AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಕೋಟಿ ಕ್ಲಬ್ ಸೇರಿದ ‘ಆಡುಜೀವಿತಂ’ ಸಿನಿಮಾ; ಮಲಯಾಳಂ ಸಿನಿಮಾದಿಂದ ಮತ್ತೊಂದು ದಾಖಲೆ

ನ್ಯಾಷನಲ್ ಅವಾರ್ಡ್ ವಿಜೇತ ಬ್ಲೆಸ್ಸಿ ಅವರು ‘ಆಡುಜೀವಿತಂ’ ಚಿತ್ರಕ್ಕಾಗಿ ಹಲವು ವರ್ಷ ಮುಡಿಪಿಟ್ಟಿದ್ದಾರೆ. ಈ ಸಿನಿಮಾದಲ್ಲಿ ಪೃಥ್ವಿರಾಜ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ.  ಪೃಥ್ವಿರಾಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದಾರೆ.

100 ಕೋಟಿ ಕ್ಲಬ್ ಸೇರಿದ ‘ಆಡುಜೀವಿತಂ’ ಸಿನಿಮಾ; ಮಲಯಾಳಂ ಸಿನಿಮಾದಿಂದ ಮತ್ತೊಂದು ದಾಖಲೆ
ಪೃಥ್ವಿರಾಜ್
ರಾಜೇಶ್ ದುಗ್ಗುಮನೆ
|

Updated on: Apr 06, 2024 | 11:54 AM

Share

ಪೃಥ್ವಿರಾಜ್​ ಸುಕುಮಾರನ್ (Prithviraj Sukumaran)​ ನಟನೆಯ ‘ಆಡುಜೀವಿತಂ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಎಂಟು ದಿನಗಳಲ್ಲಿ 100 ಕೋಟಿ ರೂಪಾಯಿ ಕ್ಲಬ್ ಸೇರಿದ ಮೊದಲ ಮಲಯಾಳಂ ಸಿನಿಮಾ ಎನ್ನುವ ಖ್ಯಾತಿಗೆ ಈ ಚಿತ್ರ ಪಾತ್ರವಾಗಿದೆ. ಸಿನಿಮಾ ನೋಡಿದ ಅನೇಕರು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ, ಚಿತ್ರದ ಗಳಿಕೆ ಹೆಚ್ಚುತ್ತಿದೆ. ಮುಂದಿನ ವಾರಗಳಲ್ಲಿ ಸಾಲು ಸಾಲು ರಜೆ ಇರುವುದರಿಂದ ಸಿನಿಮಾಗೆ ಸಹಕಾರಿ ಆಗಲಿದೆ.

ನ್ಯಾಷನಲ್ ಅವಾರ್ಡ್ ವಿಜೇತ ಬ್ಲೆಸ್ಸಿ ಅವರು ‘ಆಡುಜೀವಿತಂ’ ಚಿತ್ರಕ್ಕಾಗಿ ಹಲವು ವರ್ಷ ಮುಡಿಪಿಟ್ಟಿದ್ದಾರೆ. ಈ ಸಿನಿಮಾದಲ್ಲಿ ಪೃಥ್ವಿರಾಜ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ.  ಪೃಥ್ವಿರಾಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಗ್ಲೋಬಲ್ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾ 100 ಕೋಟಿ ರೂಪಾಯಿ ಗಳಿಕೆ ಮಾಡಿರೋ ಬಗ್ಗೆ ಮಾಹಿತಿ ನೀಡಿದ್ದಾರೆ.

2008ರಲ್ಲಿ ನಿರ್ದೇಶಕ ಬ್ಲೆಸ್ಸಿ ಅವರು ಪೃಥ್ವಿರಾಜ್ ಅವರಿಗೆ ಈ ಸಿನಿಮಾ ಬಗ್ಗೆ ಹೇಳಿದ್ದರು. ಸಿನಿಮಾದ ಕಥೆ ಅವರಿಗೆ ಇಷ್ಟ ಆಯಿತು. ಆ ಬಳಿಕ ಸಾಕಷ್ಟು ವರ್ಷ ಶ್ರಮ ಹಾಕಿ ಸಿನಿಮಾ ಮಾಡಲಾಯಿತು. ಈ ಚಿತ್ರ 2024ರಲ್ಲಿ ರಿಲೀಸ್ ಆಗಿದೆ. ಈ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಸಿಗಲಿ ಎಂದು ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: 9.5 ರೇಟಿಂಗ್ ಪಡೆದ ‘ಆಡುಜೀವಿತಂ’; ಮಾಡಿದ ಕಲೆಕ್ಷನ್ ಎಷ್ಟು?

‘ಆಡುಜೀವಿತಂ’ ಸಿನಿಮಾದಲ್ಲಿ ಅಮಲಾ ಪೌಲ್, ಕೆಆರ್ ಗೋಕುಲ್ ಮೊದಲಾದವರು ನಟಿಸಿದ್ದಾರೆ. ಕೇರಳದ ನಜೀಬ್ ಹೆಸರಿನ ವ್ಯಕ್ತಿ ಸೌದಿ ಅರೇಬಿಯಾಗೆ ಕೆಲಸ ಅರಸಿ ಹೋಗುತ್ತಾರೆ. ಅಲ್ಲಿ ಸಾಕಷ್ಟು ತೊಂದರೆ ಅನುಭವಿಸುತ್ತಾರೆ. ಹಲವು ವರ್ಷಗಳ ಸ್ಟ್ರಗಲ್ ಬಳಿಕ ಅವರು ದೇಶಕ್ಕೆ ಮರಳುತ್ತಾರೆ. ಈ ಕಥೆಯನ್ನು ಸಿನಿಮಾ ಹೊಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!