AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟ್ಯಾಧಿಪತಿ ಶೋಗೆ ಅಭಿಷೇಕ್; ‘ಕರೆದು ತಪ್ಪು ಮಾಡಿದೆ’ ಎಂದ ಅಮಿತಾಭ್ ಬಚ್ಚನ್

ಅಮಿತಾಭ್ ಬಚ್ಚನ್ ಅವರ 'ಕೌನ್ ಬನೇಗಾ ಕರೋಡ್ಪತಿ' ಶೋಗೆ ಅಭಿಷೇಕ್ ಬಚ್ಚನ್ ಅತಿಥಿಯಾಗಿ ಆಗಮಿಸಿ, ಅಮಿತಾಭ್ ಅವರ ಅನುಕರಣೆ ಮಾಡಿ ಎಲ್ಲರನ್ನು ನಗಿಸಿದ್ದಾರೆ. ಏಳು ಕೋಟಿ ಗೆಲ್ಲುವವರೆಗೂ ಹೋಗುವುದಿಲ್ಲ ಎಂದು ಬ್ಲ್ಯಾಕ್‌ಮೇಲ್ ಮಾಡಿ ಅಮಿತಾಭ್ ಅವರನ್ನು ಕಂಗಾಲಾಗಿಸಿದ್ದಾರೆ. ನವೆಂಬರ್ 22 ರಂದು ಈ ಎಪಿಸೋಡ್ ಪ್ರಸಾರವಾಗಲಿದೆ.

ಕೋಟ್ಯಾಧಿಪತಿ ಶೋಗೆ ಅಭಿಷೇಕ್; ‘ಕರೆದು ತಪ್ಪು ಮಾಡಿದೆ’ ಎಂದ ಅಮಿತಾಭ್ ಬಚ್ಚನ್
ಅಭಿಷೇಕ್-ಅಮಿತಾಭ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 15, 2024 | 11:13 AM

Share

ಅಮಿತಾಭ್ ಬಚ್ಚನ್ ಅವರು ‘ಕೌನ್ ಬನೇಗಾ ಕರೋಡ್ಪತಿ’ ಶೋ ನಡೆಸಿಕೊಡುತ್ತಿದ್ದಾರೆ. ಈ ಶೋ ಅನೇಕರಿಗೆ ಇಷ್ಟ ಆಗುತ್ತಿದೆ. ಅಮಿತಾಭ್ ಬಚ್ಚನ್ ಅವರು ಬಹಳ ಶ್ರದ್ಧೆಯಿಂದ ಈ ಶೋನ ನಿರೂಪಣೆ ಮಾಡುತ್ತಿದ್ದಾರೆ. ಈ ಶೋಗೆ ಈಗ ವಿಶೇಷ ಅತಿಥಿಯಾಗಿ ಅಭಿಷೇಕ್ ಬಚ್ಚನ್ ಆಗಮಿಸಿದ್ದಾರೆ. ಅವರು ಹಲವು ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ. ಅಲ್ಲದೆ, ಬ್ಲ್ಯಾಕ್​ಮೇಲ್ ಮಾಡಿದ್ದಾರೆ. ಇದನ್ನು ಕೇಳಿ, ಅಮಿತಾಭ್ ಬಚ್ಚನ್ ಕಂಗಾಲಾಗಿದ್ದಾರೆ.

‘ಕೌನ್ ಬನೇಗಾ ಕರೋಡ್ಪತಿ’ ಶೋ ಗೆದ್ದರೆ ಏಳು ಕೋಟಿ ರೂಪಾಯಿ ಸಿಗುತ್ತದೆ. ಹೀಗೆ ಯಾವುದಾದರೂ ಸ್ಪರ್ಧಿ ಗೆದ್ದರೆ ‘ಸಾತ್ ಕರೋಡ್’ ಎಂದು ಅಮಿತಾಭ್ ಅವರು ಕೂಗುತ್ತಾರೆ. ಇದನ್ನು ಅಭಿಷೇಕ್ ಬಚ್ಚನ್ ಅವರು ಮಿಮಿಕ್ರಿ ಮಾಡಿ ತೋರಿಸಿದ್ದಾರೆ. ‘ಸಾತ್ ಕರೋಡ್’ ಎಂದು ಅಮಿತಾಭ್ ಸ್ಟೈಲ್​ನ ಮಿಮಿಕ್ರಿ ಮಾಡಿ ತೋರಿಸಿದ್ದಾರೆ.

ಈ ವೇಳೆ ಒಂದು ಫನ್ನಿ ಘಟನೆ ಕೂಡ ಹೇಳಿದ್ದಾರೆ. ‘ನಮ್ಮ ಮನೆಯಲ್ಲಿ ಎಲ್ಲರೂ ಸೇರುತ್ತೇವೆ. ಯಾರಾದರೂ ಪ್ರಶ್ನೆ ಕೇಳಿದಾಗ ಮಕ್ಕಳು ಸಾತ್ ಕರೋಡ್ ಎಂದು ಕೂಗುತ್ತಾರೆ’ ಎಂದಿದ್ದಾರೆ ಅಭಿಷೇಕ್ ಬಚ್ಚನ್. ಈ ವೇಳೆ ಅಭಿಷೇಕ್ ಅವರು ಬ್ಲ್ಯಾಕ್​ಮೇಲ್ ಕೂಡ ಮಾಡಿದ್ದಾರೆ. ‘ನಾವು ಏಳು ಕೋಟಿ ಗೆಲ್ಲುವವರೆಗೆ ಇಲ್ಲಿಂದ ಹೋಗಲ್ಲ’ ಎಂದಿದ್ದಾರೆ. ‘ಇವನನ್ನು ಕರೆದು ದೊಡ್ಡ ತಪ್ಪು ಮಾಡಿದೆ’ ಎಂದು ಅಮಿತಾಭ್ ನಕ್ಕಿದ್ದಾರೆ.

ಸೋನಿ ಟಿವಿಯಲ್ಲಿ  ‘ಕೌನ್ ಬನೇಗಾ ಕರೋಡ್ಪತಿ’ ಶೋ ಪ್ರಸಾರ ಕಾಣುತ್ತಿದೆ. ಈ ಶೋ ಸಾಕಷ್ಟು ಗಮನ ಸೆಳೆಯುತ್ತಿದೆ. ಅಭಿಷೇಕ್ ಅವರು ಅತಿಥಿಯಾಗಿ ಆಗಮಿಸಿರೋ ಎಪಿಸೋಡ್​ನ ಪ್ರೋಮೋನ ಸೋನಿ ಟಿವಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಹಾಕುತ್ತಿದ್ದಾರೆ. ನವೆಂಬರ್ 22ರಂದು ಈ ಎಪಿಸೋಡ್ ಸೋನಿ ಟಿವಿಯಲ್ಲಿ ಪ್ರಸಾರ ಕಾಣಲಿದೆ.

ಇದನ್ನೂ ಓದಿ: ‘ದುರ್ಬಲ ಪುರುಷ ಪ್ರಬಲ ಮಹಿಳೆಯನ್ನು ಹ್ಯಾಂಡಲ್ ಮಾಡಲಾರ’; ಅಭಿಷೇಕ್ ಬಚ್ಚನ್ ಬಗ್ಗೆ ಟೀಕೆ

ಅಭಿಷೇಕ್ ಬಚ್ಚನ್ ಸದ್ಯ ಸಖತ್ ಸುದ್ದಿಯಲ್ಲಿ ಇದ್ದಾರೆ. ಅವರು ಪತ್ನಿ ಐಶ್ವರ್ಯಾ ಜೊತೆ ವಿಚ್ಛೇದನ ಪಡೆದಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಸದ್ಯ ಈ ವಿಚಾರ ಸಖತ್ ಸುದ್ದಿಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ