AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದ ನಂತರ ಆಮೀರ್ ಖಾನ್ ಹಾಗೂ ಕಿರಣ್ ರಾವ್ ಸೆಟ್​ನಲ್ಲಿ ಮಾಡಿದ ಡಾನ್ಸ್ ವೈರಲ್

Aamir Khan Kiran Rao Dance: ಆಮೀರ್ ಖಾನ್ ಹಾಗೂ ಕಿರಣ್ ರಾವ್ ತಮ್ಮ ಬೇರ್ಪಡುವಿಕೆಯ ಘೋಷಣೆಯ ಬೆನ್ನಲ್ಲೇ ಲಾಲ್ ಸಿಂಗ್ ಛಡ್ಡಾ ಚಿತ್ರದ ಸೆಟ್​ನಲ್ಲಿ ಡಾನ್ಸ್ ಮಾಡಿರುವುದು ಅಭಿಮಾನಿಗಳ ಗಮನ ಸೆಳೆದಿದೆ. ಲಡಾಖ್​ನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಅಲ್ಲಿನ ಸ್ಥಳೀಯರೊಂದಿಗೆ ಸಾಂಪ್ರದಾಯಿಕ ನೃತ್ಯಕ್ಕೆ ಹೆಜ್ಜೆಹಾಕಿರುವುದು ಎಲ್ಲರ ಮನಗೆದ್ದಿದೆ.

ವಿಚ್ಛೇದನದ ನಂತರ ಆಮೀರ್ ಖಾನ್ ಹಾಗೂ ಕಿರಣ್ ರಾವ್ ಸೆಟ್​ನಲ್ಲಿ ಮಾಡಿದ ಡಾನ್ಸ್ ವೈರಲ್
ನೃತ್ಯ ಮಾಡುತ್ತಿರುವ ಆಮೀರ್ ಹಾಗೂ ಕಿರಣ್ ರಾವ್
TV9 Web
| Edited By: |

Updated on:Jul 15, 2021 | 11:54 AM

Share

ಆಮೀರ್ ಖಾನ್(Aamir Khan) ಹಾಗೂ ಅವರ ಮಾಜಿ ಪತ್ನಿ ಕಿರಣ್ ರಾವ್(Kiran Rao) ಜೊತೆಯಲ್ಲಿ ನೃತ್ಯ ಮಾಡಿರುವುದು ಎಲ್ಲರ ಮನಸ್ಸನ್ನು ಗೆದ್ದಿದೆ. ಅವರೀರ್ವರೂ ಜೊತೆಯಾಗಿ ನಿರ್ಮಿಸುತ್ತಿರುವ ‘ಲಾಲ್ ಸಿಂಗ್ ಛಡ್ಡಾ’(Laal Singh Chaddha) ಚಿತ್ರದ ಚಿತ್ರೀಕರಣವು ಪ್ರಸ್ತುತ ಲಡಾಖ್​ನಲ್ಲಿ ನಡೆಯುತ್ತಿದೆ. ಚಿತ್ರೀಕರಣದ ಸೆಟ್​ನಲ್ಲಿ ಅವರೀರ್ವರೂ ಅಲ್ಲಿನ ಸಾಂಪ್ರದಾಯಿಕ ದಿರಿಸನ್ನು ಧರಿಸಿ ನೃತ್ಯ ಮಾಡಿದ್ದು ಅಭಿಮಾನಿಗಳ ಮನಸೂರೆಗೊಂಡಿದೆ. ವಿಡಿಯೊದಲ್ಲಿ ಕರೀನಾ ಕಪೂರ್ ಖಾನ್, ಮೋನಾ ಸಿಂಗ್ ಹಾಗೂ ನಾಗ ಚೈತನ್ಯ ಸಹ ಕಾಣಿಸಿಕೊಂಡಿದ್ದಾರೆ. ಈ ಚಿತ್ರವು ಫಾರೆಸ್ಟ್ ಗಂಪ್ ಚಿತ್ರದ ಅಧಿಕೃತ ರಿಮೇಕ್ ಆಗಿದೆ.

ಇದೀಗ ಬಿಡುಗಡೆ ಮಾಡಿರುವ ವಿಡಿಯೊದಲ್ಲಿ ಆಮೀರ್ ಖಾನ್ ಹಾಗೂ ಕಿರಣ್ ರಾವ್ ಕೆಂಪು ಬಣ್ಣದ ಕಾಶ್ಮೀರದ ಸಾಂಪ್ರದಾಯಿಕ ದಿರಿಸನ್ನು ಧರಿಸಿದ್ದಾರೆ. ಆಮೀರ್ ಕೆಂಪು ಬಣ್ಣದ ದಿರಿಸಿನ ಜೊತೆಗೆ ನೇರಳೆ ಬಣ್ಣದ ಟೊಪ್ಪಿಯನ್ನು ಧರಿಸಿದ್ದಾರೆ. ಕಿರಣ್ ರಾವ್ ಅವರು ಪಿಂಕ್ ಬಣ್ಣದ ದಿರಿಸನ್ನು ಧರಿಸಿ ಹಸಿರು ಬಣ್ಣದ ಟೊಪ್ಪಿಯನ್ನು ಧರಿಸಿದ್ದಾರೆ. ಡಾನ್ಸ್ ಅನ್ನು ಹೇಳಿಕೊಡುವ ಶಿಕ್ಷಕಿಯೊಬ್ಬರನ್ನು ಈರ್ವರೂ ಅನುಸರಿಸಿ ನೃತ್ಯವನ್ನು ಮಾಡಿದ್ದಾರೆ.

ಅದರ ವಿಡಿಯೊ ಇಲ್ಲಿದೆ:

ಇತ್ತೀಚೆಗಷ್ಟೇ ನಟ ನಾಗಚೈತನ್ಯ ಅವರನ್ನು ಸೆಟ್​ಗೆ ಆಹ್ವಾನಿಸಿ ಆಮೀರ್ ಹಾಗೂ ಕಿರಣ್ ಸೆಲ್ಫಿಗೆ ಭರ್ಜರಿ ಪೋಸ್ ನೀಡಿದ್ದರು. ಅದೂ ಸಹ ಅಭಿಮಾನಿಗಳ ಮನಗೆದ್ದಿತ್ತು. ‘ಲಾಲ್ ಸಿಂಗ್ ಛಡ್ಡಾ’ ಚಿತ್ರವು ಹಾಲಿವುಡ್​ನ ಸಾರ್ವಕಾಲಿಕ ಯಶಸ್ವೀ ಚಿತ್ರಗಳಲ್ಲೊಂದಾದ ‘ಫಾರೆಸ್ಟ್ ಗಂಪ್’ ಚಿತ್ರದ ಅಧಿಕೃತ ರಿಮೇಕ್. ಲಾಲ್ ಸಿಂಗ್ ಛಡ್ಡಾನ ಜೀವನವು ಭಾರತದ ಪ್ರಮುಖ ಘಟನೆಗಳಿಗೆ ಹೇಗೆ ಸಂಬಂಧ ಹೊಂದಿರುತ್ತದೆ ಎಂಬುದನ್ನು ತೆಳು ಹಾಸ್ಯದ ಮುಖಾಂತರ ಚಿತ್ರವು ಪ್ರಸ್ತುತಪಡಿಸಲಿದೆ. ದೇಶದ ಸುಮಾರು ನೂರಕ್ಕೂ ಅಧಿಕ ಪ್ರದೇಶಗಳಲ್ಲಿ ಚಿತ್ರೀಕರಣವಾಗುತ್ತಿರುವ ಈ ಚಿತ್ರದಲ್ಲಿ ದೇಶದ ಬಹಳಷ್ಟು ಸ್ಟಾರ್ ನಟರು ಬಣ್ಣ ಹಚ್ಚುತ್ತಿದ್ದಾರೆ.

ಅತುಲ್ ಕುಲಕರ್ಣಿ ಅವರ ಹತ್ತು ವರ್ಷದ ಪರಿಶ್ರಮದಿಂದಾಗಿ ಚಿತ್ರಕತೆ ಸಿದ್ಧವಾಗಿದೆ. ಚಿತ್ರದ ರಿಮೇಕ್​ ಹಕ್ಕುಗಳನ್ನು ಪಡೆಯಲೂ ಅಷ್ಟೇ ಸಮಯ ವ್ಯಯಿಸಲಾಗಿದೆ ಎಂಬ ಮಾಹಿತಿ ಇದೆ. ಈ ಮೊದಲು 2020ರ ಕ್ರಿಸ್​ಮಸ್​ಗೆ ಚಿತ್ರ ಬಿಡುಗಡೆಗೊಳಿಸುವ ಯೋಜನೆ ಹಾಕಿಕೊಳ್ಳಲಾಗಿತ್ತು. ಕರೊನಾ ಕಾರಣದಿಂದಾಗಿ ಅದು ಸುಮಾರು ಒಂದು ವರ್ಷ ಮುಂದೂಡಲ್ಪಟ್ಟಿದೆ. ಆದ್ದರಿಂದ 2021ರ ಕ್ರಿಸ್​ಮಸ್​ಗೆ ಚಿತ್ರ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಮತ್ತೆ ಒಂದಾಗಿ ನಾಗಚೈತನ್ಯ ಜೊತೆ ಸೆಲ್ಫಿಗೆ ಭರ್ಜರಿ ಪೋಸ್ ನೀಡಿದ ಆಮೀರ್ ಖಾನ್, ಕಿರಣ್ ರಾವ್: ಸಂತಸಕ್ಕೆ ಕಾರಣ ಗೊತ್ತಾ?

ಇದನ್ನೂ ಓದಿ: Indrajit Lankesh Press Meet: ಮೈಸೂರು ಪೊಲೀಸ್ ಸ್ಟೇಶನ್​ಗಳು ಸೆಟಲ್ ಮೆಂಟ್ ಸ್ಟೇಷನ್​ಗಳಾಗಿವೆ; ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ

Published On - 11:07 am, Thu, 15 July 21

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ