AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಚ್ಚುತ್ತಿರುವ ಮಧ್ಯೆಯೇ ಲೇಹ್-ಲಡಾಖ್​ಗೆ ತೆರಳಿದ ಆಮೀರ್​ ಖಾನ್​

ಲಾಲ್​ ಸಿಂಗ್​ ಚಡ್ಡಾ ಸಿನಿಮಾ ಕೆಲಸಗಳಲ್ಲಿ ಆಮೀರ್​ ಖಾನ್​ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಶೂಟಿಂಗ್​ಗೆ ಈಗಾಗಲೇ ಸಾಕಷ್ಟು ವಿಘ್ನಗಳು ಎದುರಾಗಿವೆ.

ಕೊರೊನಾ ಹೆಚ್ಚುತ್ತಿರುವ ಮಧ್ಯೆಯೇ ಲೇಹ್-ಲಡಾಖ್​ಗೆ ತೆರಳಿದ ಆಮೀರ್​ ಖಾನ್​
ಲಡಾಖ್​ನಲ್ಲಿ ಆಮೀರ್​ ಖಾನ್​
ರಾಜೇಶ್ ದುಗ್ಗುಮನೆ
| Edited By: |

Updated on:May 02, 2021 | 5:36 PM

Share

ಕೊರೊನಾ ವೈರಸ್​ ಎರಡನೇ ಅಲೆ ಭಾರತವನ್ನು ಬಿಟ್ಟು-ಬಿಡದೆ ಕಾಡುತ್ತಿದೆ. ಇದರಿಂದಾಗಿ ಮನೆಯಿಂದ ಹೊರಗೆ ಹೋಗುವುದಕ್ಕೂ ಭಯ ಬೀಳುವಂತಾಗಿದೆ. ಸಾಕಷ್ಟು ಸೆಲೆಬ್ರಿಟಿಗಳು ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ ಬಾಲಿವುಡ್​ ನಟ ಆಮೀರ್​ ಖಾನ್​ ಲೇಹ್-ಲಡಾಖ್​ಗೆ ತೆರಳಿದ್ದಾರೆ. ಅಷ್ಟೇ ಅಲ್ಲ ಸುಮಾರು 50 ದಿನಗಳ ಕಾಲ ಅವರು ಅಲ್ಲಿಯೇ ಇರಲಿದ್ದಾರಂತೆ.

‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದ ಕೆಲಸಗಳಲ್ಲಿ ಆಮೀರ್​ ಖಾನ್​ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಶೂಟಿಂಗ್​ಗೆ ಈಗಾಗಲೇ ಸಾಕಷ್ಟು ವಿಘ್ನಗಳು ಎದುರಾಗಿವೆ. ಇದನ್ನೆಲ್ಲವೂ ಮೆಟ್ಟಿ ನಿಂತಿರುವ ಆಮೀರ್​ ಖಾನ್ ಈಗ ಮತ್ತೆ ಸಿನಿಮಾದ ಶೂಟಿಂಗ್​ ಆರಂಭಿಸಿದ್ದಾರೆ. ಇದಕ್ಕಾಗಿಯೇ ಅವರು ಲೇಹ್​-ಲಡಾಖ್​ಗೆ ತೆರಳಿದ್ದಾರೆ. ಸದ್ಯ, ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿಯಾಗಿರುವ ಅವರು, ಹೆಚ್ಚು ಎಚ್ಚರಿಕೆ ವಹಿಸುತ್ತಿದ್ದಾರಂತೆ.

ಆಮೀರ್ ಖಾನ್​ ಲಡಾಖ್​ನಲ್ಲಿರುವ ಸಾಕಷ್ಟು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದವು. ಇದರ ಜತೆಗೆ ಲಾಲ್​ ಸಿಂಗ್​ ಚಡ್ಡಾ ಸಿನಿಮಾದ ಕೆಲ ಶೂಟಿಂಗ್​ ದೃಶ್ಯಗಳು ಲೀಕ್​ ಆಗಿತ್ತು. ಇದು ಆಮೀರ್​ ಖಾನ್​ಗೆ ಬೇಸರ ತರಿಸಿದೆ. ಹೀಗಾಗಿ, ಈ ಬಗ್ಗೆಯೂ ಆಮೀರ್​ ಖಾನ್​ ಹೆಚ್ಚು ಗಮನಹರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾರ್ಗಿಲ್​ ಭಾಗದಲ್ಲಿ ಪ್ರಮುಖ ದೃಶ್ಯಗಳ ಶೂಟಿಂಗ್​ ನಡೆಯಲಿದೆಯಂತೆ. ವಿಜಯ್ ಸೇತುಪತಿ ಸಿನಿಮಾದಲ್ಲಿ ನಟಿಸಬೇಕಿತ್ತು. ಅವರ ಬದಲಿಗೆ ನಾಗ ಚೈತನ್ಯ ಅವರು ಈಗ ಚಿತ್ರತಂಡ ಸೇರಿಕೊಂಡಿದ್ದಾರೆ. ನಾಗ ಚೈತನ್ಯ ಕೂಡ ಶೀಘ್ರವೇ ಸಿನಿಮಾ ಸೆಟ್​ ಸೇರಿಕೊಳ್ಳಲಿದ್ದಾರಂತೆ. 45 ದಿನಗಳ ಕಾಲ ಶೂಟಿಂಗ್​ ನಡೆಯಲಿದೆ. ಎಲ್ಲವನ್ನೂ ತುಂಬಾನೇ ಪರ್ಫೆಕ್ಟ್​ ಆಗಿ ಶೂಟ್​ ಮಾಡುವ ಆಲೋಚನೆ ಆಮೀರ್​ ಖಾನ್​ ಅವರದ್ದು.

ಹಾಲಿವುಡ್​ನ ‘ಫಾರೆಸ್ಟ್​ ಗಂಪ್​​’ ಸಿನಿಮಾದ ಹಿಂದಿ ರಿಮೇಕ್​ ಲಾಲ್​ ಸಿಂಗ್​ ಚಡ್ಡಾ. ಆಮೀರ್​ ಖಾನ್​ ಸಿನಿಮಾದಲ್ಲಿ ಲೀಡ್​ ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕರೀನಾ ಕಪೂರ್​ ಚಿತ್ರದ ನಾಯಕಿ. 2021ರ ಡಿಸೆಂಬರ್ ಅಂತ್ಯಕ್ಕೆ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ. ಆದರೆ, ಶೂಟಿಂಗ್​ ವಿಳಂಬವಾಗುತ್ತಿರುವುದರಿಂದ ಚಿತ್ರಕ್ಕೆ ಹಿನ್ನಡೆ ಉಂಟಾಗುತ್ತಿದೆ.

ಇದನ್ನೂ ಓದಿ: ಕಾನ್​​ ಚಿತ್ರೋತ್ಸವಕ್ಕೆ ಆಯ್ಕೆಯಾದ ಕನ್ನಡದ ‘ದೇವರ ಕನಸು’ ಸಿನಿಮಾ

Published On - 5:29 pm, Sun, 2 May 21

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ