AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amala Paul: ಹಿಂದೂ ಪದ್ಧತಿ ನೆಪ ಹೇಳಿ ನಟಿ ಅಮಲಾ ಪೌಲ್‌ಗೆ ದೇಗುಲ ಪ್ರವೇಶ ನಿರಾಕರಿಸಿದ ಕೇರಳದ ದೇವಾಲಯ

ಕೇರಳದ ಎರ್ನಾಕುಲಂನ ತಿರುವೈರಾಣಿಕುಲಂ ಮಹಾದೇವ ದೇವಸ್ಥಾನದಲ್ಲಿ ತನಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ದಕ್ಷಿಣ ಭಾರತದ ನಟಿ ಅಮಲಾ ಪೌಲ್ ಆರೋಪಿಸಿದ್ದಾರೆ. ತನ್ನ ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ಮಾಡುತ್ತಿದ್ದಾರೆ.

Amala Paul: ಹಿಂದೂ ಪದ್ಧತಿ ನೆಪ ಹೇಳಿ ನಟಿ ಅಮಲಾ ಪೌಲ್‌ಗೆ ದೇಗುಲ ಪ್ರವೇಶ ನಿರಾಕರಿಸಿದ ಕೇರಳದ ದೇವಾಲಯ
Amala Paul
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 18, 2023 | 6:59 PM

ಕೇರಳ : ಕೇರಳದ ಎರ್ನಾಕುಲಂನ ತಿರುವೈರಾಣಿಕುಲಂ (Tiruvairanikulam, Ernakulam) ಮಹಾದೇವ ದೇವಸ್ಥಾನದಲ್ಲಿ ತನಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ದಕ್ಷಿಣ ಭಾರತದ ನಟಿ ಅಮಲಾ ಪೌಲ್ (Amala Paul) ಆರೋಪಿಸಿದ್ದಾರೆ. ತನ್ನ ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಇದೀಗ ಈ ಬಗ್ಗೆ ಟ್ವಿಟರ್​ನಲ್ಲಿ ಹೇಳಿಕೊಂಡಿದ್ದಾರೆ. ಸೋಮವಾರ ನಟಿ ದೇವಸ್ಥಾನಕ್ಕೆ ಭೇಟಿ ನೀಡಿದಾಗ, ಆವರಣದೊಳಗೆ ಹಿಂದೂಗಳಿಗೆ ಮಾತ್ರ ಇಲ್ಲಿಗೆ ಪ್ರವೇಶ ನೀಡಲಾಗುವುದು ಎಂದು ಆವರಣಕ್ಕೆ ಪ್ರವೇಶಿಸಲು ನಿರಾಕರಿಸಲಾಗಿದೆ . ನಂತರ ದೇವಸ್ಥಾನದ ಮುಂಭಾಗದ ರಸ್ತೆಯಿಂದ ದೇವರಿಗೆ ತನ್ನ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ನಟ ಹೇಳಿಕೊಂಡಿದ್ದಾರೆ. ಘಟನೆಯ ಬಗ್ಗೆ ನಟಿ ಇನ್ನೂ ಯಾವುದೇ ಸಾರ್ವಜನಿಕ ಹೇಳಿಕೆಯನ್ನು ನೀಡಿಲ್ಲ ಆದರೆ IANS ಪ್ರಕಾರ, ಅವರು ದೇವಾಲಯದ ಸಂದರ್ಶಕರ ಪುಸ್ತಕದಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಅವರು ದೇವಿಯನ್ನು ನೋಡಿ ಅಲ್ಲಿ ಒಂದು ಅದ್ಭುತ ಕ್ಷಣವನ್ನು ಅನುಭವಿಸಿದ್ದೇನೆ. ಇನ್ನೂ ಕೂಡ ನಮ್ಮ ದೇಶದಲ್ಲಿ ಧಾರ್ಮಿಕ ತಾರತಮ್ಯ  ಅಸ್ತಿತ್ವದಲ್ಲಿದೆ ಎಂಬುದು ದುಃಖ ಮತ್ತು ನಿರಾಶೆಯಾಗಿದೆ ಎಂದು ಹೇಳಿದ್ದಾರೆ. ನಾನು ದೇವಿಯ ಹತ್ತಿರ ಹೋಗಲು ಸಾಧ್ಯವಾಗಲಿಲ್ಲ ಆದರೆ ದೂರದಿಂದ ಚೈತನ್ಯವನ್ನು ಅನುಭವಿಸಬಹುದು. ಧಾರ್ಮಿಕ ತಾರತಮ್ಯ ಶೀಘ್ರದಲ್ಲೇ ಪರಿಹಾರ ಆಗಬೇಕು, ನಾವು ಕೂಡ ಸಮಾನವಾಗಿ ನಿಲ್ಲುತ್ತೇವೆ. ಧರ್ಮದ ಆಧಾರದ ಮೇಲೆ ಅಲ್ಲ ಎಂದು ಅಮಲಾ ಐಎಎನ್‌ಎಸ್ ಪ್ರಕಾರ ಸಂದರ್ಶಕರ ಪುಸ್ತಕದಲ್ಲಿ ಬರೆದಿದ್ದಾರೆ.

ಇದನ್ನು ಓದಿ:Amala Paul: ‘ಹೆಬ್ಬುಲಿ’ ನಟಿಯ ಹಾಟ್​ ಅವತಾರ; ಪಡ್ಡೆಗಳ ನಿದ್ದೆ ಕೆಡಿಸಿದ ಅಮಲಾ ಪೌಲ್​ ಫೋಟೋಸ್​

ದೇವಾಲಯದ ಅಧಿಕಾರಿಗಳು ಅಮಲಾಗೆ ಪ್ರವೇಶವನ್ನು ನಿರಾಕರಿಸಲು ಅಸ್ತಿತ್ವದಲ್ಲಿರುವ ಪ್ರೋಟೋಕಾಲ್ ಅನ್ನು ಉಲ್ಲೇಖಿಸಿದ್ದಾರೆ. ದೇವಸ್ಥಾನದ ಸಂಪ್ರದಾಯಗಳನ್ನು ಮಾತ್ರ ಪಾಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಇತರ ಧರ್ಮದ ಅನೇಕ ಭಕ್ತರು ದೇವಾಲಯಕ್ಕೆ ಭೇಟಿ ನೀಡಲು ಬಂದಿದ್ದಾರೆ, ಆದರೆ ಅದು ಯಾರಿಗೂ ತಿಳಿದಿಲ್ಲ. ಆದರೆ, ಒಬ್ಬ ಸೆಲೆಬ್ರಿಟಿ ಬಂದಾಗ ಅದು ವಿವಾದಾಸ್ಪದವಾಗುತ್ತದೆ ಎಂದು ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಐಎಎನ್ಎಸ್ ವರದಿ ಮಾಡಿದೆ.

ಮೂವತ್ತೊಂದು ವರ್ಷದ ಪೌಲ್ ಮಲಯಾಳಂ, ತಮಿಳು ಮತ್ತು ತೆಲುಗು ಕನ್ನಡ ಭಾಷೆಗಳಲ್ಲಿ ಯಶಸ್ವಿ ಹಿಟ್‌ ಸಿನಿಮಾಗಳೊಂದಿಗೆ ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಅತ್ಯಂತ ಜನಪ್ರಿಯ ನಟಿಯಾಗಿದ್ದಾರೆ.

ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:47 pm, Wed, 18 January 23

ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!