AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಡುಜೀವಿತಂ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ; ಪೃಥ್ವಿರಾಜ್​ ನಟನೆಗೆ ಜನರು ಫಿದಾ

‘ಆಡುಜೀವಿತಂ’ ಸಿನಿಮಾದಲ್ಲಿ ಪೃಥ್ವಿರಾಜ್​ ಸುಕುಮಾರನ್​ ಮತ್ತು ಅಮಲಾ ಪೌಲ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಇಂದು (ಮಾರ್ಚ್​ 28) ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಫಸ್ಟ್​ ಡೇ ಫಸ್ಟ್​ ಶೋ ನೋಡಿದ ಪ್ರೇಕ್ಷಕರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ವಿಮರ್ಶೆ ತಿಳಿಸಿದ್ದಾರೆ.

‘ಆಡುಜೀವಿತಂ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ; ಪೃಥ್ವಿರಾಜ್​ ನಟನೆಗೆ ಜನರು ಫಿದಾ
ಪೃಥ್ವಿರಾಜ್​ ಸುಕುಮಾರನ್​
ಮದನ್​ ಕುಮಾರ್​
|

Updated on: Mar 28, 2024 | 3:59 PM

Share

ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್ ಅವರ ಆಡುಜೀವಿತಂ’ ಸಿನಿಮಾ (Aadujeevitham) ಬಿಡುಗಡೆ ಆಗಿದೆ. ಹಲವು ವರ್ಷಗಳ ಶ್ರಮಕ್ಕೆ ಫಲವಾಗಿ ಈಗ ಪ್ರೇಕ್ಷಕರಿಂದ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ನೈಜ ಘಟನೆ ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ಪೃಥ್ವಿರಾಜ್​ ಸುಕುಮಾರನ್​ (Prithviraj Sukumaran) ಅವರು ಈ ಸಿನಿಮಾದಲ್ಲಿ ಡಿಫರೆಂಟ್​ ಗೆಟಪ್​ ತಾಳಿದ್ದಾರೆ. ದೇಹದ ತೂಕ ಇಳಿಸಿಕೊಂಡು ಪ್ರೇಕ್ಷಕರನ್ನು ಅಚ್ಚರಿಗೊಳಿಸಿದ್ದಾರೆ. ಬ್ಲೆಸ್ಸಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ಅವರು ಈ ಸಿನಿಮಾಗಾಗಿ ಹತ್ತಾರು ವರ್ಷ ಕಷ್ಟಪಟ್ಟಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಆಡುಜೀವಿತಂ’ ಸಿನಿಮಾ ಬಿಡುಗಡೆ ಆಗಿದ್ದು, ಮೊದಲ ದಿನ ಮೊದಲ ಶೋ ನೋಡಿದ ಪ್ರೇಕ್ಷಕರು ಎಕ್ಸ್​ (ಟ್ವಿಟರ್​) ಮೂಲಕ ತಮ್ಮ ವಿಮರ್ಶೆ (Aadujeevitham Twitter Review) ಹಂಚಿಕೊಂಡಿದ್ದಾರೆ.

‘ಪಾಟ್ನಾದಲ್ಲಿ ಆಡುಜೀವಿತಂ ಸಿನಿಮಾವನ್ನು ನೋಡಬೇಕು ಎಂದು ಬುಕಿಂಗ್​ ಆ್ಯಪ್​ ತೆರೆದರೆ ಹೌಸ್​ಫುಲ್​ ತೋರಿಸುತ್ತಿದೆ. ನಾಳೆ ನೋಡುತ್ತೇನೆ. ಪೃಥ್ವಿರಾಜ್​ ಸುಕುಮಾರನ್​ ಅವರಿಗೆ ಆಲ್​ ದಿ ಬೆಸ್ಟ್​’ ಎಂದು ಪಾಟ್ನಾದಲ್ಲಿನ ಅಭಿಮಾನಿಯೊಬ್ಬರು ಪೋಸ್ಟ್​ ಮಾಡಿದ್ದಾರೆ. ಮಲಯಾಳಂ ಸಿನಿಮಾಗೆ ಎಲ್ಲ ಕಡೆಗಳಲ್ಲಿ ಈ ರೀತಿ ರೆನ್ಪಾನ್ಸ್ ಸಿಗುತ್ತಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.

ಈ ಸಿನಿಮಾದಲ್ಲಿ ಪೃಥ್ವಿರಾಜ್​ ಸುಕುಮಾರನ್​ ಜೊತೆ ಅಮಲಾ ಪೌಲ್​, ಜಿಮ್ಮಿ ಜೀನ್​ ಲೂಯಿಸ್​, ಕೆ.ಆರ್​. ಗೋಕುಲ್​ ಮುಂತಾದವರು ನಟಿಸಿದ್ದಾರೆ. ‘ಇದು ತುಂಬ ಒಳ್ಳೆಯ ಸಿನಿಮಾ. ಇದಕ್ಕೆ ಖಂಡಿತವಾಗಿಯೂ ಜನರ ಬೆಂಬಲ ಸಿಗಬೇಕು’ ಎಂದು ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ. ‘ಇದು ಸಿನಿಮ್ಯಾಟಿಕ್​ ಮ್ಯಾಜಿಕ್​. ಯಾರೂ ಈ ಚಿತ್ರವನ್ನು ಮಿಸ್​ ಮಾಡಿಕೊಳ್ಳಬೇಡಿ’ ಎಂದು ಕೆಲವು ಪ್ರೇಕ್ಷಕರು ಹೇಳಿದ್ದಾರೆ.

‘ನಿರ್ದೇಶಕ ಬ್ಲೆಸ್ಸಿ ಮತ್ತು ನಟ ಪೃಥ್ವಿರಾಜ್​ ಸುಕುಮಾರನ್​ ಅವರು ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದಾರೆ. ನಮ್ಮೆಲ್ಲರ ನಿರೀಕ್ಷೆಗೆ ತಮ್ಮಂತೆ ಸಿನಿಮಾ ಮೂಡಿಬಂದಿದೆ’ ಎಂಬ ಮಾತು ಕೂಡ ಪ್ರೇಕ್ಷಕರಿಂದ ಕೇಳಿಬಂದಿದೆ. ‘ಜೀವನದಲ್ಲಿ ಒಮ್ಮೆ ಮಾತ್ರ ಸಿಗಬಹುದಾದ ಇಂಥ ಪಾತ್ರವನ್ನು ಪೃಥ್ವಿರಾಜ್​ ಸುಕುಮಾರನ್​ ಅವರು ತುಂಬ ಚೆನ್ನಾಗಿ ನಿಭಾಯಿಸಿದ್ದಾರೆ. ನಜೀಬ್​ ಮೊಹಮ್ಮದ್​ ಎಂಬ ಈ ಪಾತ್ರದಲ್ಲಿ ಅವರು ಜೀವಿಸಿದ್ದಾರೆ’ ಎಂದು ಪ್ರೇಕ್ಷಕರೊಬ್ಬರು ತಮ್ಮ ವಿಮರ್ಶೆ ತಿಳಿಸಿದ್ದಾರೆ.

ಇದನ್ನೂ ಓದಿ: ಹೇಗಿದೆ ಪೃಥ್ವಿರಾಜ್ ನಟನೆಯ ‘ಆಡುಜೀವಿತಂ’ ಸಿನಿಮಾ? ವಿಮರ್ಶೆ ತಿಳಿಸಿದ ಕಮಲ್ ಹಾಸನ್

ಎಲ್ಲ ಕಡೆಗಳಲ್ಲಿ ಈ ಸಿನಿಮಾಗೆ ಉತ್ತಮ ವಿಮರ್ಶೆ ಸಿಗುತ್ತಿದೆ. ಕೆಲವು ಚಿತ್ರಮಂದಿರಗಳಲ್ಲಿ ಇಂಗ್ಲಿಷ್​ ಸಬ್​ಟೈಟಲ್​ ಇಲ್ಲ ಎಂದು ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ.

‘ಪೃಥ್ವಿರಾಜ್​ ಸುಕುಮಾರನ್​ ಅವರು ಎಂಥ ನಟ ಎಂಬುದು ನಮಗೆಲ್ಲರಿಗೂ ಗೊತ್ತು. ಅವರ ಸಾಮರ್ಥ್ಯವನ್ನು ತೋರಿಸುವ ಇನ್ನೊಂದು ಸಿನಿಮಾ ಆಡುಜೀವಿತಂ. ಈ ಸಿನಿಮಾವನ್ನು ತೆಲುಗಿಗೆ ಡಬ್​ ಮಾಡಿ ಬಿಡುಗಡೆ ಮಾಡಿದ್ದಕ್ಕೆ ಧನ್ಯವಾದಗಳು’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ