AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aamir Khan: ಕಾಂಗ್ರೆಸ್ ವಿರುದ್ಧವೇ ದೂರು ದಾಖಲಿಸಿದ ನಟ ಆಮಿರ್ ಖಾನ್: ಆಗಿದ್ದೇನು?

ನಟ ಆಮಿರ್ ಖಾನ್ ಅವರು ಈ ಹಿಂದೆ 'ಸತ್ಯಮೇವ್ ಜಯತೇ' ಎಂಬ ಕಾರ್ಯಕ್ರಮವೊಂದನ್ನು ಮಾಡುತ್ತಿದ್ದರು. ಆ ಕಾರ್ಯಕ್ರಮದ ದೃಶ್ಯವನ್ನು ಇಟ್ಟುಕೊಂಡು ಕಾಂಗ್ರೆಸ್​​ ಆಡಳಿತಾರೂಢ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಡೀಪ್‌ ಫೇಕ್​​ ತಂತ್ರಜ್ಞಾನದ ಮೂಲಕ ವಿಡಿಯೋ ಮಾಡಿ ಸೋಶಿಯಲ್​ ಮಿಡಿಯಾದಲ್ಲಿ ಹರಿಬಿಡಲಾಗಿದೆ ಎಂದು ಆಮಿರ್ ಖಾನ್​ ವಕ್ತಾರ ಮುಂಬೈ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

Aamir Khan: ಕಾಂಗ್ರೆಸ್ ವಿರುದ್ಧವೇ ದೂರು ದಾಖಲಿಸಿದ ನಟ ಆಮಿರ್ ಖಾನ್: ಆಗಿದ್ದೇನು?
ಆಮಿರ್ ಖಾನ್
ಗಂಗಾಧರ​ ಬ. ಸಾಬೋಜಿ
|

Updated on:Apr 17, 2024 | 9:21 PM

Share

ಲೋಕಸಭೆ ಚುನಾವಣೆ ವೇಳೆ ಬಾಲಿವುಡ್​ನ​ ಮಿಸ್ಟರ್​ ಪರ್ಫೆಕ್ಟ್ ನಟ ಆಮಿರ್ ಖಾನ್ (Aamir Khan)  ಅವರು ಕಾಂಗ್ರೆಸ್ (Congress)​ ವಿರುದ್ಧ ಸಮರಕ್ಕಿಳಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ರಾಜಕೀಯ ಜಾಹೀರಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್​ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಡೀಪ್‌ ಫೇಕ್ ವಿಡಿಯೋವನ್ನು ಕಾಂಗ್ರೆಸ್​ ಬಳಸಿಕೊಂಡಿದೆ ಎಂದು ಆರೋಪಿಸಿ ಕೇಸ್​ ದಾಖಲಿಸಲಾಗಿದ್ದು, ಎಫ್‌ಐಆರ್ ಕೂಡ ಹಾಕಲಾಗಿದೆ.

ನಟ ಆಮಿರ್ ಖಾನ್ ಅವರು ಈ ಹಿಂದೆ ‘ಸತ್ಯಮೇವ್ ಜಯತೇ’ ಎಂಬ ಕಾರ್ಯಕ್ರಮವೊಂದನ್ನು ಮಾಡುತ್ತಿದ್ದರು. ಆ ಕಾರ್ಯಕ್ರಮದ ದೃಶ್ಯವನ್ನು ಇಟ್ಟುಕೊಂಡು ಕಾಂಗ್ರೆಸ್​​ ಆಡಳಿತಾರೂಢ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಡೀಪ್‌ ಫೇಕ್​​ ತಂತ್ರಜ್ಞಾನದ ಮೂಲಕ ವಿಡಿಯೋ ಮಾಡಿ ಸೋಶಿಯಲ್​ ಮಿಡಿಯಾದಲ್ಲಿ ಹರಿಬಿಡಲಾಗಿದೆ ಎಂದು ಆಮಿರ್ ಖಾನ್​ ವಕ್ತಾರ ಮುಂಬೈ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಮುಂದಿನ ಹತ್ತು ವರ್ಷಗಳ ಯೋಜನೆ ತಿಳಿಸಿದ ಆಮಿರ್ ಖಾನ್

ಡೀಪ್‌ ಫೇಕ್ ಮೂಲಕ ಸೃಷ್ಟಿಸಿರುವ ಕಾಂಗ್ರೆಸ್​ ಜಾಹೀರಾತಿನಲ್ಲಿ, ನಾಗರಿಕರ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವ ಬಿಜೆಪಿಯ ಭರವಸೆಯನ್ನು ನಟ ಆಮಿರ್ ಖಾನ್ ಅವರು ಟೀಕಿಸುವುದನ್ನು ಕಾಣಬಹುದಾಗಿದೆ.

ಸದ್ಯ ಈ ಪ್ರಕರಣ ಕುರಿತಾಗಿ ಆಮಿರ್ ಖಾನ್ ಅವರ ವಕ್ತಾರ ಮಾತನಾಡಿದ್ದು, ಆಮಿರ್ ಖಾನ್ ಅವರು ತಮ್ಮ 35 ವರ್ಷಗಳ ವೃತ್ತಿಜೀವನದುದ್ದಕ್ಕೂ ಯಾವುದೇ ರಾಜಕೀಯ ಪಕ್ಷವನ್ನು ಅವರು ಟೀಕೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅದಲ್ಲದೇ ಈ ಹಿಂದಿನ ಹಲವು ಚುನಾವಣೆಗಳಲ್ಲಿ ಜಾಗೃತಿ ಅಭಿಯಾನಗಳ ಮೂಲಕ ಸಾರ್ವಜನಿಕ ಜಾಗೃತಿ ಮೂಡಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದಾರೆ. ಇದೀಗ ಡೀಪ್‌ಫೇಕ್​ ವಿಡಿಯೋ ಮೂಲಕ ಸುಳ್ಳು ಮತ್ತು ದಾರಿತಪ್ಪಿಸುವ ಕೆಲಸವಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ‘ಡ್ರಗ್ಸ್​ ತೆಗೆದುಕೊಳ್ಳುವುದು ನಿಲ್ಲಿಸಿ’: ಲೈವ್​ನಲ್ಲೇ ಆಮಿರ್​ ಖಾನ್​ಗೆ ಟ್ರೋಲ್​; ನಟನ ಉತ್ತರ ಏನು?

ಮುಂಬೈ ಪೊಲೀಸರು, ಸೈಬರ್ ಕ್ರೈಂ ಸೆಲ್ ಸೇರಿದಂತೆ ಕಾನೂನು ಅಧಿಕಾರಿಗಳವರೆಗೂ ಆಮಿರ್ ಖಾನ್ ಅವರ ವಿಚಾರ ತಪುಪಿದೆ. ಈ ಕುರಿತಾಗಿ ಪೊಲೀಸ್​ ಇಲಾಖೆ ಕೂಡ ಕ್ರಮಕ್ಕೆ ಮುಂದಾಗಿದೆ. ಇದೊಂದು ನಕಲಿ ವಿಡಿಯೋ ಮತ್ತು ಸುಳ್ಳು ಮಾಹಿತಿಯಾಗಿದೆ. ಈ ಹಿನ್ನೆಲೆ ಸೈಬರ್ ಕ್ರೈಂ ಸೆಲ್‌ನಲ್ಲಿ ಎಫ್‌ಐಆರ್ ದಾಖಲಿಸುವುದು ಸೇರಿದಂತೆ ಈ ವಿಷಯಕ್ಕೆ ಸಂಬಂಧಿಸಿದ ವಿವಿಧ ಅಧಿಕಾರಿಗಳಿಗೆ ಅವರು ವರದಿ ಮಾಡಿದ್ದಾರೆ. ಪ್ರತಿಯೊಬ್ಬ ಭಾರತೀಯರು ಕೂಡ ಹೊರಬಂದು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರೊಂದಿಗೆ ಮತ ಚಲಾಯಿಸಬೇಕು ಎಂಬುವುದು ಆಮಿರ್ ಖಾನ್​ ಅವರು ಬಯಸುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:19 pm, Wed, 17 April 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್