AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9.5 ರೇಟಿಂಗ್ ಪಡೆದ ‘ಆಡುಜೀವಿತಂ’; ಎರಡು ದಿನಕ್ಕೆ ಮಾಡಿದ ಕಲೆಕ್ಷನ್ ಎಷ್ಟು?

‘ಆಡುಜೀವಿತಂ’ ಸಿನಿಮಾ ಮಾರ್ಚ್ 28ರಂದು ರಿಲೀಸ್ ಆಯಿತು. ಮೊದಲ ದಿನ ಸಿನಿಮಾ 7.60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಎರಡನೇ ದಿನ ಚಿತ್ರದ ಗಳಿಕೆ 6.50 ಕೋಟಿ ರೂಪಾಯಿ ಆಗಿದೆ. ಈ ಮೂಲಕ ಒಟ್ಟಾರೆ ಕಲೆಕ್ಷನ್ 14.10 ಕೋಟಿ ರೂಪಾಯಿ ದಾಟಿದೆ.

9.5 ರೇಟಿಂಗ್ ಪಡೆದ ‘ಆಡುಜೀವಿತಂ’; ಎರಡು ದಿನಕ್ಕೆ ಮಾಡಿದ ಕಲೆಕ್ಷನ್ ಎಷ್ಟು?
ಪೃಥ್ವಿರಾಜ್
ರಾಜೇಶ್ ದುಗ್ಗುಮನೆ
|

Updated on: Mar 30, 2024 | 11:05 AM

Share

ಪೃಥ್ವಿರಾಜ್​ ಸುಕುಮಾರ್ ನಟನೆಯ ‘ಆಡುಜೀವಿತಂ’ ಸಿನಿಮಾ (Aadujeevitham Movie) ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ಪೃಥ್ವಿರಾಜ್ ನಟನೆ ಹಾಗೂ ಅವರ ಮೇಕೋವರ್ ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಈ ಸಿನಿಮಾ ದೇಶದ್ಯಾಂತ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಬುಕ್​ ಮೈ ಶೋನಲ್ಲಿ ಈವರೆಗೆ (ಮಾರ್ಚ್ 29 ಬೆಳಿಗ್ಗೆ 11 ಗಂಟೆ) 9.5 ರೇಟಿಂಗ್ ಪಡೆದಿದೆ. ಮಾರ್ಚ್ 28ರಂದು ರಿಲೀಸ್ ಆದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಆಡುಜೀವಿತಂ’ ಸಿನಿಮಾ ಮಾರ್ಚ್ 28ರಂದು ರಿಲೀಸ್ ಆಯಿತು. ಮೊದಲ ದಿನ ಸಿನಿಮಾ 7.60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಎರಡನೇ ದಿನ ಚಿತ್ರದ ಗಳಿಕೆ 6.50 ಕೋಟಿ ರೂಪಾಯಿ ಆಗಿದೆ. ಈ ಮೂಲಕ ಒಟ್ಟಾರೆ ಕಲೆಕ್ಷನ್ 14.10 ಕೋಟಿ ರೂಪಾಯಿ ದಾಟಿದೆ. ಮಲಯಾಳಂ ಚಿತ್ರರಂಗದಿಂದಲೇ 11.82 ಕೋಟಿ ರೂಪಾಯಿ ಗಳಿಕೆ ಆಗಿದೆ. ಕನ್ನಡದಿಂದ ಕೇವಲ 90 ಲಕ್ಷ ರೂಪಾಯಿ ಕಲೆಕ್ಷನ್ ಆಗಿದೆ. ಈ ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲ್ಮ್ಸ್ ಹಂಚಿಕೆ ಮಾಡಿದೆ. ಇಂದು (ಮಾರ್ಚ್ 30) ಹಾಗೂ ನಾಳೆ (ಮಾರ್ಚ್ 31) ಸಿನಿಮಾ ಕಲೆಕ್ಷನ್ ಮತ್ತಷ್ಟು ಹೆಚ್ಚೋ ಸಾಧ್ಯತೆ ಇದೆ.

‘ಆಡುಜೀವಿತಂ’ ಸಿನಿಮಾ ನೈಜ ಘಟನೆ ಆಧರಿಸಿದೆ. ಕೇರಳ ಮೂಲದ ವ್ಯಕ್ತಿ ಕೆಲಸಕ್ಕಾಗಿ ಸೌದಿ ಅರೇಬಿಯಾ ತೆರಳುತ್ತಾರೆ. ಸೂಪರ್ ಮಾರ್ಕೆಟ್​ನಲ್ಲಿ ಮಾಡೋ ಕೆಲಸ ಎಂದು ಆತನ ಕರೆದುಕೊಂಡು ಹೋಗುತ್ತಾರೆ. ಆ ಬಳಿಕ ಅದು ಮೋಸ ಅನ್ನೋದು ಗೊತ್ತಾಗುತ್ತದೆ. ಆತನಿಗೆ ಮರಳುಗಾಡಿನಲ್ಲಿ ಕುರಿ ಕಾಯುವ ಕೆಲಸ ಸಿಗುತ್ತದೆ. ಹಲವು ವರ್ಷ ಅಲ್ಲಿಯೇ ಟ್ರ್ಯಾಪ್ ಆಗೋ ಆ ವ್ಯಕ್ತಿ ನಂತರ ಮರಳಿ ಬರುತ್ತಾರೆ.

ಇದನ್ನೂ ಓದಿ: ‘ಆಡುಜೀವಿತಂ’ ಪ್ರಚಾರಕ್ಕೆ ಪ್ರಭಾಸ್​ ಅನ್ನು ಕರೆಯಲಿಲ್ಲವೇಕೆ? ಪೃಥ್ವಿರಾಜ್ ಕೊಟ್ಟರು ಮುತ್ತಿನಂಥಹಾ ಉತ್ತರ

‘ಆಡುಜೀವಿತಂ’ ಚಿತ್ರವನ್ನು ಬ್ಲೆಸ್ಸಿ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಪೃಥ್ವಿರಾಜ್, ಅಮಲಾ ಪೌಲ್ ಮೊದಲಾದವರು ಸಿನಿಮಾದಲ್ಲಿ ಇದ್ದಾರೆ. ಎಆರ್ ರೆಹಮಾನ್ ಸಂಗೀತ ಸಂಯೋಜನೆ ಚಿತ್ರಕ್ಕೆ ಇದೆ. ಈ ಸಿನಿಮಾಗಾಗಿ ಮಾತುಕತೆ ನಡೆದಿದ್ದು 2009ರಲ್ಲಿ. ಚಿತ್ರ ಸೆಟ್ಟೇರಿದ್ದು 2018ರಲ್ಲಿ. 2024ರಲ್ಲಿ ಸಿನಿಮಾ ರಿಲೀಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್