AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ದಕ್ಷಿಣ ಭಾರತದ ನಿರ್ದೇಶಕನೊಟ್ಟಿಗೆ ಕೈ ಜೋಡಿಸಲಿರುವ ಆಮಿರ್ ಖಾನ್

Aamir Khan: ಬಾಲಿವುಡ್ ನಟ ಆಮಿರ್ ಖಾನ್ ದೊಡ್ಡ ಗೆಲುವೊಂದನ್ನು ಕಂಡು ಬಹಳ ವರ್ಷಗಳೇ ಆಗಿವೆ. ಗೆಲುವಿಗಾಗಿ ಅವರೂ ಸಹ ದಕ್ಷಿಣ ಭಾರತದ ಸಿನಿಮಾ ನಿರ್ದೇಶಕರ ಹಿಂದೆ ಬಿದ್ದಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಕೆಲವು ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕರೊಬ್ಬರೊಟ್ಟಿಗೆ ಆಮಿರ್ ಖಾನ್ ಮಾತು-ಕತೆ ಚಾಲ್ತಿಯಲ್ಲಿದೆ ಎನ್ನಲಾಗುತ್ತಿದೆ.

ಮತ್ತೆ ದಕ್ಷಿಣ ಭಾರತದ ನಿರ್ದೇಶಕನೊಟ್ಟಿಗೆ ಕೈ ಜೋಡಿಸಲಿರುವ ಆಮಿರ್ ಖಾನ್
Aamir Khan
Follow us
ಮಂಜುನಾಥ ಸಿ.
|

Updated on:Apr 18, 2025 | 7:05 PM

ಬಾಲಿವುಡ್ (Bollywood) ಸ್ಟಾರ್ ನಟ ಆಮಿರ್ ಖಾನ್ (Aamir Khan) ಸತತ ಸೋಲುಗಳನ್ನು ನೋಡುತ್ತಿದ್ದಾರೆ. 2016 ರಲ್ಲಿ ಬಿಡುಗಡೆ ಆದ ‘ದಂಗಲ್’ ಸಿನಿಮಾದ ಬಳಿಕ ದೊಡ್ಡ ಗೆಲುವೊಂದನ್ನು ಆಮಿರ್ ಖಾನ್ ನೋಡಿಯೇ ಇಲ್ಲ. ಸಲ್ಮಾನ್, ಶಾರುಖ್ ಖಾನ್ ಸಹ ಸತತ ಸೋಲು ಕಂಡಿದ್ದರು. ಆದರೆ ದಕ್ಷಿಣ ಭಾರತದ ಸಿನಿಮಾ ನಿರ್ದೇಶಕರ ದೆಸೆಯಿಂದ ಶಾರುಖ್ ಖಾನ್ ದೊಡ್ಡ ಗೆಲುವು ಕಂಡರೆ, ಸಲ್ಮಾನ್ ಖಾನ್ ಸಹ ಗೆಲುವಿನ ಹಳಿಗೆ ಮರಳಿದರು. ಇದೀಗ ಆಮಿರ್ ಖಾನ್ ಸಹ ದಕ್ಷಿಣ ಭಾರತದ ನಿರ್ದೇಶಕರ ಹಿಂದೆ ಬಿದ್ದಿದ್ದಾರೆ.

ಈ ಹಿಂದೆ ತಮಿಳಿನ ಮುರುಗದಾಸ್ ನಟನೆಯ ‘ಗಜಿನಿ’ ಸಿನಿಮಾದಲ್ಲಿ ನಟಿಸಿ ಭಾರಿ ಹಿಟ್ ಸಿನಿಮಾ ನೀಡಿದ್ದ ಆಮಿರ್ ಖಾನ್ ಪ್ರಸ್ತುತ ಲೋಕೇಶ್ ಕನಗರಾಜ್ ನಿರ್ದೇಶನದ ‘ಕೂಲಿ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಆದರೆ ಅದು ರಜನೀಕಾಂತ್​ ನಾಯಕನಾಗಿ ನಟಿಸಿರುವ ಸಿನಿಮಾ. ಆಮಿರ್ ಖಾನ್ ಅವರದ್ದು ‘ಕೂಲಿ’ ಸಿನಿಮಾನಲ್ಲಿ ಅತಿಥಿ ಪಾತ್ರವಷ್ಟೆ. ಆದರೆ ಇದೀಗ ತೆಲುಗಿನಲ್ಲಿ ಕೆಲ ಹಿಟ್ ಸಿನಿಮಾಗಳನ್ನು ನೀಡಿರುವ ಪಕ್ಕಾ ಕಮರ್ಶಿಯಲ್ ನಿರ್ದೇಶಕ ವಂಶಿ ಪೈಡಪಲ್ಲಿ ನಿರ್ದೇಶನದ ಸಿನಿಮಾದಲ್ಲಿ ಆಮಿರ್ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ತೆಲುಗಿನ ಹಿಟ್ ಸಿನಿಮಾಗಳಾದ ‘ಮುನ್ನಾ’, ‘ಬೃಂದಾವನಮ್’, ‘ಯೆವಡು’, ‘ಮಹರ್ಶಿ’ ತಮಿಳು ಸಿನಿಮಾ ‘ವಾರಿಸು’ ಗಳನ್ನು ವಂಶಿ ಪೈಡಪಲ್ಲಿ ನಿರ್ದೇಶನ ಮಾಡಿದ್ದಾರೆ. ವಂಶಿ ಪೈಡಪಲ್ಲಿ ಪಕ್ಕಾ ಕಮರ್ಶಿಯಲ್, ಹೀರೋ ಓರಿಯೆಂಟೆಡ್ ಸಿನಿಮಾಗಳ ನಿರ್ದೇಶಕ. ಆದರೆ ಆಮಿರ್ ಖಾನ್ ಕಂಟೆಂಟ್ ನೋಡಿ ಕತೆ ಒಪ್ಪಿಕೊಳ್ಳುವ ನಟ. ಹಾಗಿದ್ದರೂ ಸಹ ಈ ಇಬ್ಬರು ಹೇಗೆ ಒಂದಾಗುತ್ತಿದ್ದಾರೆ ಎಂಬುದು ಅಭಿಮಾನಿಗಳಿಗೆ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ:‘ಸಿತಾರೆ ಜಮೀನ್ ಪರ್’ ಸಿನಿಮಾಕ್ಕೆ ಆಮಿರ್ ಖಾನ್ ಹೊಸ ಅವತಾರ

ಅಂದಹಾಗೆ ವಂಶಿ ಪೈಡಪಲ್ಲಿ ಮಾತ್ರವೇ ಅಲ್ಲದೆ ತಮಿಳಿನ ನಿರ್ದೇಶಕ ಲೋಕೇಶ್ ಕನಗರಾಜ್ ಜೊತೆಗೆ ಸಹ ಆಮಿರ್ ಖಾನ್ ಪ್ರತ್ಯೇಕ ಸಿನಿಮಾ ಒಂದರಲ್ಲಿ ನಟಿಸುವ ಸಾಧ್ಯತೆ ಇದೆ. ಈ ಹಿಂದೆ ಲೋಕೇಶ್ ಕನಗರಾಜ್, ಸೂರ್ಯಗಾಗಿ ಮಾಡಿಕೊಂಡಿದ್ದ ‘ಇರುಂಬು ಕೈ ಮಾಯಾವಿ’ ಕತೆಯನ್ನು ಲೋಕೇಶ್ ಈಗ ಆಮಿರ್ ಖಾನ್​ಗಾಗಿ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸೂರ್ಯ ಸಹ ಒಮ್ಮೆ ಹೇಳಿದ್ದರು. ‘ಇರುಂಬು ಕೈ ಮಾಯಾವಿ’ ಸಿನಿಮಾ ಈಗ ನನ್ನ ಕೈಯಲ್ಲಿದೆಯೋ ಇಲ್ಲವೋ ಗೊತ್ತಿಲ್ಲ ಎಂದಿದ್ದರು. ಆ ಮೂಲಕ ಆ ಸಿನಿಮಾ ಬಹುತೇಕ ತಮ್ಮ ಕೈ ತಪ್ಪಿದೆ ಎಂದು ಪರೋಕ್ಷವಾಗಿ ಹೇಳಿದ್ದರು.

ಆಮಿರ್ ಖಾನ್ ಪ್ರಸ್ತುತ ‘ಸಿತಾರೆ ಜಮೀನ್ ಪರ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇದು ಸ್ಪ್ಯಾನಿಷ್ ಸಿನಿಮಾ ‘ಚಾಂಪಿಯನ್’ ಇಂದ ಸ್ಪೂರ್ತಿ ಪಡೆದ ಸಿನಿಮಾ ಆಗಿದೆ. ಸಿನಿಮಾದಲ್ಲಿ ಆಮಿರ್ ಖಾನ್, ವಿಶೇಷ ಚೇತನ ಮಕ್ಕಳ ಕೋಚ್ ಪಾತ್ರದಲ್ಲಿ ನಟಿಸಿದ್ದಾರೆ. ಪ್ಯಾರಾ ಒಲಿಂಪಿಕ್​ಗೆ ವಿಶೇಷ ಚೇತನ ಮಕ್ಕಳನ್ನು ತಯಾರು ಮಾಡುವ ಕೋಚ್ ಪಾತ್ರ ಅವರದ್ದು. ಸಿನಿಮಾದಲ್ಲಿ ಜೆನಿಲಿಯಾ ಡಿಸೋಜಾ ಸಹ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Fri, 18 April 25

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ