AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರದ 10 ಸಾವಿರ ಟಿಕೆಟ್ ಗಿವ್​ಅವೇ ಕೊಟ್ಟ ಎಬಿ ಡಿವಿಲಿಯರ್ಸ್

ಎಬಿಡಿ ಅವರಿಗೆ ಭಾರತದ ಜೊತೆ ಒಳ್ಳೆಯ ನಂಟಿದೆ. ಇದಕ್ಕೆ ಕಾರಣ ಆಗಿರೋದು ಐಪಿಎಲ್. ಎಬಿಡಿ ಅವರು ಆರ್​ಸಿಬಿ ಪರ ಆಡಿದ್ದರು. ಅವರಿಗೆ ಕರ್ನಾಟಕ ಹಾಗೂ ಭಾರತದಲ್ಲಿ ಅಪಾರ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಅವರು 10 ಸಾವಿರ ‘ಪುಷ್ಪ 2’ ಟಿಕೆಟ್ ಗಿವ್ ಅವೇ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ತಂದಿದೆ.

‘ಪುಷ್ಪ 2’ ಚಿತ್ರದ 10 ಸಾವಿರ ಟಿಕೆಟ್ ಗಿವ್​ಅವೇ ಕೊಟ್ಟ ಎಬಿ ಡಿವಿಲಿಯರ್ಸ್
ಎಬಿಡಿ-ಪುಷ್ಪ 2
ರಾಜೇಶ್ ದುಗ್ಗುಮನೆ
|

Updated on: Dec 03, 2024 | 12:05 PM

Share

‘ಪುಷ್ಪ 2’ ಚಿತ್ರದ ಹೈಪ್ ಜೋರಾಗಿದೆ. ಈ ಸಿನಿಮಾಗೆ ವಿಶ್ವಾದ್ಯಂತ ಕ್ರೇಜ್ ಸೃಷ್ಟಿ ಆಗಿದೆ. ಡಿಸೆಂಬರ್ 5ರಂದು ಈ ಸಿನಿಮಾ ವಿಶ್ವ ಮಟ್ಟದಲ್ಲಿ ರಿಲೀಸ್ ಆಗಲಿದೆ. ಈ ಚಿತ್ರವನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರಕ್ಕೆ ಅನೇಕ ಸೆಲೆಬ್ರಿಟಿಗಳು ಬೆಂಬಲ ಕೊಟ್ಟಿದ್ದಾರೆ. ಈ ಸಿನಿಮಾಗೆ ಆರ್​ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಅವರು ಟಿಕೆಟ್ ಗಿವ್​ಅವೇ ಮಾಡಿದ್ದಾರೆ. ಈ ಟ್ವೀಟ್ ವೈರಲ್ ಆಗಿದೆ.

ಎಬಿಡಿ ಅವರಿಗೆ ಭಾರತದ ಜೊತೆ ಒಳ್ಳೆಯ ನಂಟಿದೆ. ಇದಕ್ಕೆ ಕಾರಣ ಆಗಿರೋದು ಐಪಿಎಲ್. ಎಬಿಡಿ ಅವರು ಆರ್​ಸಿಬಿ ಪರ ಆಡಿದ್ದರು. ಅವರಿಗೆ ಕರ್ನಾಟಕ ಹಾಗೂ ಭಾರತದಲ್ಲಿ ಅಪಾರ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಅವರು 10 ಸಾವಿರ ‘ಪುಷ್ಪ 2’ ಟಿಕೆಟ್ ಗಿವ್ ಅವೇ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ತಂದಿದೆ.

ಬೆಟ್ಟಿಂಗ್ ಆ್ಯಪ್ ಒಂದರ ಪ್ರಮೋಷನ್​ಗೆ ಈ ಗಿವ್​ಅವೇನ ಮಾಡಿದ್ದಾರೆ ಎಬಿಡಿ. ಈ ಆ್ಯಪ್​ನಲ್ಲಿ 100 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ಡಿಪೋಸಿಟ್ ಮಾಡಬೇಕು. ಇದರಲ್ಲಿ 100 ರೂಪಾಯಿಗಿಂತ ಹೆಚ್ಚಿನ ಹಣ ಡಿಪೋಸಿಟ್ ಮಾಡಿದ ಮೊದಲ 10 ಸಾವಿರ ಮಂದಿಗೆ ‘ಪುಷ್ಪ 2’ ಟಿಕೆಟ್ ಕೊಡೋದಾಗಿ ಎಬಿಡಿ ಹೇಳಿದ್ದಾರೆ. ಶನಿವಾರ (ಡಿಸೆಂಬರ್ 7) ಈ ಕ್ಯಾಂಪೇನ್ ಪೂರ್ಣಗೊಳ್ಳಲಿದೆ.

ಎಬಿಡಿ ಕೂಡ ‘ಪುಷ್ಪ 2’ ಚಿತ್ರದ ಟಿಕೆಟ್ ಗಿವ್ ಅವೇ ನೀಡಿರೋದು ಅನೇಕರಿಗೆ ಖುಷಿ ಕೊಟ್ಟಿದೆ. ಅವರು ಪ್ರಮೋಟ್ ಮಾಡ್ತಿರೋದು ಬೆಟ್ಟಿಂಗ್ ಆ್ಯಪ್. ಈ ಕಾರಣಕ್ಕೆ ಕೆಲವರು ಈ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಇನ್ನೂ ಕೆಲವರು ‘ಪುಷ್ಪ 2’ ಚಿತ್ರದ ಪ್ರಮೋಷನ್ ಆಯ್ತು ಎಂದು ಸಂತಸ ಹೊರಹಾಕಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರಕ್ಕಾಗಿ ಮಗಳನ್ನೇ ದೂರ ಇಟ್ಟ ಅಲ್ಲು ಅರ್ಜುನ್

‘ಪುಷ್ಪ 2’ ಚಿತ್ರ ಡಿಸೆಂಬರ್ 5ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದರು. ಅಲ್ಲು ಅರ್ಜುನ್ ನಟನೆಯ ಈ ಚಿತ್ರಕ್ಕೆ, ಸುಕುಮಾರ್ ನಿರ್ದೇಶನ ಇದೆ. ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ನಟಿಸಿದ್ದಾರೆ. ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ