AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಬೇಗ ಗುಣಮುಖರಾಗೋದು ಹೇಗೆ?; ತಾವು ಉಪಯೋಗಿಸಿದ ತಂತ್ರ ಹೇಳಿದ ಅಭಿಷೇಕ್​ ಬಚ್ಚನ್​

ಅಭಿಷೇಕ್​, ಅಮಿತಾಭ್​ ಸೇರಿ ಬಚ್ಚನ್​ ಕುಟುಂಬದ ಬಹುತೇಕರಿಗೆ ಕಳೆದ ಜುಲೈನಲ್ಲಿ ಕೊವಿಡ್​ ಆಗಿತ್ತು. ಅಮಿತಾಭ್​ ಹಾಗೂ ಅಭಿಷೇಕ್​ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಕೊವಿಡ್​ನಿಂದ ಬೇಗ ಗುಣಮುಖರಾಗೋದು ಹೇಗೆ?; ತಾವು ಉಪಯೋಗಿಸಿದ ತಂತ್ರ ಹೇಳಿದ ಅಭಿಷೇಕ್​ ಬಚ್ಚನ್​
ಅಭಿಷೇಕ್​-ಐಷ್​ ದಂಪತಿ: ಬಾಲಿವುಡ್​ ಸ್ಟಾರ್​​ ಜೋಡಿಗಳಲ್ಲಿ ಅಭಿಷೇಕ್​ ಬಚ್ಚನ್​ ಹಾಗೂ ಐಶ್ವರ್ಯಾ ರೈ ಜೋಡಿಯೂ ಒಂದು. ಅನೇಕ ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದ ಇಬ್ಬರೂ 2007ರಲ್ಲಿ ಮದುವೆ ಆಗಿದ್ದರು. ಅಚ್ಚರಿ ಎಂದರೆ, ಐಶ್ವರ್ಯಾಗಿಂತ ಅಭಿಷೇಕ್ ಎರಡು ವರ್ಷ ದೊಡ್ಡವರು.
ರಾಜೇಶ್ ದುಗ್ಗುಮನೆ
|

Updated on:Jun 01, 2021 | 7:10 PM

Share

ಅಭಿಷೇಕ್​ ಬಚ್ಚನ್​ ಅವರಿಗೆ ಕಳೆದ ವರ್ಷ ಕೊರೊನಾ ಕಾಣಿಸಿಕೊಂಡಿತ್ತು. 29 ದಿನಗಳ ಕಾಲ ಕೊವಿಡ್​ನಿಂದ ಬಳಲಿದ್ದ ಅವರು, ನಂತರ ಚೇತರಿಕೆ ಕಂಡಿದ್ದರು. ಈ ಅನುಭವ ಹೇಗಿತ್ತು ಎನ್ನುವ ಬಗ್ಗೆ ಅಭಿಷೇಕ್​ ಈಗ ಮಾತನಾಡಿದ್ದಾರೆ. ಕೊವಿಡ್​ 19ರ ವಿರುದ್ಧ ಹೋರಾಡುವುದು ಅಷ್ಟು ಸುಲಭವಾಗಿರಲಿಲ್ಲ ಎಂದು ಅನುಭವ ಹಂಚಿಕೊಂಡಿದ್ದಾರೆ.

‘ಕೊರೊನಾ ಬಂದ ದಿನಗಳು ನನಗೆ ಒಳ್ಳೆಯ ಅನುಭವ ಆಗಿರಲಿಲ್ಲ. ನನ್ನ ನಂಬಿಕೊಂಡಿದ್ದ ಕುಟುಂಬ ಕೂಡ ಇದರಿಂದ ತೊಂದರೆಗೆ ಒಳಗಾಗಿತ್ತು. ನಿಮಗೆ ರೋಗ ಬಂದಿದೆ ಎಂದರೆ, ನೀವು ತುಂಬಾ ಶಕ್ತಿಹೀನರಾಗಿದ್ದೀರಿ ಎಂದರ್ಥ. ನಾನು ಆಸ್ಪತ್ರೆಯಲ್ಲಿದ್ದಾಗ ಆರಂಭಿಕ ರಾತ್ರಿಗಳಲ್ಲಿ ನಿದ್ರೆ ಮಾಡುವುದು ಕಷ್ಟಕರವಾಗಿತ್ತು. ಮುಂದೇನಾಗುತ್ತದೆ ಎನ್ನುವ ಭಯ ನನ್ನನ್ನು ಬಲವಾಗಿ ಕಾಡಿತ್ತು’ ಎಂದಿದ್ದಾರೆ ಅಭಿಷೇಕ್​.

‘ನನ್ನ ತಂದೆ ಅಮಿತಾಭ್​ ವಯಸ್ಸು 78. ಆ ವಯಸ್ಸಿನಲ್ಲೂ ಅವರು ಕೊರೊನಾ ವಿರುದ್ಧ ಯಶಸ್ವಿ ಹೋರಾಟ ನಡೆಸಿದ್ದಾರೆ. ಕೊವಿಡ್​ ವಿರುದ್ಧದ ಹೋರಾಟದಲ್ಲಿ ಸದಾ ಪಾಸಿಟಿವ್​ ಆಲೋಚನೆಗಳನ್ನು ಮಾಡುತ್ತಿರಬೇಕು. ಹಾಗಾದಾಗ ಮಾತ್ರ ಇದರ ವಿರುಧ್ಧ ಜಯಿಸೋಕೆ ಸಾಧ್ಯ. ನಾನು ನನ್ನ ತಂದೆ ಇದೇ ತಂತ್ರ ಉಪಯೋಗಿಸಿದ್ದೇವೆ ಎಂದಿದ್ದಾರೆ ಅಮಿತಾಭ್​.

ಅಭಿಷೇಕ್​, ಅಮಿತಾಭ್​ ಸೇರಿ ಬಚ್ಚನ್​ ಕುಟುಂಬದ ಬಹುತೇಕರಿಗೆ ಕಳೆದ ಜುಲೈನಲ್ಲಿ ಕೊವಿಡ್​ ಆಗಿತ್ತು. ಅಮಿತಾಭ್​ ಹಾಗೂ ಅಭಿಷೇಕ್​ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಹೀಗಾಗಿ, ಮಹಾರಾಷ್ಟ್ರ ಸೇರಿ ಸಾಕಷ್ಟು ಕಡೆಗಳಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಇದರಿಂದ ಮನೆಯಿಂದ ಹೊರಹೋಗೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಐಶ್ವರ್ಯಾ ರೈ, ಅಭಿಷೇಕ್​ ಬಚ್ಚನ್​, ಆರಾಧ್ಯ ಮತ್ತು ಐಶ್ವರ್ಯಾ ತಾಯಿ ಬೃಂದ್ಯಾ ರೈ ಒಟ್ಟಾಗಿ ಸಮಯ ಕಳೆಯುತ್ತಿದ್ದಾರೆ. ಇತ್ತೀಚೆಗೆ ಐಶ್ವರ್ಯಾ-ಅಭಿಷೇಕ್​ ಒಟ್ಟಾಗಿ ಸೇರಿ ಬೃಂದ್ಯಾ ರೈ ಅವರ 70ನೇ ಜನ್ಮದಿನ ಆಚರಣೆಯನ್ನು ಆಚರಣೆ ಮಾಡಿದ್ದರು.

ಇದನ್ನೂ ಓದಿ: ‘ನಿಮ್ಮ ಅರ್ಹತೆಗಿಂತ ಸುಂದರ ಹೆಂಡತಿ ಇದ್ದಾಳೆ’ ಎಂದು ಟ್ರೋಲ್ ಮಾಡಿದ ಅಭಿಮಾನಿಗೆ ಅಭಿಷೇಕ್ ಬಚ್ಚನ್ ಕ್ಲಾಸ್!

Published On - 7:05 pm, Tue, 1 June 21

ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು