AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aamir Khan: ಕಾಂಗ್ರೆಸ್ ವಿರುದ್ಧವೇ ದೂರು ದಾಖಲಿಸಿದ ನಟ ಆಮಿರ್ ಖಾನ್: ಆಗಿದ್ದೇನು?

ನಟ ಆಮಿರ್ ಖಾನ್ ಅವರು ಈ ಹಿಂದೆ 'ಸತ್ಯಮೇವ್ ಜಯತೇ' ಎಂಬ ಕಾರ್ಯಕ್ರಮವೊಂದನ್ನು ಮಾಡುತ್ತಿದ್ದರು. ಆ ಕಾರ್ಯಕ್ರಮದ ದೃಶ್ಯವನ್ನು ಇಟ್ಟುಕೊಂಡು ಕಾಂಗ್ರೆಸ್​​ ಆಡಳಿತಾರೂಢ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಡೀಪ್‌ ಫೇಕ್​​ ತಂತ್ರಜ್ಞಾನದ ಮೂಲಕ ವಿಡಿಯೋ ಮಾಡಿ ಸೋಶಿಯಲ್​ ಮಿಡಿಯಾದಲ್ಲಿ ಹರಿಬಿಡಲಾಗಿದೆ ಎಂದು ಆಮಿರ್ ಖಾನ್​ ವಕ್ತಾರ ಮುಂಬೈ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

Aamir Khan: ಕಾಂಗ್ರೆಸ್ ವಿರುದ್ಧವೇ ದೂರು ದಾಖಲಿಸಿದ ನಟ ಆಮಿರ್ ಖಾನ್: ಆಗಿದ್ದೇನು?
ಆಮಿರ್ ಖಾನ್
ಗಂಗಾಧರ​ ಬ. ಸಾಬೋಜಿ
|

Updated on:Apr 17, 2024 | 9:21 PM

Share

ಲೋಕಸಭೆ ಚುನಾವಣೆ ವೇಳೆ ಬಾಲಿವುಡ್​ನ​ ಮಿಸ್ಟರ್​ ಪರ್ಫೆಕ್ಟ್ ನಟ ಆಮಿರ್ ಖಾನ್ (Aamir Khan)  ಅವರು ಕಾಂಗ್ರೆಸ್ (Congress)​ ವಿರುದ್ಧ ಸಮರಕ್ಕಿಳಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ರಾಜಕೀಯ ಜಾಹೀರಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್​ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಡೀಪ್‌ ಫೇಕ್ ವಿಡಿಯೋವನ್ನು ಕಾಂಗ್ರೆಸ್​ ಬಳಸಿಕೊಂಡಿದೆ ಎಂದು ಆರೋಪಿಸಿ ಕೇಸ್​ ದಾಖಲಿಸಲಾಗಿದ್ದು, ಎಫ್‌ಐಆರ್ ಕೂಡ ಹಾಕಲಾಗಿದೆ.

ನಟ ಆಮಿರ್ ಖಾನ್ ಅವರು ಈ ಹಿಂದೆ ‘ಸತ್ಯಮೇವ್ ಜಯತೇ’ ಎಂಬ ಕಾರ್ಯಕ್ರಮವೊಂದನ್ನು ಮಾಡುತ್ತಿದ್ದರು. ಆ ಕಾರ್ಯಕ್ರಮದ ದೃಶ್ಯವನ್ನು ಇಟ್ಟುಕೊಂಡು ಕಾಂಗ್ರೆಸ್​​ ಆಡಳಿತಾರೂಢ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಡೀಪ್‌ ಫೇಕ್​​ ತಂತ್ರಜ್ಞಾನದ ಮೂಲಕ ವಿಡಿಯೋ ಮಾಡಿ ಸೋಶಿಯಲ್​ ಮಿಡಿಯಾದಲ್ಲಿ ಹರಿಬಿಡಲಾಗಿದೆ ಎಂದು ಆಮಿರ್ ಖಾನ್​ ವಕ್ತಾರ ಮುಂಬೈ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಮುಂದಿನ ಹತ್ತು ವರ್ಷಗಳ ಯೋಜನೆ ತಿಳಿಸಿದ ಆಮಿರ್ ಖಾನ್

ಡೀಪ್‌ ಫೇಕ್ ಮೂಲಕ ಸೃಷ್ಟಿಸಿರುವ ಕಾಂಗ್ರೆಸ್​ ಜಾಹೀರಾತಿನಲ್ಲಿ, ನಾಗರಿಕರ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವ ಬಿಜೆಪಿಯ ಭರವಸೆಯನ್ನು ನಟ ಆಮಿರ್ ಖಾನ್ ಅವರು ಟೀಕಿಸುವುದನ್ನು ಕಾಣಬಹುದಾಗಿದೆ.

ಸದ್ಯ ಈ ಪ್ರಕರಣ ಕುರಿತಾಗಿ ಆಮಿರ್ ಖಾನ್ ಅವರ ವಕ್ತಾರ ಮಾತನಾಡಿದ್ದು, ಆಮಿರ್ ಖಾನ್ ಅವರು ತಮ್ಮ 35 ವರ್ಷಗಳ ವೃತ್ತಿಜೀವನದುದ್ದಕ್ಕೂ ಯಾವುದೇ ರಾಜಕೀಯ ಪಕ್ಷವನ್ನು ಅವರು ಟೀಕೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅದಲ್ಲದೇ ಈ ಹಿಂದಿನ ಹಲವು ಚುನಾವಣೆಗಳಲ್ಲಿ ಜಾಗೃತಿ ಅಭಿಯಾನಗಳ ಮೂಲಕ ಸಾರ್ವಜನಿಕ ಜಾಗೃತಿ ಮೂಡಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದಾರೆ. ಇದೀಗ ಡೀಪ್‌ಫೇಕ್​ ವಿಡಿಯೋ ಮೂಲಕ ಸುಳ್ಳು ಮತ್ತು ದಾರಿತಪ್ಪಿಸುವ ಕೆಲಸವಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ‘ಡ್ರಗ್ಸ್​ ತೆಗೆದುಕೊಳ್ಳುವುದು ನಿಲ್ಲಿಸಿ’: ಲೈವ್​ನಲ್ಲೇ ಆಮಿರ್​ ಖಾನ್​ಗೆ ಟ್ರೋಲ್​; ನಟನ ಉತ್ತರ ಏನು?

ಮುಂಬೈ ಪೊಲೀಸರು, ಸೈಬರ್ ಕ್ರೈಂ ಸೆಲ್ ಸೇರಿದಂತೆ ಕಾನೂನು ಅಧಿಕಾರಿಗಳವರೆಗೂ ಆಮಿರ್ ಖಾನ್ ಅವರ ವಿಚಾರ ತಪುಪಿದೆ. ಈ ಕುರಿತಾಗಿ ಪೊಲೀಸ್​ ಇಲಾಖೆ ಕೂಡ ಕ್ರಮಕ್ಕೆ ಮುಂದಾಗಿದೆ. ಇದೊಂದು ನಕಲಿ ವಿಡಿಯೋ ಮತ್ತು ಸುಳ್ಳು ಮಾಹಿತಿಯಾಗಿದೆ. ಈ ಹಿನ್ನೆಲೆ ಸೈಬರ್ ಕ್ರೈಂ ಸೆಲ್‌ನಲ್ಲಿ ಎಫ್‌ಐಆರ್ ದಾಖಲಿಸುವುದು ಸೇರಿದಂತೆ ಈ ವಿಷಯಕ್ಕೆ ಸಂಬಂಧಿಸಿದ ವಿವಿಧ ಅಧಿಕಾರಿಗಳಿಗೆ ಅವರು ವರದಿ ಮಾಡಿದ್ದಾರೆ. ಪ್ರತಿಯೊಬ್ಬ ಭಾರತೀಯರು ಕೂಡ ಹೊರಬಂದು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರೊಂದಿಗೆ ಮತ ಚಲಾಯಿಸಬೇಕು ಎಂಬುವುದು ಆಮಿರ್ ಖಾನ್​ ಅವರು ಬಯಸುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:19 pm, Wed, 17 April 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?