆ; ಅಳಿಯ ರಿಯಾಸ್ದೀನ್​ ಶೇಖ್​ ಮೊಹಮ್ಮದ್​ ಹಿನ್ನೆಲೆ ಏನು?
ಎ.ಆರ್. ರೆಹಮಾನ್ ಕುಟುಂಬ
Follow us
| Updated By: ಮದನ್​ ಕುಮಾರ್​

Updated on: May 06, 2022 | 9:00 AM

ಖ್ಯಾತ ಸಂಗೀತ ನಿರ್ದೇಶಕ ಎ.ಆರ್​. ರೆಹಮಾನ್ (A R Rahman)​ ಅವರು ತಮ್ಮ ಕುಟುಂಬದ ವಿಚಾರವನ್ನು ಸಾಧ್ಯವಾದಷ್ಟು ಖಾಸಗಿಯಾಗಿ ಇರುವಂತೆ ನೋಡಿಕೊಳ್ಳುತ್ತಾರೆ. ಈಗ ಅವರ ಮಗಳ ಮದುವೆ ಕೂಡ ಸದ್ದಿಲ್ಲದೇ ನಡೆದಿದೆ. ಎ.ಆರ್​. ರೆಹಮಾನ್ ಪುತ್ರಿ ಖತಿಜಾ ರೆಹಮಾನ್​ (Khatija Rahman) ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಗಳ ಮದುವೆಯ ನಂತರ ಕ್ಲಿಕ್ಕಿಸಿದ ಫೋಟೋವನ್ನು ಎ.ಆರ್​. ರೆಹಮಾನ್ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಅಭಿಮಾನಿಗಳ ವಲಯದಲ್ಲಿ ಈ ಫೋಟೋ ವೈರಲ್​ ಆಗಿದೆ. ರಿಯಾಸ್ದೀನ್​ ಶೇಖ್​ ಮೊಹಮ್ಮದ್ (Riyasdeen Shaik Mohamed) ಜೊತೆ ಖತಿಜಾ ರೆಹಮಾನ್​ ಅವರು ಜೀವನದ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಕುಟುಂಬದವರು ಮತ್ತು ಆಪ್ತರು ಮಾತ್ರ ಈ ವಿವಾಹ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ. 2021ರ ಡಿಸೆಂಬರ್​ 29ರಂದು ರಿಯಾಸ್ದೀನ್​ ಶೇಖ್​ ಮೊಹಮ್ಮದ್ ಮತ್ತು ಖತಿಜಾ ರೆಹಮಾನ್​ ನಿಶ್ಚಿತಾರ್ಥ ನೆರವೇರಿತ್ತು. ಈಗ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನವದಂಪತಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಎ.ಆರ್​. ರೆಹಮಾನ್​ ಪುತ್ರಿಯ ಕೈ ಹಿಡಿದಿರುವ ರಿಯಾಸ್ದೀನ್​ ಶೇಖ್​ ಮೊಹಮ್ಮದ್ ಅವರ ಹಿನ್ನೆಲೆ ತಿಳಿಯಲು ಫ್ಯಾನ್ಸ್​ ಹಂಬಲಿಸಿದ್ದಾರೆ. ಆ ಕುರಿತು ಇಲ್ಲಿದೆ ಮಾಹಿತಿ..

ಎ.ಆರ್. ರೆಹಮಾನ್​ ಅವರದ್ದು ಸಂಗೀತದ ಹಿನ್ನೆಲೆಯ ಕುಟುಂಬ. ಅವರ ಅಳಿಯ ರಿಯಾಸ್ದೀನ್​ ಶೇಖ್​ ಮೊಹಮ್ಮದ್ ಕೂಡ ಸಂಗೀತವನ್ನೇ ವೃತ್ತಿಯಾಗಿಸಿಕೊಂಡಿದ್ದಾರೆ. ಅವರು ಸೌಂಡ್​ ಇಂಜಿನಿಯರ್​ ಆಗಿ ಕೆಲಸ ಮಾಡುತ್ತಿದ್ದಾರೆ. ತಮ್ಮದೇ ಸ್ಟುಡಿಯೋ ಹೊಂದಿರುವ ಅವರು ಬ್ಯುಸಿ ಆಗಿದ್ದಾರೆ. ಎ.ಆರ್​. ರೆಹಮಾನ್​ ಅವರ ಅನೇಕ ಲೈವ್​ ಸಂಗೀತ ಸಮಾರಂಭಗಳಲ್ಲಿ ರಿಯಾಸ್ದೀನ್​ ಶೇಖ್​ ಮೊಹಮ್ಮದ್ ಅವರು ಸೌಂಡ್​ ಇಂಜಿನಿಯರ್​ ಆಗಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ
Image
‘ವಿಲ್ ಸ್ಮಿತ್​ ಒಳ್ಳೆಯ ವ್ಯಕ್ತಿ’; ಸಂಗೀತ ನಿರ್ದೇಶಕ ಎ.ಆರ್​​. ರೆಹಮಾನ್ ಮೆಚ್ಚುಗೆಯ ಮಾತು
Image
ಮನೆಯಲ್ಲಿದ್ದ ಆಸ್ಕರ್​ ಟ್ರೋಫಿ ಕಳೆದುಹಾಕಿದ್ದ ಎ.ಆರ್​. ರೆಹಮಾನ್​; ಸಂಗೀತ ನಿರ್ದೇಶಕನ ಸಿನಿ ಪಯಣಕ್ಕೆ 29 ವರ್ಷ
Image
ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್​ಗೆ 54ನೇ ಹುಟ್ಟುಹಬ್ಬದ ಸಂಭ್ರಮ
Image
ಸಂಗೀತ ಸಂಯೋಜಕ, ಗಾಯಕ ಎ.ಆರ್. ರೆಹಮಾನ್​ಗೆ ಮಾತೃ ವಿಯೋಗ

ಖತಿಜಾ ರೆಹಮಾನ್ ಅವರು ಕೂಡ ಸಂಗೀತದಲ್ಲಿ ಪಳಗಿದ್ದಾರೆ. ಅನೇಕ ಸಿನಿಮಾ ಗೀತೆಗಳನ್ನು ಅವರು ಹಾಡಿದ್ದಾರೆ. ಮಗಳ ಮದುವೆಯ ಖುಷಿಯ ಕ್ಷಣಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿರುವ ಎ.ಆರ್​. ರೆಹಮಾನ್​ ಅವರು ಎಲ್ಲರ ಶುಭ ಹಾರೈಕೆ ಬೇಡಿದ್ದಾರೆ. ‘ಈ ದಂಪತಿ ಮೇಲೆ ದೇವರ ಕೃಪೆ ಇರಲಿ. ನಿಮ್ಮೆಲ್ಲರ ಪ್ರೀತಿ ಮತ್ತು ಶುಭ ಹಾರೈಕೆಗಳಿಗಾಗಿ ಮುಂಚಿತವಾಗಿಯೇ ಧನ್ಯವಾದಗಳು’ ಎಂದು ಎ.ಆರ್​. ರೆಹಮಾನ್​ ಬರೆದುಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ಈ ಫೋಟೋದ ಹಿನ್ನೆಲೆಯಲ್ಲಿ ಅವರ ತಾಯಿ ಕರೀಮಾ ಬೇಗಂ ಅವರ ಭಾವಚಿತ್ರ ಕೂಡ ಹೈಲೈಟ್​ ಆಗಿದೆ. 2020ರಲ್ಲಿ ಕರೀಮಾ ಬೇಗಂ ನಿಧನ ಹೊಂದಿದ್ದು ರೆಹಮಾನ್​ ಕುಟುಂಬಕ್ಕೆ ತೀವ್ರ ನೋವು ಉಂಟು ಮಾಡಿತ್ತು. ಈಗ ಅವರ ಭಾವಚಿತ್ರದ ಎದುರು ಆಶೀರ್ವಾದ ಪಡೆದು ಖತಿಜಾ ಹಾಗೂ ರಿಯಾಸ್ದೀನ್​ ಶೇಖ್​ ಮೊಹಮ್ಮದ್​​ ಅವರು ದಾಂಪತ್ಯ ಜೀವನ ಆರಂಭಿಸಿದ್ದಾರೆ.

ಮದುವೆ ನಂತರದ ಫೋಟೋ ಹಂಚಿಕೊಂಡಿರುವ ಖತಿಜಾ ರೆಹಮಾನ್ ಅವರು, ‘ಇದು ನನ್ನ ಜೀವನದ ಬಹುನಿರೀಕ್ಷಿತ ದಿನ’ ಎಂದು ಬರೆದುಕೊಂಡಿದ್ದಾರೆ. ಖತಿಜಾ ಮತ್ತು ರಿಯಾಸ್ದೀನ್​ ಶೇಖ್​ ಮೊಹಮ್ಮದ್​ ಅವರಿಗೆ ಅನೇಕರು ಅಭಿನಂದನೆ ತಿಳಿಸಿದ್ದಾರೆ. ಗಾಯಕರಾದ ನೀತಿ ಮೋಹನ್​, ಚಿನ್ಮಯಿ ಶ್ರೀಪಾದ​, ಹರ್ಷದೀಪ್​ ಖೌರ್​, ಶ್ರೇಯಾ ಘೋಷಾಲ್​ ಸೇರಿದಂತೆ ಸಂಗೀತ ಲೋಕದ ಹಲವರು ಶುಭ ಹಾರೈಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ