AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aamir Khan: ಕಾಂಗ್ರೆಸ್ ವಿರುದ್ಧವೇ ದೂರು ದಾಖಲಿಸಿದ ನಟ ಆಮಿರ್ ಖಾನ್: ಆಗಿದ್ದೇನು?

ನಟ ಆಮಿರ್ ಖಾನ್ ಅವರು ಈ ಹಿಂದೆ 'ಸತ್ಯಮೇವ್ ಜಯತೇ' ಎಂಬ ಕಾರ್ಯಕ್ರಮವೊಂದನ್ನು ಮಾಡುತ್ತಿದ್ದರು. ಆ ಕಾರ್ಯಕ್ರಮದ ದೃಶ್ಯವನ್ನು ಇಟ್ಟುಕೊಂಡು ಕಾಂಗ್ರೆಸ್​​ ಆಡಳಿತಾರೂಢ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಡೀಪ್‌ ಫೇಕ್​​ ತಂತ್ರಜ್ಞಾನದ ಮೂಲಕ ವಿಡಿಯೋ ಮಾಡಿ ಸೋಶಿಯಲ್​ ಮಿಡಿಯಾದಲ್ಲಿ ಹರಿಬಿಡಲಾಗಿದೆ ಎಂದು ಆಮಿರ್ ಖಾನ್​ ವಕ್ತಾರ ಮುಂಬೈ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

Aamir Khan: ಕಾಂಗ್ರೆಸ್ ವಿರುದ್ಧವೇ ದೂರು ದಾಖಲಿಸಿದ ನಟ ಆಮಿರ್ ಖಾನ್: ಆಗಿದ್ದೇನು?
ಆಮಿರ್ ಖಾನ್
ಗಂಗಾಧರ​ ಬ. ಸಾಬೋಜಿ
|

Updated on:Apr 17, 2024 | 9:21 PM

Share

ಲೋಕಸಭೆ ಚುನಾವಣೆ ವೇಳೆ ಬಾಲಿವುಡ್​ನ​ ಮಿಸ್ಟರ್​ ಪರ್ಫೆಕ್ಟ್ ನಟ ಆಮಿರ್ ಖಾನ್ (Aamir Khan)  ಅವರು ಕಾಂಗ್ರೆಸ್ (Congress)​ ವಿರುದ್ಧ ಸಮರಕ್ಕಿಳಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ರಾಜಕೀಯ ಜಾಹೀರಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್​ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಡೀಪ್‌ ಫೇಕ್ ವಿಡಿಯೋವನ್ನು ಕಾಂಗ್ರೆಸ್​ ಬಳಸಿಕೊಂಡಿದೆ ಎಂದು ಆರೋಪಿಸಿ ಕೇಸ್​ ದಾಖಲಿಸಲಾಗಿದ್ದು, ಎಫ್‌ಐಆರ್ ಕೂಡ ಹಾಕಲಾಗಿದೆ.

ನಟ ಆಮಿರ್ ಖಾನ್ ಅವರು ಈ ಹಿಂದೆ ‘ಸತ್ಯಮೇವ್ ಜಯತೇ’ ಎಂಬ ಕಾರ್ಯಕ್ರಮವೊಂದನ್ನು ಮಾಡುತ್ತಿದ್ದರು. ಆ ಕಾರ್ಯಕ್ರಮದ ದೃಶ್ಯವನ್ನು ಇಟ್ಟುಕೊಂಡು ಕಾಂಗ್ರೆಸ್​​ ಆಡಳಿತಾರೂಢ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಡೀಪ್‌ ಫೇಕ್​​ ತಂತ್ರಜ್ಞಾನದ ಮೂಲಕ ವಿಡಿಯೋ ಮಾಡಿ ಸೋಶಿಯಲ್​ ಮಿಡಿಯಾದಲ್ಲಿ ಹರಿಬಿಡಲಾಗಿದೆ ಎಂದು ಆಮಿರ್ ಖಾನ್​ ವಕ್ತಾರ ಮುಂಬೈ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಮುಂದಿನ ಹತ್ತು ವರ್ಷಗಳ ಯೋಜನೆ ತಿಳಿಸಿದ ಆಮಿರ್ ಖಾನ್

ಡೀಪ್‌ ಫೇಕ್ ಮೂಲಕ ಸೃಷ್ಟಿಸಿರುವ ಕಾಂಗ್ರೆಸ್​ ಜಾಹೀರಾತಿನಲ್ಲಿ, ನಾಗರಿಕರ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವ ಬಿಜೆಪಿಯ ಭರವಸೆಯನ್ನು ನಟ ಆಮಿರ್ ಖಾನ್ ಅವರು ಟೀಕಿಸುವುದನ್ನು ಕಾಣಬಹುದಾಗಿದೆ.

ಸದ್ಯ ಈ ಪ್ರಕರಣ ಕುರಿತಾಗಿ ಆಮಿರ್ ಖಾನ್ ಅವರ ವಕ್ತಾರ ಮಾತನಾಡಿದ್ದು, ಆಮಿರ್ ಖಾನ್ ಅವರು ತಮ್ಮ 35 ವರ್ಷಗಳ ವೃತ್ತಿಜೀವನದುದ್ದಕ್ಕೂ ಯಾವುದೇ ರಾಜಕೀಯ ಪಕ್ಷವನ್ನು ಅವರು ಟೀಕೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅದಲ್ಲದೇ ಈ ಹಿಂದಿನ ಹಲವು ಚುನಾವಣೆಗಳಲ್ಲಿ ಜಾಗೃತಿ ಅಭಿಯಾನಗಳ ಮೂಲಕ ಸಾರ್ವಜನಿಕ ಜಾಗೃತಿ ಮೂಡಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದಾರೆ. ಇದೀಗ ಡೀಪ್‌ಫೇಕ್​ ವಿಡಿಯೋ ಮೂಲಕ ಸುಳ್ಳು ಮತ್ತು ದಾರಿತಪ್ಪಿಸುವ ಕೆಲಸವಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ‘ಡ್ರಗ್ಸ್​ ತೆಗೆದುಕೊಳ್ಳುವುದು ನಿಲ್ಲಿಸಿ’: ಲೈವ್​ನಲ್ಲೇ ಆಮಿರ್​ ಖಾನ್​ಗೆ ಟ್ರೋಲ್​; ನಟನ ಉತ್ತರ ಏನು?

ಮುಂಬೈ ಪೊಲೀಸರು, ಸೈಬರ್ ಕ್ರೈಂ ಸೆಲ್ ಸೇರಿದಂತೆ ಕಾನೂನು ಅಧಿಕಾರಿಗಳವರೆಗೂ ಆಮಿರ್ ಖಾನ್ ಅವರ ವಿಚಾರ ತಪುಪಿದೆ. ಈ ಕುರಿತಾಗಿ ಪೊಲೀಸ್​ ಇಲಾಖೆ ಕೂಡ ಕ್ರಮಕ್ಕೆ ಮುಂದಾಗಿದೆ. ಇದೊಂದು ನಕಲಿ ವಿಡಿಯೋ ಮತ್ತು ಸುಳ್ಳು ಮಾಹಿತಿಯಾಗಿದೆ. ಈ ಹಿನ್ನೆಲೆ ಸೈಬರ್ ಕ್ರೈಂ ಸೆಲ್‌ನಲ್ಲಿ ಎಫ್‌ಐಆರ್ ದಾಖಲಿಸುವುದು ಸೇರಿದಂತೆ ಈ ವಿಷಯಕ್ಕೆ ಸಂಬಂಧಿಸಿದ ವಿವಿಧ ಅಧಿಕಾರಿಗಳಿಗೆ ಅವರು ವರದಿ ಮಾಡಿದ್ದಾರೆ. ಪ್ರತಿಯೊಬ್ಬ ಭಾರತೀಯರು ಕೂಡ ಹೊರಬಂದು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರೊಂದಿಗೆ ಮತ ಚಲಾಯಿಸಬೇಕು ಎಂಬುವುದು ಆಮಿರ್ ಖಾನ್​ ಅವರು ಬಯಸುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:19 pm, Wed, 17 April 24

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ