AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರದ 10 ಸಾವಿರ ಟಿಕೆಟ್ ಗಿವ್​ಅವೇ ಕೊಟ್ಟ ಎಬಿ ಡಿವಿಲಿಯರ್ಸ್

ಎಬಿಡಿ ಅವರಿಗೆ ಭಾರತದ ಜೊತೆ ಒಳ್ಳೆಯ ನಂಟಿದೆ. ಇದಕ್ಕೆ ಕಾರಣ ಆಗಿರೋದು ಐಪಿಎಲ್. ಎಬಿಡಿ ಅವರು ಆರ್​ಸಿಬಿ ಪರ ಆಡಿದ್ದರು. ಅವರಿಗೆ ಕರ್ನಾಟಕ ಹಾಗೂ ಭಾರತದಲ್ಲಿ ಅಪಾರ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಅವರು 10 ಸಾವಿರ ‘ಪುಷ್ಪ 2’ ಟಿಕೆಟ್ ಗಿವ್ ಅವೇ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ತಂದಿದೆ.

‘ಪುಷ್ಪ 2’ ಚಿತ್ರದ 10 ಸಾವಿರ ಟಿಕೆಟ್ ಗಿವ್​ಅವೇ ಕೊಟ್ಟ ಎಬಿ ಡಿವಿಲಿಯರ್ಸ್
ಎಬಿಡಿ-ಪುಷ್ಪ 2
ರಾಜೇಶ್ ದುಗ್ಗುಮನೆ
|

Updated on: Dec 03, 2024 | 12:05 PM

Share

‘ಪುಷ್ಪ 2’ ಚಿತ್ರದ ಹೈಪ್ ಜೋರಾಗಿದೆ. ಈ ಸಿನಿಮಾಗೆ ವಿಶ್ವಾದ್ಯಂತ ಕ್ರೇಜ್ ಸೃಷ್ಟಿ ಆಗಿದೆ. ಡಿಸೆಂಬರ್ 5ರಂದು ಈ ಸಿನಿಮಾ ವಿಶ್ವ ಮಟ್ಟದಲ್ಲಿ ರಿಲೀಸ್ ಆಗಲಿದೆ. ಈ ಚಿತ್ರವನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರಕ್ಕೆ ಅನೇಕ ಸೆಲೆಬ್ರಿಟಿಗಳು ಬೆಂಬಲ ಕೊಟ್ಟಿದ್ದಾರೆ. ಈ ಸಿನಿಮಾಗೆ ಆರ್​ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಅವರು ಟಿಕೆಟ್ ಗಿವ್​ಅವೇ ಮಾಡಿದ್ದಾರೆ. ಈ ಟ್ವೀಟ್ ವೈರಲ್ ಆಗಿದೆ.

ಎಬಿಡಿ ಅವರಿಗೆ ಭಾರತದ ಜೊತೆ ಒಳ್ಳೆಯ ನಂಟಿದೆ. ಇದಕ್ಕೆ ಕಾರಣ ಆಗಿರೋದು ಐಪಿಎಲ್. ಎಬಿಡಿ ಅವರು ಆರ್​ಸಿಬಿ ಪರ ಆಡಿದ್ದರು. ಅವರಿಗೆ ಕರ್ನಾಟಕ ಹಾಗೂ ಭಾರತದಲ್ಲಿ ಅಪಾರ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಅವರು 10 ಸಾವಿರ ‘ಪುಷ್ಪ 2’ ಟಿಕೆಟ್ ಗಿವ್ ಅವೇ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ತಂದಿದೆ.

ಬೆಟ್ಟಿಂಗ್ ಆ್ಯಪ್ ಒಂದರ ಪ್ರಮೋಷನ್​ಗೆ ಈ ಗಿವ್​ಅವೇನ ಮಾಡಿದ್ದಾರೆ ಎಬಿಡಿ. ಈ ಆ್ಯಪ್​ನಲ್ಲಿ 100 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ಡಿಪೋಸಿಟ್ ಮಾಡಬೇಕು. ಇದರಲ್ಲಿ 100 ರೂಪಾಯಿಗಿಂತ ಹೆಚ್ಚಿನ ಹಣ ಡಿಪೋಸಿಟ್ ಮಾಡಿದ ಮೊದಲ 10 ಸಾವಿರ ಮಂದಿಗೆ ‘ಪುಷ್ಪ 2’ ಟಿಕೆಟ್ ಕೊಡೋದಾಗಿ ಎಬಿಡಿ ಹೇಳಿದ್ದಾರೆ. ಶನಿವಾರ (ಡಿಸೆಂಬರ್ 7) ಈ ಕ್ಯಾಂಪೇನ್ ಪೂರ್ಣಗೊಳ್ಳಲಿದೆ.

ಎಬಿಡಿ ಕೂಡ ‘ಪುಷ್ಪ 2’ ಚಿತ್ರದ ಟಿಕೆಟ್ ಗಿವ್ ಅವೇ ನೀಡಿರೋದು ಅನೇಕರಿಗೆ ಖುಷಿ ಕೊಟ್ಟಿದೆ. ಅವರು ಪ್ರಮೋಟ್ ಮಾಡ್ತಿರೋದು ಬೆಟ್ಟಿಂಗ್ ಆ್ಯಪ್. ಈ ಕಾರಣಕ್ಕೆ ಕೆಲವರು ಈ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಇನ್ನೂ ಕೆಲವರು ‘ಪುಷ್ಪ 2’ ಚಿತ್ರದ ಪ್ರಮೋಷನ್ ಆಯ್ತು ಎಂದು ಸಂತಸ ಹೊರಹಾಕಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರಕ್ಕಾಗಿ ಮಗಳನ್ನೇ ದೂರ ಇಟ್ಟ ಅಲ್ಲು ಅರ್ಜುನ್

‘ಪುಷ್ಪ 2’ ಚಿತ್ರ ಡಿಸೆಂಬರ್ 5ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದರು. ಅಲ್ಲು ಅರ್ಜುನ್ ನಟನೆಯ ಈ ಚಿತ್ರಕ್ಕೆ, ಸುಕುಮಾರ್ ನಿರ್ದೇಶನ ಇದೆ. ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ನಟಿಸಿದ್ದಾರೆ. ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ