ಐಶ್ವರ್ಯಾಗೆ ಕಾರು ಉಡುಗೊರೆ ಕೊಟ್ಟ ಅಭಿಷೇಕ್ ಬಚ್ಚನ್? ವಿಚ್ಛೇದನ ವದಂತಿಗೆ ಬ್ರೇಕ್

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ವಿಚ್ಛೇದನ ಪಡೆದುಕೊಳ್ಳುತ್ತಾರೆ ಎನ್ನುವ ಸುದ್ದಿ ಇತ್ತೀಚೆಗೆ ಜೋರಾಗಿದೆ. ಇದಕ್ಕೆ ಅನೇಕ ಸಾಕ್ಷಿಗಳು ಲಭ್ಯ ಆಗುತ್ತಿವೆ. ಹೀಗಿರುವಾಗಲೇ ಅಭಿಷೇಕ್ ಬಚ್ಚನ್ ಅವರು ಐಶ್ವರ್ಯಾಗೆ ಕಾರನ್ನು ಉಡುಗೊರೆ ನೀಡಿದರೇ ಎನ್ನುವ ಪ್ರಶ್ನೆ ಮೂಡಿದೆ.

ಐಶ್ವರ್ಯಾಗೆ ಕಾರು ಉಡುಗೊರೆ ಕೊಟ್ಟ ಅಭಿಷೇಕ್ ಬಚ್ಚನ್? ವಿಚ್ಛೇದನ ವದಂತಿಗೆ ಬ್ರೇಕ್
ಅಭಿಷೇಕ್-ಐಶ್ವರ್ಯಾ
Follow us
|

Updated on: Jul 25, 2024 | 2:09 PM

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ದಾಂಪತ್ಯ ವಿಚಾರ ಸದ್ಯ ಎಲ್ಲೆಡೆ ಚರ್ಚೆ ಆಗುತ್ತಿದೆ. ಇವರು ವಿಚ್ಛೇದನ ತೆಗೆದುಕೊಳ್ಳುವ ನಿರ್ಧಾರ ತೆಗೆದುಕೊಂಡರು ಎಂದು ಇತ್ತೀಚೆಗೆ ವರದಿ ಆಗಿತ್ತು. ಈ ಗುಮಾನಿ ಹುಟ್ಟಲು ಕಾರಣ ಆಗಿದ್ದು ಅನಂತ್ ಅಂಬಾನಿ ಮದುವೆ ದಿನ ನಡೆದ ಘಟನೆ. ಈ ವಿವಾಹ ಸಮಾರಂಬಕ್ಕೆ ಐಶ್ವರ್ಯಾ ಹಾಗೂ ಮಗಳು ಆರಾಧ್ಯಾ ಒಟ್ಟಾಗಿ ಬಂದರೆ, ಅಮಿತಾಭ್, ಅಭಿಷೇಕ್, ಜಯಾ ಪ್ರತ್ಯೇಕವಾಗಿ ಬಂದಿದ್ದರು. ಈ ಕಾರಣದಿಂದ ಇವರ ವಿಚ್ಛೇದನ ಸುದ್ದಿ ಹರಿದಾಡಿತ್ತು. ಈಗ ಅಭಿಷೇಕ್ ಬಚ್ಚನ್ ಅವರು ಐಶ್ವರ್ಯಾ ರೈಗೆ ಕಾರು ಗಿಫ್ಟ್ ನೀಡಿದರೇ ಎನ್ನುವ ಪ್ರಶ್ನೆ ಮೂಡಿದೆ.

ವರದಿಗಳ ಪ್ರಕಾರ ಅಭಿಷೇಕ್ ಬಚ್ಚನ್ ಅವರು ಹೊಸ ಕಾರು ಖರೀದಿ ಮಾಡಿದ್ದಾರೆ. ಸೋದರಳಿಯ ಅಗಸ್ತ್ಯ ನಂದಾ, ಸೊಸೆ ನವ್ಯಾ ನವೇಲಿ ನಂದಾ ಮತ್ತು ಶಾರುಖ್ ಖಾನ್ ಅವರ ಪುತ್ರಿ ಸುಹಾನಾ ಖಾನ್ ಅವರನ್ನು ಅಭಿಷೇಕ್ ಹೊಸ ಕಾರಿನಲ್ಲಿ ಡಿನ್ನರ್​ಗೆ ಕರೆದುಕೊಂಡು ಹೋಗಿದ್ದಾರೆ. ಆಗ ಹಲವರ ಗಮನ ಅಭಿಷೇಕ್ ಬಚ್ಚನ್ ಅವರ ಹೊಸ ಕಾರಿನ ನಂಬರ್ ಪ್ಲೇಟ್ ಕಡೆಗೆ ಹೋಗಿದೆ. ಐಶ್ವರ್ಯಾ ಅವರ ಫೇವರಿಟ್ ಸಂಖ್ಯೆಯನ್ನೇ ಅಭಿಷೇಕ್ ತಮ್ಮ ಕಾರಿನ ನಂಬರ್ ಪ್ಲೇಟ್ ಮಾಡಿಕೊಂಡಿದ್ದಾರೆ.

ಐಶ್ವರ್ಯಾ ರೈ ಬಳಿ ‘Mercedes-Benz S-Class’ ಕಾರು ಇತ್ತು. ಅದನ್ನು ಈಗ ಮಾರಾಟ ಮಾಡಲಾಗಿದೆ. ಈ ಕಾರಿನ ಸಂಖ್ಯೆ 5050 ಆಗಿತ್ತು. ಈಗ ಅಭಿಷೇಕ್ ಬಚ್ಚನ್ ಅವರ ಹೊಸ ಕಾರಿನ ಸಂಖ್ಯೆ ಕೂಡ 5050 ಆಗಿದೆ. ಹೀಗಾಗಿ, ಕೆಲವರು ಅಭಿಷೇಕ್ ಅವರು ಐಶ್ವರ್ಯಾಗೆ ಕಾರು ಗಿಫ್ಟ್ ಮಾಡಿದ್ದಾರೆ ಎಂದಿದ್ದಾರೆ. ಇನ್ನೂ ಕೆಲವರು ಅಭಿಷೇಕ್ ಅವರು ಐಶ್ವರ್ಯಾ ಅವರ ಫೇವರಿಟ್ ಸಂಖ್ಯೆಯನ್ನು ತಮ್ಮ ಕಾರಿನ ಸಂಖ್ಯೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಮಾತನಾಡಿದ್ದಾರೆ.

ಇದನ್ನೂ ಓದಿ: ರಜನಿಕಾಂತ್​ಗೆ ಐಶ್ವರ್ಯಾ ರೈ ಜೋಡಿ ಎಂದಾಗ ಕಕ್ಕಾಬಿಕ್ಕಿ ಆಗಿದ್ದ ರಾಜಸ್ಥಾನಿ ವ್ಯಕ್ತಿ

ಹಲವು ವರ್ಷಗಳ ಕಾಲ ಪರಸ್ಪರ ಡೇಟಿಂಗ್ ಮಾಡಿದ ನಂತರ ಐಶ್ವರ್ಯಾ ಹಾಗೂ ಅಭಿಷೇಕ್ ಮದುವೆಯಾಗಲು ನಿರ್ಧರಿಸಿದರು. 2007ರಲ್ಲಿ ಐಶ್ವರ್ಯಾ-ಅಭಿಷೇಕ್ ಮದುವೆಯಾದರು. ಮದುವೆಯ ನಂತರ ಐಶ್ವರ್ಯಾ 2011 ರಲ್ಲಿ ಮಗಳು ಆರಾಧ್ಯಾಗೆ ಜನ್ಮ ನೀಡಿದರು. ಈಗ ಕಾರಿನ ಉಡುಗೊರೆ ವಿಚಾರದಿಂದ ಇವರ ವಿಚ್ಛೇದನ ವಿಚಾರಕ್ಕೆ ಬ್ರೇಕ್ ಬಿದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು