AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಜ್ಜನಾಗುವ ವಯಸ್ಸಿನಲ್ಲಿ ಆಮಿರ್​ ಖಾನ್​ಗೆ 3ನೇ ಹೆಂಡತಿ ಚಿಂತೆ’: ಬಿಜೆಪಿ ಸಂಸದ ಸುಧೀರ್​ ಗುಪ್ತಾ

ಬಿಜೆಪಿ ಸಂಸದ ಸುಧೀರ್​ ಗುಪ್ತಾ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಆಗಾಗ ಸುದ್ದಿ ಆಗುತ್ತಿರುತ್ತಾರೆ. ಈಗ ಅವರು ಆಮಿರ್​ ಖಾನ್​ ಬಗ್ಗೆ ವ್ಯಂಗ್ಯದ ಮಾತುಗಳನ್ನು ಆಡಿದ್ದಾರೆ.

‘ಅಜ್ಜನಾಗುವ ವಯಸ್ಸಿನಲ್ಲಿ ಆಮಿರ್​ ಖಾನ್​ಗೆ 3ನೇ ಹೆಂಡತಿ ಚಿಂತೆ’: ಬಿಜೆಪಿ ಸಂಸದ ಸುಧೀರ್​ ಗುಪ್ತಾ
ಆಮಿರ್​ ಖಾನ್​, ಕಿರಣ್​ ರಾವ್​, ಸುಧೀರ್​ ಗುಪ್ತಾ
TV9 Web
| Edited By: |

Updated on: Jul 13, 2021 | 12:20 PM

Share

ಎರಡನೇ ಪತ್ನಿ ಕಿರಣ್​ ರಾವ್​ಗೆ ವಿಚ್ಛೇದನ ನೀಡಿದ ಬಳಿಕ ಆಮಿರ್​ ಖಾನ್​ (Aamir Khan) ಅವರು ಹಲವರ ಟೀಕೆಗೆ ಒಳಗಾಗುತ್ತಿದ್ದಾರೆ. ಆಮಿರ್​ ಖಾನ್​ ಮತ್ತು ಕಿರಣ್​ ರಾವ್​ 15 ವರ್ಷ ಸುಖವಾಗಿ ದಾಂಪತ್ಯ ಜೀವನ ನಡೆಸಿ, ಯಾವುದೇ ರಂಪಾಟ ಇಲ್ಲದೇ ಡಿವೋರ್ಸ್​ (Divorce)ಪಡೆದುಕೊಂಡಿದ್ದಾರೆ. ಅವರಿಬ್ಬರು ಈ ಬೆಳವಣಿಗೆಯನ್ನು ತುಂಬ ಕೂಲ್​ ಆಗಿ ಸ್ವೀಕರಿಸಿದ್ದಾರೆ. ಆದರೆ ಟೀಕೆ ಮಾಡುವವರ ಸಂಖ್ಯೆಯೇ ದೊಡ್ಡದಿದೆ. ಈಗ ಆಮಿರ್​-ಕಿರಣ್​ ರಾವ್​ (Kiran Rao) ವಿಚ್ಛೇದನದ ಬಗ್ಗೆ ಬಿಜೆಪಿ ಸಂಸದ ಸುಧೀರ್​ ಗುಪ್ತಾ (Sudhir Gupta) ಅವರು ಕೆಲವು ಹೇಳಿಕೆಗಳನ್ನು ನೀಡಿ ಸುದ್ದಿ ಆಗಿದ್ದಾರೆ.

ಮಧ್ಯಪ್ರದೇಶದ ಬಿಜೆಪಿ ಸಂಸದ ಸುಧೀರ್​ ಗುಪ್ತಾ ಅವರು ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಆಗಾಗ ಸುದ್ದಿ ಆಗುತ್ತಿರುತ್ತಾರೆ. ವಿಶ್ವ ಜನಸಂಖ್ಯಾ ದಿನದ ಪ್ರಯುಕ್ತ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಆಮಿರ್​ ಖಾನ್​ ಬಗ್ಗೆ ವ್ಯಂಗ್ಯದ ಮಾತುಗಳನ್ನು ಆಡಿದ್ದಾರೆ. ‘ಆಮಿರ್​ ಖಾನ್​ ಅವರು ತಮ್ಮ ಮೊದಲ ಹೆಂಡತಿ ರೀನಾ ದತ್ತಾಗೆ ಎರಡು ಮಕ್ಕಳಾದ ಬಳಿಕ ವಿಚ್ಛೇದನ ನೀಡಿದ್ದರು. ಈಗ ಎರಡನೇ ಹೆಂಡತಿ ಕಿರಣ್​ ರಾವ್​ಗೆ ಒಂದು ಮಗು ಆದ ನಂತರ ವಿಚ್ಛೇದನ ನೀಡಿದ್ದಾರೆ. ಅಜ್ಜನಾಗುವ ವಯಸ್ಸಿನಲ್ಲಿ ಅವರು ಮೂರನೇ ಹೆಂಡತಿಯನ್ನು ಬಯಸುತ್ತಿದ್ದಾರೆ’ ಎಂದು ಸುಧೀರ್​ ಗುಪ್ತಾ ಹೇಳಿದ್ದಾರೆ.

15 ವರ್ಷ ಯಾವುದೇ ಕಿರಿಕ್​ ಇಲ್ಲದೆ ಸಂಸಾರ ನಡೆಸಿದ ಆಮಿರ್​ ಖಾನ್​ ಮತ್ತು ಕಿರಣ್​ ರಾವ್​ ಅವರ ವಿಚ್ಛೇದನದ ಸುದ್ದಿ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಡಿವೋರ್ಸ್​ ಬಳಿಕ ತಮ್ಮ ಪುತ್ರ ಆಜಾದ್​ ರಾವ್​ ಖಾನ್​ನನ್ನು ಬೆಳೆಸುವ ಜವಾಬ್ದಾರಿಯನ್ನು ಇಬ್ಬರೂ ಸಮನಾಗಿ ಹೊಂದಿದ್ದಾರೆ. ಪಾನಿ ಫೌಂಡೇಶನ್​ ಮತ್ತು ಕೆಲವು ಸಿನಿಮಾ ಸೇರಿದಂತೆ ಅನೇಕ ಪ್ರಾಜೆಕ್ಟ್​ಗಳನ್ನು ಜೊತೆಯಾಗಿ ಮುಂದುವರಿಸುವುದಾಗಿ ಅವರು ತೀರ್ಮಾನ ತೆಗೆದುಕೊಂಡಿದ್ದಾರೆ.

ಕಿರಣ್​ ರಾವ್​ಗೆ ವಿಚ್ಛೇದನ ನೀಡಿರುವ ಆಮಿರ್​ ಖಾನ್​ ಅವರು ಈಗ ಯಾರನ್ನು ಮದುವೆ ಆಗಬಹುದು ಎಂಬ ಬಗ್ಗೆ ಹಲವು ಊಹಾಪೋಹಗಳು ಹರಿದಾಡುತ್ತಿವೆ. ಆದರೆ ಆ ವಿಚಾರಗಳ ಬಗ್ಗೆ ಅವರು ಯಾವುದೇ ಹೇಳಿಕೆ ನೀಡಿಲ್ಲ. ಸದ್ಯ ಅವರು ನಟಿಸಿರುವ ‘ಲಾಲ್​ ಸಿಂಗ್​ ಚೆಡ್ಡಾ’ ಸಿನಿಮಾದ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ.

ಇದನ್ನೂ ಓದಿ:

ಆಮಿರ್​​ ಖಾನ್​ ಸಂಬಂಧಿ ಇಮ್ರಾನ್​ ಖಾನ್​ ಮೂರು ಮತ್ತೊಂದು ಸಿನಿಮಾ ಮಾಡಿ ನಟನೆಗೆ ಗುಡ್​ಬೈ ಹೇಳಿದ್ದು ಯಾಕೆ?

‘ವಿಚ್ಛೇದನವನ್ನು ಸಂಭ್ರಮಿಸಬೇಕು’; ಆಮಿರ್​-ಕಿರಣ್​ಗೆ ಕಿವಿಮಾತು ಹೇಳಿದ ಖ್ಯಾತ ನಿರ್ದೇಶಕ

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!