AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಡುಜೀವಿತಂ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ; ಪೃಥ್ವಿರಾಜ್​ ನಟನೆಗೆ ಜನರು ಫಿದಾ

‘ಆಡುಜೀವಿತಂ’ ಸಿನಿಮಾದಲ್ಲಿ ಪೃಥ್ವಿರಾಜ್​ ಸುಕುಮಾರನ್​ ಮತ್ತು ಅಮಲಾ ಪೌಲ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಇಂದು (ಮಾರ್ಚ್​ 28) ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಫಸ್ಟ್​ ಡೇ ಫಸ್ಟ್​ ಶೋ ನೋಡಿದ ಪ್ರೇಕ್ಷಕರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ವಿಮರ್ಶೆ ತಿಳಿಸಿದ್ದಾರೆ.

‘ಆಡುಜೀವಿತಂ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ; ಪೃಥ್ವಿರಾಜ್​ ನಟನೆಗೆ ಜನರು ಫಿದಾ
ಪೃಥ್ವಿರಾಜ್​ ಸುಕುಮಾರನ್​
ಮದನ್​ ಕುಮಾರ್​
|

Updated on: Mar 28, 2024 | 3:59 PM

Share

ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್ ಅವರ ಆಡುಜೀವಿತಂ’ ಸಿನಿಮಾ (Aadujeevitham) ಬಿಡುಗಡೆ ಆಗಿದೆ. ಹಲವು ವರ್ಷಗಳ ಶ್ರಮಕ್ಕೆ ಫಲವಾಗಿ ಈಗ ಪ್ರೇಕ್ಷಕರಿಂದ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ನೈಜ ಘಟನೆ ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ಪೃಥ್ವಿರಾಜ್​ ಸುಕುಮಾರನ್​ (Prithviraj Sukumaran) ಅವರು ಈ ಸಿನಿಮಾದಲ್ಲಿ ಡಿಫರೆಂಟ್​ ಗೆಟಪ್​ ತಾಳಿದ್ದಾರೆ. ದೇಹದ ತೂಕ ಇಳಿಸಿಕೊಂಡು ಪ್ರೇಕ್ಷಕರನ್ನು ಅಚ್ಚರಿಗೊಳಿಸಿದ್ದಾರೆ. ಬ್ಲೆಸ್ಸಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ಅವರು ಈ ಸಿನಿಮಾಗಾಗಿ ಹತ್ತಾರು ವರ್ಷ ಕಷ್ಟಪಟ್ಟಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಆಡುಜೀವಿತಂ’ ಸಿನಿಮಾ ಬಿಡುಗಡೆ ಆಗಿದ್ದು, ಮೊದಲ ದಿನ ಮೊದಲ ಶೋ ನೋಡಿದ ಪ್ರೇಕ್ಷಕರು ಎಕ್ಸ್​ (ಟ್ವಿಟರ್​) ಮೂಲಕ ತಮ್ಮ ವಿಮರ್ಶೆ (Aadujeevitham Twitter Review) ಹಂಚಿಕೊಂಡಿದ್ದಾರೆ.

‘ಪಾಟ್ನಾದಲ್ಲಿ ಆಡುಜೀವಿತಂ ಸಿನಿಮಾವನ್ನು ನೋಡಬೇಕು ಎಂದು ಬುಕಿಂಗ್​ ಆ್ಯಪ್​ ತೆರೆದರೆ ಹೌಸ್​ಫುಲ್​ ತೋರಿಸುತ್ತಿದೆ. ನಾಳೆ ನೋಡುತ್ತೇನೆ. ಪೃಥ್ವಿರಾಜ್​ ಸುಕುಮಾರನ್​ ಅವರಿಗೆ ಆಲ್​ ದಿ ಬೆಸ್ಟ್​’ ಎಂದು ಪಾಟ್ನಾದಲ್ಲಿನ ಅಭಿಮಾನಿಯೊಬ್ಬರು ಪೋಸ್ಟ್​ ಮಾಡಿದ್ದಾರೆ. ಮಲಯಾಳಂ ಸಿನಿಮಾಗೆ ಎಲ್ಲ ಕಡೆಗಳಲ್ಲಿ ಈ ರೀತಿ ರೆನ್ಪಾನ್ಸ್ ಸಿಗುತ್ತಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.

ಈ ಸಿನಿಮಾದಲ್ಲಿ ಪೃಥ್ವಿರಾಜ್​ ಸುಕುಮಾರನ್​ ಜೊತೆ ಅಮಲಾ ಪೌಲ್​, ಜಿಮ್ಮಿ ಜೀನ್​ ಲೂಯಿಸ್​, ಕೆ.ಆರ್​. ಗೋಕುಲ್​ ಮುಂತಾದವರು ನಟಿಸಿದ್ದಾರೆ. ‘ಇದು ತುಂಬ ಒಳ್ಳೆಯ ಸಿನಿಮಾ. ಇದಕ್ಕೆ ಖಂಡಿತವಾಗಿಯೂ ಜನರ ಬೆಂಬಲ ಸಿಗಬೇಕು’ ಎಂದು ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ. ‘ಇದು ಸಿನಿಮ್ಯಾಟಿಕ್​ ಮ್ಯಾಜಿಕ್​. ಯಾರೂ ಈ ಚಿತ್ರವನ್ನು ಮಿಸ್​ ಮಾಡಿಕೊಳ್ಳಬೇಡಿ’ ಎಂದು ಕೆಲವು ಪ್ರೇಕ್ಷಕರು ಹೇಳಿದ್ದಾರೆ.

‘ನಿರ್ದೇಶಕ ಬ್ಲೆಸ್ಸಿ ಮತ್ತು ನಟ ಪೃಥ್ವಿರಾಜ್​ ಸುಕುಮಾರನ್​ ಅವರು ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದಾರೆ. ನಮ್ಮೆಲ್ಲರ ನಿರೀಕ್ಷೆಗೆ ತಮ್ಮಂತೆ ಸಿನಿಮಾ ಮೂಡಿಬಂದಿದೆ’ ಎಂಬ ಮಾತು ಕೂಡ ಪ್ರೇಕ್ಷಕರಿಂದ ಕೇಳಿಬಂದಿದೆ. ‘ಜೀವನದಲ್ಲಿ ಒಮ್ಮೆ ಮಾತ್ರ ಸಿಗಬಹುದಾದ ಇಂಥ ಪಾತ್ರವನ್ನು ಪೃಥ್ವಿರಾಜ್​ ಸುಕುಮಾರನ್​ ಅವರು ತುಂಬ ಚೆನ್ನಾಗಿ ನಿಭಾಯಿಸಿದ್ದಾರೆ. ನಜೀಬ್​ ಮೊಹಮ್ಮದ್​ ಎಂಬ ಈ ಪಾತ್ರದಲ್ಲಿ ಅವರು ಜೀವಿಸಿದ್ದಾರೆ’ ಎಂದು ಪ್ರೇಕ್ಷಕರೊಬ್ಬರು ತಮ್ಮ ವಿಮರ್ಶೆ ತಿಳಿಸಿದ್ದಾರೆ.

ಇದನ್ನೂ ಓದಿ: ಹೇಗಿದೆ ಪೃಥ್ವಿರಾಜ್ ನಟನೆಯ ‘ಆಡುಜೀವಿತಂ’ ಸಿನಿಮಾ? ವಿಮರ್ಶೆ ತಿಳಿಸಿದ ಕಮಲ್ ಹಾಸನ್

ಎಲ್ಲ ಕಡೆಗಳಲ್ಲಿ ಈ ಸಿನಿಮಾಗೆ ಉತ್ತಮ ವಿಮರ್ಶೆ ಸಿಗುತ್ತಿದೆ. ಕೆಲವು ಚಿತ್ರಮಂದಿರಗಳಲ್ಲಿ ಇಂಗ್ಲಿಷ್​ ಸಬ್​ಟೈಟಲ್​ ಇಲ್ಲ ಎಂದು ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ.

‘ಪೃಥ್ವಿರಾಜ್​ ಸುಕುಮಾರನ್​ ಅವರು ಎಂಥ ನಟ ಎಂಬುದು ನಮಗೆಲ್ಲರಿಗೂ ಗೊತ್ತು. ಅವರ ಸಾಮರ್ಥ್ಯವನ್ನು ತೋರಿಸುವ ಇನ್ನೊಂದು ಸಿನಿಮಾ ಆಡುಜೀವಿತಂ. ಈ ಸಿನಿಮಾವನ್ನು ತೆಲುಗಿಗೆ ಡಬ್​ ಮಾಡಿ ಬಿಡುಗಡೆ ಮಾಡಿದ್ದಕ್ಕೆ ಧನ್ಯವಾದಗಳು’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ