Mann Ki Baat Conclave: ಮನ್​ ಕಿ ಬಾತ್ ರಾಷ್ಟ್ರೀಯ ಸಮಾವೇಶದಲ್ಲಿ ಚಿತ್ರರಂಗದವರು ಭಾಗಿ; ನಟ ಆಮಿರ್ ಖಾನ್ ಹೇಳಿದ್ದೇನು?

ಇಂದಿನ ಸಮಾವೇಶದಲ್ಲಿ (ಏಪ್ರಿಲ್ 26) ದೀರ್ಘ ಚರ್ಚೆ ನಡೆಯಲಿದೆ. ಇದರಲ್ಲಿ ಭಾಗಿ ಆಗುವುದಕ್ಕೂ ಮೊದಲು ಆಮಿರ್ ಖಾನ್ ಮಾತನಾಡಿದ್ದಾರೆ.

Mann Ki Baat Conclave: ಮನ್​ ಕಿ ಬಾತ್ ರಾಷ್ಟ್ರೀಯ ಸಮಾವೇಶದಲ್ಲಿ ಚಿತ್ರರಂಗದವರು ಭಾಗಿ; ನಟ ಆಮಿರ್ ಖಾನ್ ಹೇಳಿದ್ದೇನು?
ಆಮಿರ್ ಖಾನ್
Follow us
|

Updated on:Apr 26, 2023 | 12:52 PM

ನರೇಂದ್ರ ಮೋದಿ (Narendra Modi) ಅವರು ಪ್ರಧಾನಿ ಆದ ಬಳಿಕ ‘ಮನ್​ ಕಿ ಬಾತ್’ ಕಾರ್ಯಕ್ರಮ ಆರಂಭಿಸಿದ್ದರು. ಇದರ ನೂರನೇ ಎಪಿಸೋಡ್ ಏಪ್ರಿಲ್ 30ರಂದು ಪ್ರಸಾರ ಕಾಣುತ್ತಿದೆ. ಈ ವಿಶೇಷ ಎಪಿಸೋಡ್​ನ ಸ್ಮರಣೀಯವಾಗಿಸಲು ಸಮಾವೇಶ ಆಯೋಜನೆ ಮಾಡಲಾಗಿದೆ. ಆಮಿರ್ ಖಾನ್ (Aamir Khan) ​, ರವೀನಾ ಟಂಡನ್, ಕ್ರೀಡಾ ಜಗತ್ತಿನ ದೀಪಾ ಮಲಿಕ್, ನಿಖತ್ ಜರೀನ್ ಭಾಗಿ ಆಗಲಿದ್ದಾರೆ. ಇದರ ಜೊತೆಗೆ ಪತ್ರಕರ್ತರು, ಆರ್​ಜೆ ಹಾಗೂ ಉದ್ಯಮಿಗಳು ಕೂಡ ಇದರಲ್ಲಿ ಭಾಗಿ ಆಗುತ್ತಿದ್ದಾರೆ.

ಇಂದಿನ ಸಮಾವೇಶದಲ್ಲಿ (ಏಪ್ರಿಲ್ 26) ದೀರ್ಘ ಚರ್ಚೆ ನಡೆಯಲಿದೆ. ಇದರಲ್ಲಿ ಭಾಗಿ ಆಗುವುದಕ್ಕೂ ಮೊದಲು ಮಾತನಾಡಿರುವ ಆಮಿರ್ ಖಾನ್, ‘ಜನರೊಂದಿಗೆ ದೇಶದ ನಾಯಕ ಮಾಡುತ್ತಿರುವ ಅತ್ಯಂತ ಪ್ರಮುಖವಾದ ಸಂವಹನ ಇದು. ಪ್ರಮುಖ ವಿಷಯಗಳನ್ನು ಚರ್ಚಿಸುವುದು, ಆಲೋಚನೆಗಳನ್ನು ಮುಂದಿಡುವುದು ಮತ್ತು ಸಲಹೆಗಳನ್ನು ನೀಡುವ ಕೆಲಸ ಆಗಲಿದೆ. ಮನ್​ ಕಿ ಬಾತ್​ನಲ್ಲಿ ಇದು ಆಗುತ್ತಿದೆ ಅನ್ನೋದು ಮುಖ್ಯ’ ಎಂದಿದ್ದಾರೆ ಅವರು.

ಈ ಕಾರ್ಯಕ್ರಮವನ್ನು ಮಾಹಿತಿ ಮತ್ತು ಪ್ರಸಾರ ಇಲಾಖೆ ಆಯೋಜನೆ ಮಾಡಿದೆ. ದೇಶದ 100 ನಾಗರೀಕರು ಇದರಲ್ಲಿ ಭಾಗಿ ಆಗಲಿದ್ದಾರೆ. ಎರಡು ಪುಸ್ತಕ ಬಿಡುಗಡೆ ಆಗಲಿದೆ. ಸ್ಟಾಂಪ್ ಹಾಗೂ ಕಾಯಿನ್ ಕೂಡ ಇಲ್ಲಿ ಅನಾವರಣಗೊಳ್ಳಲಿದೆ.

ಇದನ್ನೂ ಓದಿ: Mann Ki Baat@100: ಮನ್ ಕಿ ಬಾತ್ 100 ಕೋಟಿ ಕೇಳುಗರನ್ನು ತಲುಪಿದೆ: IIM ಸಮೀಕ್ಷೆ

‘ಮನ್ ಕಿ ಬಾತ್​​ನಲ್ಲಿ ನಾನು ಹಲವು ಬಾರಿ ರಾಗಿ ಬಗ್ಗೆ ಪ್ರಸ್ತಾಪಿಸಿದ್ದೆ. ಮುಂದಿನ ಭಾನುವಾರ ಮನ್ ಕಿ ಬಾತ್ 100ನೇ ಸಂಚಿಕೆ ಪೂರೈಸಲಿದೆ. ಜನರ ವಿಶೇಷತೆಗಳನ್ನು ಎತ್ತಿ ಹಿಡಿಯಲು ಮನ್ ಕಿ ಬಾತ್ ಉತ್ತಮ ವೇದಿಕೆಯಾಗಿದೆ. ನಿಮ್ಮಂತೆ ನಾನು ಕೂಡ 100 ನೇ ಸಂಚಿಕೆಗಾಗಿ ಕಾತುರದಿಂದ ಕಾಯುತ್ತಿದ್ದೇನೆ’ ಎಂದು ಮೋದಿ ಹೇಳಿದ್ದರು. 100ನೇ ಸಂಚಿಕೆ ತುಂಬಾನೇ ವಿಶೇವಾಗಿರಲಿದೆ’ ಎಂದು ಮೋದಿ ಇತ್ತೀಚೆಗೆ ಹೇಳಿದ್ದರು.

ಆಮಿರ್ ಖಾನ್ ಅವರು ಸದ್ಯ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಕುಟುಂಬಕ್ಕೆ ಹೆಚ್ಚು ಸಮಯ ಕೊಡಬೇಕು ಎಂಬುದು ಅವರು ಉದ್ದೇಶ. ಈ ಬ್ರೇಕ್​ನಲ್ಲಿ ಅವರು ಹಲವು ಕಡೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಲ್ಮಾನ್ ಖಾನ್ ನಟಿಸಲಿರುವ ಸಿನಿಮಾ ಅನ್ನು ಆಮಿರ್ ಖಾನ್ ನಿರ್ಮಾಣ ಮಾಡಲಿದ್ದಾರೆ ಎನ್ನುವ ಸುದ್ದಿಯೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:50 pm, Wed, 26 April 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!