AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಚ್ಚುತ್ತಿರುವ ಮಧ್ಯೆಯೇ ಲೇಹ್-ಲಡಾಖ್​ಗೆ ತೆರಳಿದ ಆಮೀರ್​ ಖಾನ್​

ಲಾಲ್​ ಸಿಂಗ್​ ಚಡ್ಡಾ ಸಿನಿಮಾ ಕೆಲಸಗಳಲ್ಲಿ ಆಮೀರ್​ ಖಾನ್​ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಶೂಟಿಂಗ್​ಗೆ ಈಗಾಗಲೇ ಸಾಕಷ್ಟು ವಿಘ್ನಗಳು ಎದುರಾಗಿವೆ.

ಕೊರೊನಾ ಹೆಚ್ಚುತ್ತಿರುವ ಮಧ್ಯೆಯೇ ಲೇಹ್-ಲಡಾಖ್​ಗೆ ತೆರಳಿದ ಆಮೀರ್​ ಖಾನ್​
ಲಡಾಖ್​ನಲ್ಲಿ ಆಮೀರ್​ ಖಾನ್​
ರಾಜೇಶ್ ದುಗ್ಗುಮನೆ
| Edited By: |

Updated on:May 02, 2021 | 5:36 PM

Share

ಕೊರೊನಾ ವೈರಸ್​ ಎರಡನೇ ಅಲೆ ಭಾರತವನ್ನು ಬಿಟ್ಟು-ಬಿಡದೆ ಕಾಡುತ್ತಿದೆ. ಇದರಿಂದಾಗಿ ಮನೆಯಿಂದ ಹೊರಗೆ ಹೋಗುವುದಕ್ಕೂ ಭಯ ಬೀಳುವಂತಾಗಿದೆ. ಸಾಕಷ್ಟು ಸೆಲೆಬ್ರಿಟಿಗಳು ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ ಬಾಲಿವುಡ್​ ನಟ ಆಮೀರ್​ ಖಾನ್​ ಲೇಹ್-ಲಡಾಖ್​ಗೆ ತೆರಳಿದ್ದಾರೆ. ಅಷ್ಟೇ ಅಲ್ಲ ಸುಮಾರು 50 ದಿನಗಳ ಕಾಲ ಅವರು ಅಲ್ಲಿಯೇ ಇರಲಿದ್ದಾರಂತೆ.

‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದ ಕೆಲಸಗಳಲ್ಲಿ ಆಮೀರ್​ ಖಾನ್​ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಶೂಟಿಂಗ್​ಗೆ ಈಗಾಗಲೇ ಸಾಕಷ್ಟು ವಿಘ್ನಗಳು ಎದುರಾಗಿವೆ. ಇದನ್ನೆಲ್ಲವೂ ಮೆಟ್ಟಿ ನಿಂತಿರುವ ಆಮೀರ್​ ಖಾನ್ ಈಗ ಮತ್ತೆ ಸಿನಿಮಾದ ಶೂಟಿಂಗ್​ ಆರಂಭಿಸಿದ್ದಾರೆ. ಇದಕ್ಕಾಗಿಯೇ ಅವರು ಲೇಹ್​-ಲಡಾಖ್​ಗೆ ತೆರಳಿದ್ದಾರೆ. ಸದ್ಯ, ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿಯಾಗಿರುವ ಅವರು, ಹೆಚ್ಚು ಎಚ್ಚರಿಕೆ ವಹಿಸುತ್ತಿದ್ದಾರಂತೆ.

ಆಮೀರ್ ಖಾನ್​ ಲಡಾಖ್​ನಲ್ಲಿರುವ ಸಾಕಷ್ಟು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದವು. ಇದರ ಜತೆಗೆ ಲಾಲ್​ ಸಿಂಗ್​ ಚಡ್ಡಾ ಸಿನಿಮಾದ ಕೆಲ ಶೂಟಿಂಗ್​ ದೃಶ್ಯಗಳು ಲೀಕ್​ ಆಗಿತ್ತು. ಇದು ಆಮೀರ್​ ಖಾನ್​ಗೆ ಬೇಸರ ತರಿಸಿದೆ. ಹೀಗಾಗಿ, ಈ ಬಗ್ಗೆಯೂ ಆಮೀರ್​ ಖಾನ್​ ಹೆಚ್ಚು ಗಮನಹರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾರ್ಗಿಲ್​ ಭಾಗದಲ್ಲಿ ಪ್ರಮುಖ ದೃಶ್ಯಗಳ ಶೂಟಿಂಗ್​ ನಡೆಯಲಿದೆಯಂತೆ. ವಿಜಯ್ ಸೇತುಪತಿ ಸಿನಿಮಾದಲ್ಲಿ ನಟಿಸಬೇಕಿತ್ತು. ಅವರ ಬದಲಿಗೆ ನಾಗ ಚೈತನ್ಯ ಅವರು ಈಗ ಚಿತ್ರತಂಡ ಸೇರಿಕೊಂಡಿದ್ದಾರೆ. ನಾಗ ಚೈತನ್ಯ ಕೂಡ ಶೀಘ್ರವೇ ಸಿನಿಮಾ ಸೆಟ್​ ಸೇರಿಕೊಳ್ಳಲಿದ್ದಾರಂತೆ. 45 ದಿನಗಳ ಕಾಲ ಶೂಟಿಂಗ್​ ನಡೆಯಲಿದೆ. ಎಲ್ಲವನ್ನೂ ತುಂಬಾನೇ ಪರ್ಫೆಕ್ಟ್​ ಆಗಿ ಶೂಟ್​ ಮಾಡುವ ಆಲೋಚನೆ ಆಮೀರ್​ ಖಾನ್​ ಅವರದ್ದು.

ಹಾಲಿವುಡ್​ನ ‘ಫಾರೆಸ್ಟ್​ ಗಂಪ್​​’ ಸಿನಿಮಾದ ಹಿಂದಿ ರಿಮೇಕ್​ ಲಾಲ್​ ಸಿಂಗ್​ ಚಡ್ಡಾ. ಆಮೀರ್​ ಖಾನ್​ ಸಿನಿಮಾದಲ್ಲಿ ಲೀಡ್​ ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕರೀನಾ ಕಪೂರ್​ ಚಿತ್ರದ ನಾಯಕಿ. 2021ರ ಡಿಸೆಂಬರ್ ಅಂತ್ಯಕ್ಕೆ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ. ಆದರೆ, ಶೂಟಿಂಗ್​ ವಿಳಂಬವಾಗುತ್ತಿರುವುದರಿಂದ ಚಿತ್ರಕ್ಕೆ ಹಿನ್ನಡೆ ಉಂಟಾಗುತ್ತಿದೆ.

ಇದನ್ನೂ ಓದಿ: ಕಾನ್​​ ಚಿತ್ರೋತ್ಸವಕ್ಕೆ ಆಯ್ಕೆಯಾದ ಕನ್ನಡದ ‘ದೇವರ ಕನಸು’ ಸಿನಿಮಾ

Published On - 5:29 pm, Sun, 2 May 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ