AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಬೇಗ ಗುಣಮುಖರಾಗೋದು ಹೇಗೆ?; ತಾವು ಉಪಯೋಗಿಸಿದ ತಂತ್ರ ಹೇಳಿದ ಅಭಿಷೇಕ್​ ಬಚ್ಚನ್​

ಅಭಿಷೇಕ್​, ಅಮಿತಾಭ್​ ಸೇರಿ ಬಚ್ಚನ್​ ಕುಟುಂಬದ ಬಹುತೇಕರಿಗೆ ಕಳೆದ ಜುಲೈನಲ್ಲಿ ಕೊವಿಡ್​ ಆಗಿತ್ತು. ಅಮಿತಾಭ್​ ಹಾಗೂ ಅಭಿಷೇಕ್​ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಕೊವಿಡ್​ನಿಂದ ಬೇಗ ಗುಣಮುಖರಾಗೋದು ಹೇಗೆ?; ತಾವು ಉಪಯೋಗಿಸಿದ ತಂತ್ರ ಹೇಳಿದ ಅಭಿಷೇಕ್​ ಬಚ್ಚನ್​
ಅಭಿಷೇಕ್​-ಐಷ್​ ದಂಪತಿ: ಬಾಲಿವುಡ್​ ಸ್ಟಾರ್​​ ಜೋಡಿಗಳಲ್ಲಿ ಅಭಿಷೇಕ್​ ಬಚ್ಚನ್​ ಹಾಗೂ ಐಶ್ವರ್ಯಾ ರೈ ಜೋಡಿಯೂ ಒಂದು. ಅನೇಕ ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದ ಇಬ್ಬರೂ 2007ರಲ್ಲಿ ಮದುವೆ ಆಗಿದ್ದರು. ಅಚ್ಚರಿ ಎಂದರೆ, ಐಶ್ವರ್ಯಾಗಿಂತ ಅಭಿಷೇಕ್ ಎರಡು ವರ್ಷ ದೊಡ್ಡವರು.
ರಾಜೇಶ್ ದುಗ್ಗುಮನೆ
|

Updated on:Jun 01, 2021 | 7:10 PM

Share

ಅಭಿಷೇಕ್​ ಬಚ್ಚನ್​ ಅವರಿಗೆ ಕಳೆದ ವರ್ಷ ಕೊರೊನಾ ಕಾಣಿಸಿಕೊಂಡಿತ್ತು. 29 ದಿನಗಳ ಕಾಲ ಕೊವಿಡ್​ನಿಂದ ಬಳಲಿದ್ದ ಅವರು, ನಂತರ ಚೇತರಿಕೆ ಕಂಡಿದ್ದರು. ಈ ಅನುಭವ ಹೇಗಿತ್ತು ಎನ್ನುವ ಬಗ್ಗೆ ಅಭಿಷೇಕ್​ ಈಗ ಮಾತನಾಡಿದ್ದಾರೆ. ಕೊವಿಡ್​ 19ರ ವಿರುದ್ಧ ಹೋರಾಡುವುದು ಅಷ್ಟು ಸುಲಭವಾಗಿರಲಿಲ್ಲ ಎಂದು ಅನುಭವ ಹಂಚಿಕೊಂಡಿದ್ದಾರೆ.

‘ಕೊರೊನಾ ಬಂದ ದಿನಗಳು ನನಗೆ ಒಳ್ಳೆಯ ಅನುಭವ ಆಗಿರಲಿಲ್ಲ. ನನ್ನ ನಂಬಿಕೊಂಡಿದ್ದ ಕುಟುಂಬ ಕೂಡ ಇದರಿಂದ ತೊಂದರೆಗೆ ಒಳಗಾಗಿತ್ತು. ನಿಮಗೆ ರೋಗ ಬಂದಿದೆ ಎಂದರೆ, ನೀವು ತುಂಬಾ ಶಕ್ತಿಹೀನರಾಗಿದ್ದೀರಿ ಎಂದರ್ಥ. ನಾನು ಆಸ್ಪತ್ರೆಯಲ್ಲಿದ್ದಾಗ ಆರಂಭಿಕ ರಾತ್ರಿಗಳಲ್ಲಿ ನಿದ್ರೆ ಮಾಡುವುದು ಕಷ್ಟಕರವಾಗಿತ್ತು. ಮುಂದೇನಾಗುತ್ತದೆ ಎನ್ನುವ ಭಯ ನನ್ನನ್ನು ಬಲವಾಗಿ ಕಾಡಿತ್ತು’ ಎಂದಿದ್ದಾರೆ ಅಭಿಷೇಕ್​.

‘ನನ್ನ ತಂದೆ ಅಮಿತಾಭ್​ ವಯಸ್ಸು 78. ಆ ವಯಸ್ಸಿನಲ್ಲೂ ಅವರು ಕೊರೊನಾ ವಿರುದ್ಧ ಯಶಸ್ವಿ ಹೋರಾಟ ನಡೆಸಿದ್ದಾರೆ. ಕೊವಿಡ್​ ವಿರುದ್ಧದ ಹೋರಾಟದಲ್ಲಿ ಸದಾ ಪಾಸಿಟಿವ್​ ಆಲೋಚನೆಗಳನ್ನು ಮಾಡುತ್ತಿರಬೇಕು. ಹಾಗಾದಾಗ ಮಾತ್ರ ಇದರ ವಿರುಧ್ಧ ಜಯಿಸೋಕೆ ಸಾಧ್ಯ. ನಾನು ನನ್ನ ತಂದೆ ಇದೇ ತಂತ್ರ ಉಪಯೋಗಿಸಿದ್ದೇವೆ ಎಂದಿದ್ದಾರೆ ಅಮಿತಾಭ್​.

ಅಭಿಷೇಕ್​, ಅಮಿತಾಭ್​ ಸೇರಿ ಬಚ್ಚನ್​ ಕುಟುಂಬದ ಬಹುತೇಕರಿಗೆ ಕಳೆದ ಜುಲೈನಲ್ಲಿ ಕೊವಿಡ್​ ಆಗಿತ್ತು. ಅಮಿತಾಭ್​ ಹಾಗೂ ಅಭಿಷೇಕ್​ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಹೀಗಾಗಿ, ಮಹಾರಾಷ್ಟ್ರ ಸೇರಿ ಸಾಕಷ್ಟು ಕಡೆಗಳಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಇದರಿಂದ ಮನೆಯಿಂದ ಹೊರಹೋಗೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಐಶ್ವರ್ಯಾ ರೈ, ಅಭಿಷೇಕ್​ ಬಚ್ಚನ್​, ಆರಾಧ್ಯ ಮತ್ತು ಐಶ್ವರ್ಯಾ ತಾಯಿ ಬೃಂದ್ಯಾ ರೈ ಒಟ್ಟಾಗಿ ಸಮಯ ಕಳೆಯುತ್ತಿದ್ದಾರೆ. ಇತ್ತೀಚೆಗೆ ಐಶ್ವರ್ಯಾ-ಅಭಿಷೇಕ್​ ಒಟ್ಟಾಗಿ ಸೇರಿ ಬೃಂದ್ಯಾ ರೈ ಅವರ 70ನೇ ಜನ್ಮದಿನ ಆಚರಣೆಯನ್ನು ಆಚರಣೆ ಮಾಡಿದ್ದರು.

ಇದನ್ನೂ ಓದಿ: ‘ನಿಮ್ಮ ಅರ್ಹತೆಗಿಂತ ಸುಂದರ ಹೆಂಡತಿ ಇದ್ದಾಳೆ’ ಎಂದು ಟ್ರೋಲ್ ಮಾಡಿದ ಅಭಿಮಾನಿಗೆ ಅಭಿಷೇಕ್ ಬಚ್ಚನ್ ಕ್ಲಾಸ್!

Published On - 7:05 pm, Tue, 1 June 21

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!