AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರದ 10 ಸಾವಿರ ಟಿಕೆಟ್ ಗಿವ್​ಅವೇ ಕೊಟ್ಟ ಎಬಿ ಡಿವಿಲಿಯರ್ಸ್

ಎಬಿಡಿ ಅವರಿಗೆ ಭಾರತದ ಜೊತೆ ಒಳ್ಳೆಯ ನಂಟಿದೆ. ಇದಕ್ಕೆ ಕಾರಣ ಆಗಿರೋದು ಐಪಿಎಲ್. ಎಬಿಡಿ ಅವರು ಆರ್​ಸಿಬಿ ಪರ ಆಡಿದ್ದರು. ಅವರಿಗೆ ಕರ್ನಾಟಕ ಹಾಗೂ ಭಾರತದಲ್ಲಿ ಅಪಾರ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಅವರು 10 ಸಾವಿರ ‘ಪುಷ್ಪ 2’ ಟಿಕೆಟ್ ಗಿವ್ ಅವೇ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ತಂದಿದೆ.

‘ಪುಷ್ಪ 2’ ಚಿತ್ರದ 10 ಸಾವಿರ ಟಿಕೆಟ್ ಗಿವ್​ಅವೇ ಕೊಟ್ಟ ಎಬಿ ಡಿವಿಲಿಯರ್ಸ್
ಎಬಿಡಿ-ಪುಷ್ಪ 2
ರಾಜೇಶ್ ದುಗ್ಗುಮನೆ
|

Updated on: Dec 03, 2024 | 12:05 PM

Share

‘ಪುಷ್ಪ 2’ ಚಿತ್ರದ ಹೈಪ್ ಜೋರಾಗಿದೆ. ಈ ಸಿನಿಮಾಗೆ ವಿಶ್ವಾದ್ಯಂತ ಕ್ರೇಜ್ ಸೃಷ್ಟಿ ಆಗಿದೆ. ಡಿಸೆಂಬರ್ 5ರಂದು ಈ ಸಿನಿಮಾ ವಿಶ್ವ ಮಟ್ಟದಲ್ಲಿ ರಿಲೀಸ್ ಆಗಲಿದೆ. ಈ ಚಿತ್ರವನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರಕ್ಕೆ ಅನೇಕ ಸೆಲೆಬ್ರಿಟಿಗಳು ಬೆಂಬಲ ಕೊಟ್ಟಿದ್ದಾರೆ. ಈ ಸಿನಿಮಾಗೆ ಆರ್​ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಅವರು ಟಿಕೆಟ್ ಗಿವ್​ಅವೇ ಮಾಡಿದ್ದಾರೆ. ಈ ಟ್ವೀಟ್ ವೈರಲ್ ಆಗಿದೆ.

ಎಬಿಡಿ ಅವರಿಗೆ ಭಾರತದ ಜೊತೆ ಒಳ್ಳೆಯ ನಂಟಿದೆ. ಇದಕ್ಕೆ ಕಾರಣ ಆಗಿರೋದು ಐಪಿಎಲ್. ಎಬಿಡಿ ಅವರು ಆರ್​ಸಿಬಿ ಪರ ಆಡಿದ್ದರು. ಅವರಿಗೆ ಕರ್ನಾಟಕ ಹಾಗೂ ಭಾರತದಲ್ಲಿ ಅಪಾರ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಅವರು 10 ಸಾವಿರ ‘ಪುಷ್ಪ 2’ ಟಿಕೆಟ್ ಗಿವ್ ಅವೇ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ತಂದಿದೆ.

ಬೆಟ್ಟಿಂಗ್ ಆ್ಯಪ್ ಒಂದರ ಪ್ರಮೋಷನ್​ಗೆ ಈ ಗಿವ್​ಅವೇನ ಮಾಡಿದ್ದಾರೆ ಎಬಿಡಿ. ಈ ಆ್ಯಪ್​ನಲ್ಲಿ 100 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ಡಿಪೋಸಿಟ್ ಮಾಡಬೇಕು. ಇದರಲ್ಲಿ 100 ರೂಪಾಯಿಗಿಂತ ಹೆಚ್ಚಿನ ಹಣ ಡಿಪೋಸಿಟ್ ಮಾಡಿದ ಮೊದಲ 10 ಸಾವಿರ ಮಂದಿಗೆ ‘ಪುಷ್ಪ 2’ ಟಿಕೆಟ್ ಕೊಡೋದಾಗಿ ಎಬಿಡಿ ಹೇಳಿದ್ದಾರೆ. ಶನಿವಾರ (ಡಿಸೆಂಬರ್ 7) ಈ ಕ್ಯಾಂಪೇನ್ ಪೂರ್ಣಗೊಳ್ಳಲಿದೆ.

ಎಬಿಡಿ ಕೂಡ ‘ಪುಷ್ಪ 2’ ಚಿತ್ರದ ಟಿಕೆಟ್ ಗಿವ್ ಅವೇ ನೀಡಿರೋದು ಅನೇಕರಿಗೆ ಖುಷಿ ಕೊಟ್ಟಿದೆ. ಅವರು ಪ್ರಮೋಟ್ ಮಾಡ್ತಿರೋದು ಬೆಟ್ಟಿಂಗ್ ಆ್ಯಪ್. ಈ ಕಾರಣಕ್ಕೆ ಕೆಲವರು ಈ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಇನ್ನೂ ಕೆಲವರು ‘ಪುಷ್ಪ 2’ ಚಿತ್ರದ ಪ್ರಮೋಷನ್ ಆಯ್ತು ಎಂದು ಸಂತಸ ಹೊರಹಾಕಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರಕ್ಕಾಗಿ ಮಗಳನ್ನೇ ದೂರ ಇಟ್ಟ ಅಲ್ಲು ಅರ್ಜುನ್

‘ಪುಷ್ಪ 2’ ಚಿತ್ರ ಡಿಸೆಂಬರ್ 5ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದರು. ಅಲ್ಲು ಅರ್ಜುನ್ ನಟನೆಯ ಈ ಚಿತ್ರಕ್ಕೆ, ಸುಕುಮಾರ್ ನಿರ್ದೇಶನ ಇದೆ. ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ನಟಿಸಿದ್ದಾರೆ. ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ