AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರದ 10 ಸಾವಿರ ಟಿಕೆಟ್ ಗಿವ್​ಅವೇ ಕೊಟ್ಟ ಎಬಿ ಡಿವಿಲಿಯರ್ಸ್

ಎಬಿಡಿ ಅವರಿಗೆ ಭಾರತದ ಜೊತೆ ಒಳ್ಳೆಯ ನಂಟಿದೆ. ಇದಕ್ಕೆ ಕಾರಣ ಆಗಿರೋದು ಐಪಿಎಲ್. ಎಬಿಡಿ ಅವರು ಆರ್​ಸಿಬಿ ಪರ ಆಡಿದ್ದರು. ಅವರಿಗೆ ಕರ್ನಾಟಕ ಹಾಗೂ ಭಾರತದಲ್ಲಿ ಅಪಾರ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಅವರು 10 ಸಾವಿರ ‘ಪುಷ್ಪ 2’ ಟಿಕೆಟ್ ಗಿವ್ ಅವೇ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ತಂದಿದೆ.

‘ಪುಷ್ಪ 2’ ಚಿತ್ರದ 10 ಸಾವಿರ ಟಿಕೆಟ್ ಗಿವ್​ಅವೇ ಕೊಟ್ಟ ಎಬಿ ಡಿವಿಲಿಯರ್ಸ್
ಎಬಿಡಿ-ಪುಷ್ಪ 2
ರಾಜೇಶ್ ದುಗ್ಗುಮನೆ
|

Updated on: Dec 03, 2024 | 12:05 PM

Share

‘ಪುಷ್ಪ 2’ ಚಿತ್ರದ ಹೈಪ್ ಜೋರಾಗಿದೆ. ಈ ಸಿನಿಮಾಗೆ ವಿಶ್ವಾದ್ಯಂತ ಕ್ರೇಜ್ ಸೃಷ್ಟಿ ಆಗಿದೆ. ಡಿಸೆಂಬರ್ 5ರಂದು ಈ ಸಿನಿಮಾ ವಿಶ್ವ ಮಟ್ಟದಲ್ಲಿ ರಿಲೀಸ್ ಆಗಲಿದೆ. ಈ ಚಿತ್ರವನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರಕ್ಕೆ ಅನೇಕ ಸೆಲೆಬ್ರಿಟಿಗಳು ಬೆಂಬಲ ಕೊಟ್ಟಿದ್ದಾರೆ. ಈ ಸಿನಿಮಾಗೆ ಆರ್​ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಅವರು ಟಿಕೆಟ್ ಗಿವ್​ಅವೇ ಮಾಡಿದ್ದಾರೆ. ಈ ಟ್ವೀಟ್ ವೈರಲ್ ಆಗಿದೆ.

ಎಬಿಡಿ ಅವರಿಗೆ ಭಾರತದ ಜೊತೆ ಒಳ್ಳೆಯ ನಂಟಿದೆ. ಇದಕ್ಕೆ ಕಾರಣ ಆಗಿರೋದು ಐಪಿಎಲ್. ಎಬಿಡಿ ಅವರು ಆರ್​ಸಿಬಿ ಪರ ಆಡಿದ್ದರು. ಅವರಿಗೆ ಕರ್ನಾಟಕ ಹಾಗೂ ಭಾರತದಲ್ಲಿ ಅಪಾರ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಅವರು 10 ಸಾವಿರ ‘ಪುಷ್ಪ 2’ ಟಿಕೆಟ್ ಗಿವ್ ಅವೇ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ತಂದಿದೆ.

ಬೆಟ್ಟಿಂಗ್ ಆ್ಯಪ್ ಒಂದರ ಪ್ರಮೋಷನ್​ಗೆ ಈ ಗಿವ್​ಅವೇನ ಮಾಡಿದ್ದಾರೆ ಎಬಿಡಿ. ಈ ಆ್ಯಪ್​ನಲ್ಲಿ 100 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ಡಿಪೋಸಿಟ್ ಮಾಡಬೇಕು. ಇದರಲ್ಲಿ 100 ರೂಪಾಯಿಗಿಂತ ಹೆಚ್ಚಿನ ಹಣ ಡಿಪೋಸಿಟ್ ಮಾಡಿದ ಮೊದಲ 10 ಸಾವಿರ ಮಂದಿಗೆ ‘ಪುಷ್ಪ 2’ ಟಿಕೆಟ್ ಕೊಡೋದಾಗಿ ಎಬಿಡಿ ಹೇಳಿದ್ದಾರೆ. ಶನಿವಾರ (ಡಿಸೆಂಬರ್ 7) ಈ ಕ್ಯಾಂಪೇನ್ ಪೂರ್ಣಗೊಳ್ಳಲಿದೆ.

ಎಬಿಡಿ ಕೂಡ ‘ಪುಷ್ಪ 2’ ಚಿತ್ರದ ಟಿಕೆಟ್ ಗಿವ್ ಅವೇ ನೀಡಿರೋದು ಅನೇಕರಿಗೆ ಖುಷಿ ಕೊಟ್ಟಿದೆ. ಅವರು ಪ್ರಮೋಟ್ ಮಾಡ್ತಿರೋದು ಬೆಟ್ಟಿಂಗ್ ಆ್ಯಪ್. ಈ ಕಾರಣಕ್ಕೆ ಕೆಲವರು ಈ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಇನ್ನೂ ಕೆಲವರು ‘ಪುಷ್ಪ 2’ ಚಿತ್ರದ ಪ್ರಮೋಷನ್ ಆಯ್ತು ಎಂದು ಸಂತಸ ಹೊರಹಾಕಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರಕ್ಕಾಗಿ ಮಗಳನ್ನೇ ದೂರ ಇಟ್ಟ ಅಲ್ಲು ಅರ್ಜುನ್

‘ಪುಷ್ಪ 2’ ಚಿತ್ರ ಡಿಸೆಂಬರ್ 5ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದರು. ಅಲ್ಲು ಅರ್ಜುನ್ ನಟನೆಯ ಈ ಚಿತ್ರಕ್ಕೆ, ಸುಕುಮಾರ್ ನಿರ್ದೇಶನ ಇದೆ. ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ನಟಿಸಿದ್ದಾರೆ. ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?