Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟ್ಯಾಧಿಪತಿ ಶೋಗೆ ಅಭಿಷೇಕ್; ‘ಕರೆದು ತಪ್ಪು ಮಾಡಿದೆ’ ಎಂದ ಅಮಿತಾಭ್ ಬಚ್ಚನ್

ಅಮಿತಾಭ್ ಬಚ್ಚನ್ ಅವರ 'ಕೌನ್ ಬನೇಗಾ ಕರೋಡ್ಪತಿ' ಶೋಗೆ ಅಭಿಷೇಕ್ ಬಚ್ಚನ್ ಅತಿಥಿಯಾಗಿ ಆಗಮಿಸಿ, ಅಮಿತಾಭ್ ಅವರ ಅನುಕರಣೆ ಮಾಡಿ ಎಲ್ಲರನ್ನು ನಗಿಸಿದ್ದಾರೆ. ಏಳು ಕೋಟಿ ಗೆಲ್ಲುವವರೆಗೂ ಹೋಗುವುದಿಲ್ಲ ಎಂದು ಬ್ಲ್ಯಾಕ್‌ಮೇಲ್ ಮಾಡಿ ಅಮಿತಾಭ್ ಅವರನ್ನು ಕಂಗಾಲಾಗಿಸಿದ್ದಾರೆ. ನವೆಂಬರ್ 22 ರಂದು ಈ ಎಪಿಸೋಡ್ ಪ್ರಸಾರವಾಗಲಿದೆ.

ಕೋಟ್ಯಾಧಿಪತಿ ಶೋಗೆ ಅಭಿಷೇಕ್; ‘ಕರೆದು ತಪ್ಪು ಮಾಡಿದೆ’ ಎಂದ ಅಮಿತಾಭ್ ಬಚ್ಚನ್
ಅಭಿಷೇಕ್-ಅಮಿತಾಭ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 15, 2024 | 11:13 AM

ಅಮಿತಾಭ್ ಬಚ್ಚನ್ ಅವರು ‘ಕೌನ್ ಬನೇಗಾ ಕರೋಡ್ಪತಿ’ ಶೋ ನಡೆಸಿಕೊಡುತ್ತಿದ್ದಾರೆ. ಈ ಶೋ ಅನೇಕರಿಗೆ ಇಷ್ಟ ಆಗುತ್ತಿದೆ. ಅಮಿತಾಭ್ ಬಚ್ಚನ್ ಅವರು ಬಹಳ ಶ್ರದ್ಧೆಯಿಂದ ಈ ಶೋನ ನಿರೂಪಣೆ ಮಾಡುತ್ತಿದ್ದಾರೆ. ಈ ಶೋಗೆ ಈಗ ವಿಶೇಷ ಅತಿಥಿಯಾಗಿ ಅಭಿಷೇಕ್ ಬಚ್ಚನ್ ಆಗಮಿಸಿದ್ದಾರೆ. ಅವರು ಹಲವು ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ. ಅಲ್ಲದೆ, ಬ್ಲ್ಯಾಕ್​ಮೇಲ್ ಮಾಡಿದ್ದಾರೆ. ಇದನ್ನು ಕೇಳಿ, ಅಮಿತಾಭ್ ಬಚ್ಚನ್ ಕಂಗಾಲಾಗಿದ್ದಾರೆ.

‘ಕೌನ್ ಬನೇಗಾ ಕರೋಡ್ಪತಿ’ ಶೋ ಗೆದ್ದರೆ ಏಳು ಕೋಟಿ ರೂಪಾಯಿ ಸಿಗುತ್ತದೆ. ಹೀಗೆ ಯಾವುದಾದರೂ ಸ್ಪರ್ಧಿ ಗೆದ್ದರೆ ‘ಸಾತ್ ಕರೋಡ್’ ಎಂದು ಅಮಿತಾಭ್ ಅವರು ಕೂಗುತ್ತಾರೆ. ಇದನ್ನು ಅಭಿಷೇಕ್ ಬಚ್ಚನ್ ಅವರು ಮಿಮಿಕ್ರಿ ಮಾಡಿ ತೋರಿಸಿದ್ದಾರೆ. ‘ಸಾತ್ ಕರೋಡ್’ ಎಂದು ಅಮಿತಾಭ್ ಸ್ಟೈಲ್​ನ ಮಿಮಿಕ್ರಿ ಮಾಡಿ ತೋರಿಸಿದ್ದಾರೆ.

ಈ ವೇಳೆ ಒಂದು ಫನ್ನಿ ಘಟನೆ ಕೂಡ ಹೇಳಿದ್ದಾರೆ. ‘ನಮ್ಮ ಮನೆಯಲ್ಲಿ ಎಲ್ಲರೂ ಸೇರುತ್ತೇವೆ. ಯಾರಾದರೂ ಪ್ರಶ್ನೆ ಕೇಳಿದಾಗ ಮಕ್ಕಳು ಸಾತ್ ಕರೋಡ್ ಎಂದು ಕೂಗುತ್ತಾರೆ’ ಎಂದಿದ್ದಾರೆ ಅಭಿಷೇಕ್ ಬಚ್ಚನ್. ಈ ವೇಳೆ ಅಭಿಷೇಕ್ ಅವರು ಬ್ಲ್ಯಾಕ್​ಮೇಲ್ ಕೂಡ ಮಾಡಿದ್ದಾರೆ. ‘ನಾವು ಏಳು ಕೋಟಿ ಗೆಲ್ಲುವವರೆಗೆ ಇಲ್ಲಿಂದ ಹೋಗಲ್ಲ’ ಎಂದಿದ್ದಾರೆ. ‘ಇವನನ್ನು ಕರೆದು ದೊಡ್ಡ ತಪ್ಪು ಮಾಡಿದೆ’ ಎಂದು ಅಮಿತಾಭ್ ನಕ್ಕಿದ್ದಾರೆ.

ಸೋನಿ ಟಿವಿಯಲ್ಲಿ  ‘ಕೌನ್ ಬನೇಗಾ ಕರೋಡ್ಪತಿ’ ಶೋ ಪ್ರಸಾರ ಕಾಣುತ್ತಿದೆ. ಈ ಶೋ ಸಾಕಷ್ಟು ಗಮನ ಸೆಳೆಯುತ್ತಿದೆ. ಅಭಿಷೇಕ್ ಅವರು ಅತಿಥಿಯಾಗಿ ಆಗಮಿಸಿರೋ ಎಪಿಸೋಡ್​ನ ಪ್ರೋಮೋನ ಸೋನಿ ಟಿವಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಹಾಕುತ್ತಿದ್ದಾರೆ. ನವೆಂಬರ್ 22ರಂದು ಈ ಎಪಿಸೋಡ್ ಸೋನಿ ಟಿವಿಯಲ್ಲಿ ಪ್ರಸಾರ ಕಾಣಲಿದೆ.

ಇದನ್ನೂ ಓದಿ: ‘ದುರ್ಬಲ ಪುರುಷ ಪ್ರಬಲ ಮಹಿಳೆಯನ್ನು ಹ್ಯಾಂಡಲ್ ಮಾಡಲಾರ’; ಅಭಿಷೇಕ್ ಬಚ್ಚನ್ ಬಗ್ಗೆ ಟೀಕೆ

ಅಭಿಷೇಕ್ ಬಚ್ಚನ್ ಸದ್ಯ ಸಖತ್ ಸುದ್ದಿಯಲ್ಲಿ ಇದ್ದಾರೆ. ಅವರು ಪತ್ನಿ ಐಶ್ವರ್ಯಾ ಜೊತೆ ವಿಚ್ಛೇದನ ಪಡೆದಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಸದ್ಯ ಈ ವಿಚಾರ ಸಖತ್ ಸುದ್ದಿಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ