AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರದ 10 ಸಾವಿರ ಟಿಕೆಟ್ ಗಿವ್​ಅವೇ ಕೊಟ್ಟ ಎಬಿ ಡಿವಿಲಿಯರ್ಸ್

ಎಬಿಡಿ ಅವರಿಗೆ ಭಾರತದ ಜೊತೆ ಒಳ್ಳೆಯ ನಂಟಿದೆ. ಇದಕ್ಕೆ ಕಾರಣ ಆಗಿರೋದು ಐಪಿಎಲ್. ಎಬಿಡಿ ಅವರು ಆರ್​ಸಿಬಿ ಪರ ಆಡಿದ್ದರು. ಅವರಿಗೆ ಕರ್ನಾಟಕ ಹಾಗೂ ಭಾರತದಲ್ಲಿ ಅಪಾರ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಅವರು 10 ಸಾವಿರ ‘ಪುಷ್ಪ 2’ ಟಿಕೆಟ್ ಗಿವ್ ಅವೇ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ತಂದಿದೆ.

‘ಪುಷ್ಪ 2’ ಚಿತ್ರದ 10 ಸಾವಿರ ಟಿಕೆಟ್ ಗಿವ್​ಅವೇ ಕೊಟ್ಟ ಎಬಿ ಡಿವಿಲಿಯರ್ಸ್
ಎಬಿಡಿ-ಪುಷ್ಪ 2
ರಾಜೇಶ್ ದುಗ್ಗುಮನೆ
|

Updated on: Dec 03, 2024 | 12:05 PM

Share

‘ಪುಷ್ಪ 2’ ಚಿತ್ರದ ಹೈಪ್ ಜೋರಾಗಿದೆ. ಈ ಸಿನಿಮಾಗೆ ವಿಶ್ವಾದ್ಯಂತ ಕ್ರೇಜ್ ಸೃಷ್ಟಿ ಆಗಿದೆ. ಡಿಸೆಂಬರ್ 5ರಂದು ಈ ಸಿನಿಮಾ ವಿಶ್ವ ಮಟ್ಟದಲ್ಲಿ ರಿಲೀಸ್ ಆಗಲಿದೆ. ಈ ಚಿತ್ರವನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರಕ್ಕೆ ಅನೇಕ ಸೆಲೆಬ್ರಿಟಿಗಳು ಬೆಂಬಲ ಕೊಟ್ಟಿದ್ದಾರೆ. ಈ ಸಿನಿಮಾಗೆ ಆರ್​ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಅವರು ಟಿಕೆಟ್ ಗಿವ್​ಅವೇ ಮಾಡಿದ್ದಾರೆ. ಈ ಟ್ವೀಟ್ ವೈರಲ್ ಆಗಿದೆ.

ಎಬಿಡಿ ಅವರಿಗೆ ಭಾರತದ ಜೊತೆ ಒಳ್ಳೆಯ ನಂಟಿದೆ. ಇದಕ್ಕೆ ಕಾರಣ ಆಗಿರೋದು ಐಪಿಎಲ್. ಎಬಿಡಿ ಅವರು ಆರ್​ಸಿಬಿ ಪರ ಆಡಿದ್ದರು. ಅವರಿಗೆ ಕರ್ನಾಟಕ ಹಾಗೂ ಭಾರತದಲ್ಲಿ ಅಪಾರ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಅವರು 10 ಸಾವಿರ ‘ಪುಷ್ಪ 2’ ಟಿಕೆಟ್ ಗಿವ್ ಅವೇ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ತಂದಿದೆ.

ಬೆಟ್ಟಿಂಗ್ ಆ್ಯಪ್ ಒಂದರ ಪ್ರಮೋಷನ್​ಗೆ ಈ ಗಿವ್​ಅವೇನ ಮಾಡಿದ್ದಾರೆ ಎಬಿಡಿ. ಈ ಆ್ಯಪ್​ನಲ್ಲಿ 100 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ಡಿಪೋಸಿಟ್ ಮಾಡಬೇಕು. ಇದರಲ್ಲಿ 100 ರೂಪಾಯಿಗಿಂತ ಹೆಚ್ಚಿನ ಹಣ ಡಿಪೋಸಿಟ್ ಮಾಡಿದ ಮೊದಲ 10 ಸಾವಿರ ಮಂದಿಗೆ ‘ಪುಷ್ಪ 2’ ಟಿಕೆಟ್ ಕೊಡೋದಾಗಿ ಎಬಿಡಿ ಹೇಳಿದ್ದಾರೆ. ಶನಿವಾರ (ಡಿಸೆಂಬರ್ 7) ಈ ಕ್ಯಾಂಪೇನ್ ಪೂರ್ಣಗೊಳ್ಳಲಿದೆ.

ಎಬಿಡಿ ಕೂಡ ‘ಪುಷ್ಪ 2’ ಚಿತ್ರದ ಟಿಕೆಟ್ ಗಿವ್ ಅವೇ ನೀಡಿರೋದು ಅನೇಕರಿಗೆ ಖುಷಿ ಕೊಟ್ಟಿದೆ. ಅವರು ಪ್ರಮೋಟ್ ಮಾಡ್ತಿರೋದು ಬೆಟ್ಟಿಂಗ್ ಆ್ಯಪ್. ಈ ಕಾರಣಕ್ಕೆ ಕೆಲವರು ಈ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಇನ್ನೂ ಕೆಲವರು ‘ಪುಷ್ಪ 2’ ಚಿತ್ರದ ಪ್ರಮೋಷನ್ ಆಯ್ತು ಎಂದು ಸಂತಸ ಹೊರಹಾಕಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರಕ್ಕಾಗಿ ಮಗಳನ್ನೇ ದೂರ ಇಟ್ಟ ಅಲ್ಲು ಅರ್ಜುನ್

‘ಪುಷ್ಪ 2’ ಚಿತ್ರ ಡಿಸೆಂಬರ್ 5ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದರು. ಅಲ್ಲು ಅರ್ಜುನ್ ನಟನೆಯ ಈ ಚಿತ್ರಕ್ಕೆ, ಸುಕುಮಾರ್ ನಿರ್ದೇಶನ ಇದೆ. ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ನಟಿಸಿದ್ದಾರೆ. ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ