AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಚ್ಚುತ್ತಿರುವ ಮಧ್ಯೆಯೇ ಲೇಹ್-ಲಡಾಖ್​ಗೆ ತೆರಳಿದ ಆಮೀರ್​ ಖಾನ್​

ಲಾಲ್​ ಸಿಂಗ್​ ಚಡ್ಡಾ ಸಿನಿಮಾ ಕೆಲಸಗಳಲ್ಲಿ ಆಮೀರ್​ ಖಾನ್​ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಶೂಟಿಂಗ್​ಗೆ ಈಗಾಗಲೇ ಸಾಕಷ್ಟು ವಿಘ್ನಗಳು ಎದುರಾಗಿವೆ.

ಕೊರೊನಾ ಹೆಚ್ಚುತ್ತಿರುವ ಮಧ್ಯೆಯೇ ಲೇಹ್-ಲಡಾಖ್​ಗೆ ತೆರಳಿದ ಆಮೀರ್​ ಖಾನ್​
ಲಡಾಖ್​ನಲ್ಲಿ ಆಮೀರ್​ ಖಾನ್​
ರಾಜೇಶ್ ದುಗ್ಗುಮನೆ
| Edited By: |

Updated on:May 02, 2021 | 5:36 PM

Share

ಕೊರೊನಾ ವೈರಸ್​ ಎರಡನೇ ಅಲೆ ಭಾರತವನ್ನು ಬಿಟ್ಟು-ಬಿಡದೆ ಕಾಡುತ್ತಿದೆ. ಇದರಿಂದಾಗಿ ಮನೆಯಿಂದ ಹೊರಗೆ ಹೋಗುವುದಕ್ಕೂ ಭಯ ಬೀಳುವಂತಾಗಿದೆ. ಸಾಕಷ್ಟು ಸೆಲೆಬ್ರಿಟಿಗಳು ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ ಬಾಲಿವುಡ್​ ನಟ ಆಮೀರ್​ ಖಾನ್​ ಲೇಹ್-ಲಡಾಖ್​ಗೆ ತೆರಳಿದ್ದಾರೆ. ಅಷ್ಟೇ ಅಲ್ಲ ಸುಮಾರು 50 ದಿನಗಳ ಕಾಲ ಅವರು ಅಲ್ಲಿಯೇ ಇರಲಿದ್ದಾರಂತೆ.

‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದ ಕೆಲಸಗಳಲ್ಲಿ ಆಮೀರ್​ ಖಾನ್​ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಶೂಟಿಂಗ್​ಗೆ ಈಗಾಗಲೇ ಸಾಕಷ್ಟು ವಿಘ್ನಗಳು ಎದುರಾಗಿವೆ. ಇದನ್ನೆಲ್ಲವೂ ಮೆಟ್ಟಿ ನಿಂತಿರುವ ಆಮೀರ್​ ಖಾನ್ ಈಗ ಮತ್ತೆ ಸಿನಿಮಾದ ಶೂಟಿಂಗ್​ ಆರಂಭಿಸಿದ್ದಾರೆ. ಇದಕ್ಕಾಗಿಯೇ ಅವರು ಲೇಹ್​-ಲಡಾಖ್​ಗೆ ತೆರಳಿದ್ದಾರೆ. ಸದ್ಯ, ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿಯಾಗಿರುವ ಅವರು, ಹೆಚ್ಚು ಎಚ್ಚರಿಕೆ ವಹಿಸುತ್ತಿದ್ದಾರಂತೆ.

ಆಮೀರ್ ಖಾನ್​ ಲಡಾಖ್​ನಲ್ಲಿರುವ ಸಾಕಷ್ಟು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದವು. ಇದರ ಜತೆಗೆ ಲಾಲ್​ ಸಿಂಗ್​ ಚಡ್ಡಾ ಸಿನಿಮಾದ ಕೆಲ ಶೂಟಿಂಗ್​ ದೃಶ್ಯಗಳು ಲೀಕ್​ ಆಗಿತ್ತು. ಇದು ಆಮೀರ್​ ಖಾನ್​ಗೆ ಬೇಸರ ತರಿಸಿದೆ. ಹೀಗಾಗಿ, ಈ ಬಗ್ಗೆಯೂ ಆಮೀರ್​ ಖಾನ್​ ಹೆಚ್ಚು ಗಮನಹರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾರ್ಗಿಲ್​ ಭಾಗದಲ್ಲಿ ಪ್ರಮುಖ ದೃಶ್ಯಗಳ ಶೂಟಿಂಗ್​ ನಡೆಯಲಿದೆಯಂತೆ. ವಿಜಯ್ ಸೇತುಪತಿ ಸಿನಿಮಾದಲ್ಲಿ ನಟಿಸಬೇಕಿತ್ತು. ಅವರ ಬದಲಿಗೆ ನಾಗ ಚೈತನ್ಯ ಅವರು ಈಗ ಚಿತ್ರತಂಡ ಸೇರಿಕೊಂಡಿದ್ದಾರೆ. ನಾಗ ಚೈತನ್ಯ ಕೂಡ ಶೀಘ್ರವೇ ಸಿನಿಮಾ ಸೆಟ್​ ಸೇರಿಕೊಳ್ಳಲಿದ್ದಾರಂತೆ. 45 ದಿನಗಳ ಕಾಲ ಶೂಟಿಂಗ್​ ನಡೆಯಲಿದೆ. ಎಲ್ಲವನ್ನೂ ತುಂಬಾನೇ ಪರ್ಫೆಕ್ಟ್​ ಆಗಿ ಶೂಟ್​ ಮಾಡುವ ಆಲೋಚನೆ ಆಮೀರ್​ ಖಾನ್​ ಅವರದ್ದು.

ಹಾಲಿವುಡ್​ನ ‘ಫಾರೆಸ್ಟ್​ ಗಂಪ್​​’ ಸಿನಿಮಾದ ಹಿಂದಿ ರಿಮೇಕ್​ ಲಾಲ್​ ಸಿಂಗ್​ ಚಡ್ಡಾ. ಆಮೀರ್​ ಖಾನ್​ ಸಿನಿಮಾದಲ್ಲಿ ಲೀಡ್​ ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕರೀನಾ ಕಪೂರ್​ ಚಿತ್ರದ ನಾಯಕಿ. 2021ರ ಡಿಸೆಂಬರ್ ಅಂತ್ಯಕ್ಕೆ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ. ಆದರೆ, ಶೂಟಿಂಗ್​ ವಿಳಂಬವಾಗುತ್ತಿರುವುದರಿಂದ ಚಿತ್ರಕ್ಕೆ ಹಿನ್ನಡೆ ಉಂಟಾಗುತ್ತಿದೆ.

ಇದನ್ನೂ ಓದಿ: ಕಾನ್​​ ಚಿತ್ರೋತ್ಸವಕ್ಕೆ ಆಯ್ಕೆಯಾದ ಕನ್ನಡದ ‘ದೇವರ ಕನಸು’ ಸಿನಿಮಾ

Published On - 5:29 pm, Sun, 2 May 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ