AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ನಿಮ್ಮನ್ನು ಮದುವೆ ಆಗುವವರು ತುಂಬಾನೇ ಲಕ್ಕಿ ಎಂದ ರಶ್ಮಿಕಾ ಮಂದಣ್ಣ

ಚಿತ್ರದ ನಾಯಕ ಮದುವೆ ಆಗೋಕೆ ಪ್ರಯತ್ನಿಸುತ್ತಿರುತ್ತಾನೆ. ಆದರೆ, ಅದು ಸಾಧ್ಯವಾಗುತ್ತಿರುವುದಿಲ್ಲ. ಇಡೀ ಸಿನಿಮಾದಲ್ಲಿ ಈ ಡ್ರಾಮಾ ಹೈಲೈಟ್​ ಆಗುವ ಸಾಧ್ಯತೆ ಇದೆ.

Rashmika Mandanna: ನಿಮ್ಮನ್ನು ಮದುವೆ ಆಗುವವರು ತುಂಬಾನೇ ಲಕ್ಕಿ ಎಂದ ರಶ್ಮಿಕಾ ಮಂದಣ್ಣ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Feb 11, 2022 | 2:52 PM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಚಿತ್ರರಂಗದಲ್ಲಿ ಇರುವ ಬೇಡಿಕೆ ಸದ್ಯಕ್ಕೆ ಕಡಿಮೆ ಆಗುವಂತಹದ್ದಲ್ಲ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಪ್ರತಿ ಚಿತ್ರಕ್ಕೆ ಅವರು ದೊಡ್ಡ ಮಟ್ಟದಲ್ಲಿ ಸಂಭಾವನೆ ಬಾಚಿಕೊಳ್ಳುತ್ತಾರೆ. ಈಗ ರಶ್ಮಿಕಾ ಅವರು ‘ಆಡವಾಳ್ಳು ಮೀಕು ಜೋಹಾರ್ಲು’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಟೀಸರ್​ ರಿಲೀಸ್ ಆಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಈ ಟೀಸರ್​ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ರಶ್ಮಿಕಾ ಅವರ ಪಾತ್ರ ನೋಡಿ ಎಲ್ಲರೂ ಖುಷಿಯಾಗಿದ್ದಾರೆ. ಚಿತ್ರರಂಗದಲ್ಲಿ ಮೊದಲಿನ ಕಳೆ ನಿಧಾನವಾಗಿ ಮರಳುತ್ತಿದೆ. ದೊಡ್ಡ ಸ್ಟಾರ್​ ನಟರ ಸಿನಿಮಾಗಳು ರಿಲೀಸ್​ ದಿನಾಂಕ ಘೋಷಣೆ ಮಾಡಿಕೊಳ್ಳುತ್ತಿವೆ. ರಶ್ಮಿಕಾ ಮಂದಣ್ಣ ನಟನೆಯ ಹೊಸ ಸಿನಿಮಾ ‘ಆಡವಾಳ್ಳು ಮೀಕು ಜೋಹಾರ್ಲು’ ಸಿನಿಮಾ (Aadavaallu Meeku Joharlu Movie) ರಿಲೀಸ್​ಗೆ ರೆಡಿ ಆಗಿದೆ. ಸಿನಿಮಾ ರಿಲೀಸ್​ಗೆ ಕೆಲವೇ ದಿನಗಳು ಬಾಕಿ ಇರುವಾಗ ಚಿತ್ರದ ಟೀಸರ್ ರಿಲೀಸ್ ಆಗಿದೆ.

ಶರ್ವಾನಂದ್ ಹಾಗೂ ರಶ್ಮಿಕಾ ಮಂದಣ್ಣ ‘ಆಡವಾಳ್ಳು ಮೀಕು ಜೋಹಾರ್ಲು’ದಲ್ಲಿ ಒಟ್ಟಾಗಿ ನಟಿಸಿದ್ದಾರೆ. ತಿರುಮಲ ಕಿಶೋರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ‘ರೆಡ್​’ ಸೇರಿ ಹಲವು ಸಿನಿಮಾಗಳಿಗೆ ಆ್ಯಕ್ಷನ್​ ಕಟ್​ ಹೇಳಿದ ಅನುಭವ ಅವರಿಗೆ ಇದೆ. ಈ ಚಿತ್ರದಲ್ಲಿ ರಶ್ಮಿಕಾ, ‘ನಿಮ್ಮನ್ನು ಮದುವೆ ಆಗುವವರು ತುಂಬಾನೇ ಲಕ್ಕಿ’ ಎನ್ನುವ ಡೈಲಾಗ್​ ಬಳಕೆ ಮಾಡಿದ್ದರು. ಈ ಡೈಲಾಗ್​ಅನ್ನು ಅಭಿಮಾನಿಗಳು ರಶ್ಮಿಕಾಗೆ ಹೇಳುತ್ತಿದ್ದಾರೆ. ನಿಮ್ಮನ್ನು ಮದುವೆ ಆಗುವ ಹುಡುಗ ನಿಜಕ್ಕೂ ಲಕ್ಕಿ ಎಂದಿದ್ದಾರೆ.

ಚಿತ್ರದ ನಾಯಕ ಮದುವೆ ಆಗೋಕೆ ಪ್ರಯತ್ನಿಸುತ್ತಿರುತ್ತಾನೆ. ಆದರೆ, ಅದು ಸಾಧ್ಯವಾಗುತ್ತಿರುವುದಿಲ್ಲ. ಇಡೀ ಸಿನಿಮಾದಲ್ಲಿ ಈ ಡ್ರಾಮಾ ಹೈಲೈಟ್​ ಆಗುವ ಸಾಧ್ಯತೆ ಇದೆ. 2020ರ ಅಕ್ಟೋಬರ್ ತಿಂಗಳಲ್ಲಿ ‘ಆಡವಾಳ್ಳು ಮೀಕು ಜೋಹಾರ್ಲು’ ಚಿತ್ರ ಘೋಷಣೆ ಆಗಿತ್ತು. ಕೊವಿಡ್​ ಎರಡನೇ ಅಲೆ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬವಾದವು. ಈಗ ಸಿನಿಮಾ ರಿಲೀಸ್​ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದ್ದು, ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ.

ರಶ್ಮಿಕಾ, ಶರ್ವಾನಂದ್ ನಟನೆಯ ‘ಆಡವಾಳ್ಳು ಮೀಕು ಜೋಹಾರ್ಲು’ ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತಿದೆ. ಇದಾಗ್ಯೂ ಚಿತ್ರದ ಒಟಿಟಿ ಹಕ್ಕುಗಳು ಉತ್ತಮ ಬೆಲೆಗೆ ಮಾರಾಟವಾಗಿದೆ. ಕಂಪ್ಲೀಟ್ ಫ್ಯಾಮಿಲಿ ಎಂಟರ್​ಟೈನರ್ ಆಗಿರುವ ಈ ಚಿತ್ರದ ಡಿಜಿಟಲ್ ಮತ್ತು ಸ್ಯಾಟಲೈಟ್ ಹಕ್ಕುಗಳನ್ನು ಸೋನಿ ಲಿವ್ ಖರೀದಿಸಿದೆ. ಇದಕ್ಕಾಗಿ ಬರೋಬ್ಬರಿ 25 ಕೋಟಿ ರೂಗಳನ್ನು ನೀಡಲಾಗಿದೆ. ಚಿತ್ರದ ಆಡಿಯೋ ಹಕ್ಕುಗಳನ್ನು ಲಹರಿ ಮ್ಯೂಸಿಕ್ ಉತ್ತಮ ಬೆಲೆಗೆ ಖರೀದಿಸಿದೆ. ಶರ್ವಾನಂದ್ ನಟನೆಯ ಚಿತ್ರ ಸ್ಯಾಟಲೈಟ್ ಹಾಗೂ ಒಟಿಟಿಗೆ ಇಷ್ಟು ದೊಡ್ಡ ಮೊತ್ತವನ್ನು ಪಡೆದಿರುವುದು ಇದೇ ಮೊದಲು. ಇದು ಅಭಿಮಾನಿಗಳಿಗೆ ಅಚ್ಚರಿ ತಂದಿರುವುದಲ್ಲದೇ, ಸಖತ್ ಖುಷಿ ನೀಡಿದೆ.

ಇದನ್ನೂ ಓದಿ:  Gehraiyaan Movie Review: ‘ಗೆಹರಾಯಿಯಾ’ ಇದು ಕೇವಲ ಹಸಿಬಿಸಿ ದೃಶ್ಯಗಳ ಕಥೆಯಲ್ಲ..

ರಶ್ಮಿಕಾ ಹೊಸ ಚಿತ್ರದ ಒಟಿಟಿ ಹಾಗೂ ಸ್ಯಾಟಲೈಟ್​​ ಹಕ್ಕುಗಳಿಗೆ ಭರ್ಜರಿ ಆಫರ್; ಮೊತ್ತ ಕೇಳಿ ಹುಬ್ಬೇರಿಸಿದ ಫ್ಯಾನ್ಸ್

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ