AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡ ಚಿತ್ರರಂಗ ಈಗ ಮೇಲಕ್ಕೇರುತ್ತಿದೆ’; ಹೊಗಳಿದ ಎಆರ್​ ರೆಹಮಾನ್

ಆಸ್ಕರ್ ವಿಜೇತ ಎಆರ್ ರೆಹಮಾನ್ ಕನ್ನಡ ಚಿತ್ರರಂಗವನ್ನು ಹಾಡಿ ಹೊಗಳಿದ್ದಾರೆ. ಸ್ಯಾಂಡಲ್‌ವುಡ್ ಪ್ರಗತಿಯಲ್ಲಿದ್ದು, ಉನ್ನತ ಹಂತಕ್ಕೆ ಏರುತ್ತಿದೆ ಎಂದಿದ್ದಾರೆ. ಕೆಜಿಎಫ್, ಕಾಂತಾರ ಚಿತ್ರಗಳಂತಹ ಜಾಗತಿಕ ಯಶಸ್ಸು ಕನ್ನಡ ಸಿನಿಮಾಗಳ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ರೆಹಮಾನ್ ಅವರ ಮಾತುಗಳು ಕನ್ನಡ ಚಿತ್ರರಂಗದ ಪ್ರಸ್ತುತ ಬೆಳವಣಿಗೆ ಮತ್ತು ಪರಭಾಷಾ ವಲಯದಲ್ಲಿ ಅದರ ಹೆಚ್ಚಿದ ಮನ್ನಣೆಯನ್ನು ಎತ್ತಿ ಹಿಡಿಯುತ್ತವೆ.

‘ಕನ್ನಡ ಚಿತ್ರರಂಗ ಈಗ ಮೇಲಕ್ಕೇರುತ್ತಿದೆ’; ಹೊಗಳಿದ ಎಆರ್​ ರೆಹಮಾನ್
ರೆಹಮಾನ್
ರಾಜೇಶ್ ದುಗ್ಗುಮನೆ
|

Updated on:Nov 29, 2025 | 7:43 AM

Share

ಎಆರ್ ರೆಹಮಾನ್ ಅವರು ಭಾರತ ಚಿತ್ರರಂಗದ ಬೇಡಿಕೆಯ ಮ್ಯೂಸಿಕ್ ಕಂಪೋಸರ್. ಅವರು ಹಲವು ಸೂಪರ್ ಹಿಟ್ ಹಾಡುಗಳನ್ನು ಸಂಯೋಜನೆ ಮಾಡಿದ್ದಾರೆ. ಅವರಿಗೆ ಆಸ್ಕರ್ ಕೂಡ ಸಿಕ್ಕಿದೆ.ಇದು ಅವರು ಮಾಡಿದ ವಿಶೇಷ ಸಾಧನೆಗಳಲ್ಲಿ ಒಂದು. ಅವರು ಕನ್ನಡ ಚಿತ್ರರಂಗದ ಬಗ್ಗೆ ಆಡಿದ ಮಾತು ಈಗ ವೈರಲ್ ಆಗುತ್ತಿದೆ. ಅವರು ಕನ್ನಡ ಚಿತ್ರರಂಗವನ್ನು ಹಾಡಿ ಹೊಗಳಿದ್ದಾರೆ.

ರೆಹಮಾನ್ ಅವರು ತಮಿಳು, ತೆಲುಗು ಹಾಗೂ ಹಿಂದಿ ಸಿನಿಮಾಗಳಿಗೆ ಹೆಚ್ಚಾಗಿ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಹಾಲಿವುಡ್​ನಲ್ಲೂ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅವರು ಬೇರೆ ಭಾಷೆಯ ಸಿನಿಮಾಗಳ ಹಾಡನ್ನು ಕನ್ನಡದಲ್ಲಿ ಮರು ಬಳಕೆ ಮಾಡಿಕೊಳ್ಳಲಾಗಿದೆ. ವಿನೋದ್ ರಾಜ್ ಅವರ ‘ಡ್ಯಾನ್ಸ್ ರಾಜ ಡ್ಯಾನ್ಸ್’ ಸಿನಿಮಾಗೆ ವಿಜಯ್ ಭಾಸ್ಕರ್ ಸಂಗೀತ ಸಂಯೋಜನೆ ಮಾಡಿದ್ದರು. ರೆಹಮಾನ್ ಅವರು ಕೀಬೋರ್ಡ್​ನಲ್ಲಿ ಸಹಾಯ ಮಾಡಿದ್ದರು.

ರೆಹಮಾನ್ ಅವರಿಗೆ ಮೊದಲಿನಿಂದಲೂ ಕನ್ನಡ ಚಿತ್ರರಂಗದ ಪರಿಚಯ ಇದೆ. ಹೀಗಾಗಿ, ಅವರು ಚಿತ್ರರಂಗವನ್ನು ಗಮನಿಸುತ್ತಿದ್ದಾರೆ. ‘ಕನ್ನಡ ಚಿತ್ರರಂಗ ರಾಕಿಂಗ್ ಹಂತದಲ್ಲಿದೆ. ಮೇಲಕ್ಕೆ ಏರುತ್ತಿದೆ’ ಎಂದು ರೆಹಮಾನ್ ಅವರು ಹಾಡಿ ಹೊಗಳಿದ್ದಾರೆ. ಇದು ಅವರು ಯಾವಾಗ ಹೇಳಿದ್ದು ಎಂಬುದರ ಬಗ್ಗೆ ಸ್ಪಷ್ಟನೆ ಇಲ್ಲ.

ರೆಹಮಾನ್ ಕೈಯಲ್ಲಿ 12ಕ್ಕೂ ಅಧಿಕ ಸಿನಿಮಾಗಳಿವೆ. ಈ ಪೈಕಿ ‘ಪೆದ್ದಿ’ ಮುಖ್ಯವಾದುದು. ರಾಮ್ ಚರಣ್-ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ‘ಚಿಕಿರಿ.. ಚಿಕಿರಿ’ ಹಾಡು ಸಾಕಷ್ಟು ಗಮನ ಸೆಳೆದಿದೆ. ಹಿಂದಿಯ ‘ರಾಮಾಯಣ’ ಚಿತ್ರಕ್ಕೂ ಅವರದ್ದೇ ಸಂಗೀತ ಸಂಯೋಜನೆ ಇದೆ. ಇದರಲ್ಲಿ ಯಶ್ ನಟಿಸಿದ್ದಾರೆ. ಅವರು ಹಿಂದಿ ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ.

ಇದನ್ನೂ ಓದಿ: ಬಾಲ್ಯ ಎಷ್ಟು ಕರಾಳವಾಗಿತ್ತು ಎಂಬುದನ್ನು ವಿವರಿಸಿದ ಎಆರ್​ ರೆಹಮಾನ್

ಕನ್ನಡದ ‘ಕೆಜಿಎಫ್’, ‘ಕೆಜಿಎಫ್ 2’, ‘777 ಚಾರ್ಲಿ’, ‘ಕಾಂತಾರ’, ‘ಸು ಫ್ರಮ್ ಸೋ’ ಸೇರಿದಂತೆ ಅನೇಕ ಸಿನಿಮಾಗಳು ಪರಭಾಷೆಯವರನ್ನು ಆಕರ್ಷಿಸಿದೆ. ಈ ಚಿತ್ರಗಳನ್ನು ಪರಭಾಷೆಯವರು ಕೂಡ ಮೆಚ್ಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:40 am, Sat, 29 November 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!