AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಜ್ಜನಾಗುವ ವಯಸ್ಸಿನಲ್ಲಿ ಆಮಿರ್​ ಖಾನ್​ಗೆ 3ನೇ ಹೆಂಡತಿ ಚಿಂತೆ’: ಬಿಜೆಪಿ ಸಂಸದ ಸುಧೀರ್​ ಗುಪ್ತಾ

ಬಿಜೆಪಿ ಸಂಸದ ಸುಧೀರ್​ ಗುಪ್ತಾ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಆಗಾಗ ಸುದ್ದಿ ಆಗುತ್ತಿರುತ್ತಾರೆ. ಈಗ ಅವರು ಆಮಿರ್​ ಖಾನ್​ ಬಗ್ಗೆ ವ್ಯಂಗ್ಯದ ಮಾತುಗಳನ್ನು ಆಡಿದ್ದಾರೆ.

‘ಅಜ್ಜನಾಗುವ ವಯಸ್ಸಿನಲ್ಲಿ ಆಮಿರ್​ ಖಾನ್​ಗೆ 3ನೇ ಹೆಂಡತಿ ಚಿಂತೆ’: ಬಿಜೆಪಿ ಸಂಸದ ಸುಧೀರ್​ ಗುಪ್ತಾ
ಆಮಿರ್​ ಖಾನ್​, ಕಿರಣ್​ ರಾವ್​, ಸುಧೀರ್​ ಗುಪ್ತಾ
TV9 Web
| Edited By: |

Updated on: Jul 13, 2021 | 12:20 PM

Share

ಎರಡನೇ ಪತ್ನಿ ಕಿರಣ್​ ರಾವ್​ಗೆ ವಿಚ್ಛೇದನ ನೀಡಿದ ಬಳಿಕ ಆಮಿರ್​ ಖಾನ್​ (Aamir Khan) ಅವರು ಹಲವರ ಟೀಕೆಗೆ ಒಳಗಾಗುತ್ತಿದ್ದಾರೆ. ಆಮಿರ್​ ಖಾನ್​ ಮತ್ತು ಕಿರಣ್​ ರಾವ್​ 15 ವರ್ಷ ಸುಖವಾಗಿ ದಾಂಪತ್ಯ ಜೀವನ ನಡೆಸಿ, ಯಾವುದೇ ರಂಪಾಟ ಇಲ್ಲದೇ ಡಿವೋರ್ಸ್​ (Divorce)ಪಡೆದುಕೊಂಡಿದ್ದಾರೆ. ಅವರಿಬ್ಬರು ಈ ಬೆಳವಣಿಗೆಯನ್ನು ತುಂಬ ಕೂಲ್​ ಆಗಿ ಸ್ವೀಕರಿಸಿದ್ದಾರೆ. ಆದರೆ ಟೀಕೆ ಮಾಡುವವರ ಸಂಖ್ಯೆಯೇ ದೊಡ್ಡದಿದೆ. ಈಗ ಆಮಿರ್​-ಕಿರಣ್​ ರಾವ್​ (Kiran Rao) ವಿಚ್ಛೇದನದ ಬಗ್ಗೆ ಬಿಜೆಪಿ ಸಂಸದ ಸುಧೀರ್​ ಗುಪ್ತಾ (Sudhir Gupta) ಅವರು ಕೆಲವು ಹೇಳಿಕೆಗಳನ್ನು ನೀಡಿ ಸುದ್ದಿ ಆಗಿದ್ದಾರೆ.

ಮಧ್ಯಪ್ರದೇಶದ ಬಿಜೆಪಿ ಸಂಸದ ಸುಧೀರ್​ ಗುಪ್ತಾ ಅವರು ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಆಗಾಗ ಸುದ್ದಿ ಆಗುತ್ತಿರುತ್ತಾರೆ. ವಿಶ್ವ ಜನಸಂಖ್ಯಾ ದಿನದ ಪ್ರಯುಕ್ತ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಆಮಿರ್​ ಖಾನ್​ ಬಗ್ಗೆ ವ್ಯಂಗ್ಯದ ಮಾತುಗಳನ್ನು ಆಡಿದ್ದಾರೆ. ‘ಆಮಿರ್​ ಖಾನ್​ ಅವರು ತಮ್ಮ ಮೊದಲ ಹೆಂಡತಿ ರೀನಾ ದತ್ತಾಗೆ ಎರಡು ಮಕ್ಕಳಾದ ಬಳಿಕ ವಿಚ್ಛೇದನ ನೀಡಿದ್ದರು. ಈಗ ಎರಡನೇ ಹೆಂಡತಿ ಕಿರಣ್​ ರಾವ್​ಗೆ ಒಂದು ಮಗು ಆದ ನಂತರ ವಿಚ್ಛೇದನ ನೀಡಿದ್ದಾರೆ. ಅಜ್ಜನಾಗುವ ವಯಸ್ಸಿನಲ್ಲಿ ಅವರು ಮೂರನೇ ಹೆಂಡತಿಯನ್ನು ಬಯಸುತ್ತಿದ್ದಾರೆ’ ಎಂದು ಸುಧೀರ್​ ಗುಪ್ತಾ ಹೇಳಿದ್ದಾರೆ.

15 ವರ್ಷ ಯಾವುದೇ ಕಿರಿಕ್​ ಇಲ್ಲದೆ ಸಂಸಾರ ನಡೆಸಿದ ಆಮಿರ್​ ಖಾನ್​ ಮತ್ತು ಕಿರಣ್​ ರಾವ್​ ಅವರ ವಿಚ್ಛೇದನದ ಸುದ್ದಿ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಡಿವೋರ್ಸ್​ ಬಳಿಕ ತಮ್ಮ ಪುತ್ರ ಆಜಾದ್​ ರಾವ್​ ಖಾನ್​ನನ್ನು ಬೆಳೆಸುವ ಜವಾಬ್ದಾರಿಯನ್ನು ಇಬ್ಬರೂ ಸಮನಾಗಿ ಹೊಂದಿದ್ದಾರೆ. ಪಾನಿ ಫೌಂಡೇಶನ್​ ಮತ್ತು ಕೆಲವು ಸಿನಿಮಾ ಸೇರಿದಂತೆ ಅನೇಕ ಪ್ರಾಜೆಕ್ಟ್​ಗಳನ್ನು ಜೊತೆಯಾಗಿ ಮುಂದುವರಿಸುವುದಾಗಿ ಅವರು ತೀರ್ಮಾನ ತೆಗೆದುಕೊಂಡಿದ್ದಾರೆ.

ಕಿರಣ್​ ರಾವ್​ಗೆ ವಿಚ್ಛೇದನ ನೀಡಿರುವ ಆಮಿರ್​ ಖಾನ್​ ಅವರು ಈಗ ಯಾರನ್ನು ಮದುವೆ ಆಗಬಹುದು ಎಂಬ ಬಗ್ಗೆ ಹಲವು ಊಹಾಪೋಹಗಳು ಹರಿದಾಡುತ್ತಿವೆ. ಆದರೆ ಆ ವಿಚಾರಗಳ ಬಗ್ಗೆ ಅವರು ಯಾವುದೇ ಹೇಳಿಕೆ ನೀಡಿಲ್ಲ. ಸದ್ಯ ಅವರು ನಟಿಸಿರುವ ‘ಲಾಲ್​ ಸಿಂಗ್​ ಚೆಡ್ಡಾ’ ಸಿನಿಮಾದ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ.

ಇದನ್ನೂ ಓದಿ:

ಆಮಿರ್​​ ಖಾನ್​ ಸಂಬಂಧಿ ಇಮ್ರಾನ್​ ಖಾನ್​ ಮೂರು ಮತ್ತೊಂದು ಸಿನಿಮಾ ಮಾಡಿ ನಟನೆಗೆ ಗುಡ್​ಬೈ ಹೇಳಿದ್ದು ಯಾಕೆ?

‘ವಿಚ್ಛೇದನವನ್ನು ಸಂಭ್ರಮಿಸಬೇಕು’; ಆಮಿರ್​-ಕಿರಣ್​ಗೆ ಕಿವಿಮಾತು ಹೇಳಿದ ಖ್ಯಾತ ನಿರ್ದೇಶಕ

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್