‘ಮಾರ್ಕ್ ಆ್ಯಂಟನಿ’ ಶೂಟಿಂಗ್ ವೇಳೆ ಅವಘಡ: ಕೂದಲೆಳೆ ಅಂತರದಲ್ಲಿ ಪಾರಾದ ನಟ ವಿಶಾಲ್

ತೆಲುಗು ನಟ ವಿಶಾಲ್​ ನಟಿಸುತ್ತಿರುವ ಮಾರ್ಕ್​​ ಆಂಟೋನಿ ಚಿತ್ರದ ಶೂಟಿಂಗ್​ ವೇಳೆ ಅವಘಡ ಸಂಭವಿಸಿದ್ದು, ದೊಡ್ಡ ಅಪಘಾತದಿಂದ ವಿಶಾಲ್ ಅವರು ಪಾರಾಗಿರುವಂತಹ ಘಟನೆ ನಡೆದಿದೆ.

‘ಮಾರ್ಕ್ ಆ್ಯಂಟನಿ’ ಶೂಟಿಂಗ್ ವೇಳೆ ಅವಘಡ: ಕೂದಲೆಳೆ ಅಂತರದಲ್ಲಿ ಪಾರಾದ ನಟ ವಿಶಾಲ್
‘ಮಾರ್ಕ್ ಌಂಟನಿ’ ಶೂಟಿಂಗ್ ವೇಳೆ ಸಂಭವಿಸಿದ ಅಪಘಾತImage Credit source: opindia.com
Follow us
|

Updated on:Feb 22, 2023 | 9:52 PM

ತೆಲುಗು ನಟ ವಿಶಾಲ್​ ನಟಿಸುತ್ತಿರುವ ‘ಮಾರ್ಕ್ ಆ್ಯಂಟನಿ’ (Mark Antony) ಚಿತ್ರದ ಶೂಟಿಂಗ್​ ವೇಳೆ ಅವಘಡ ಸಂಭವಿಸಿದ್ದು, ದೊಡ್ಡ ಅಪಘಾತದಿಂದ ವಿಶಾಲ್ ಅವರು ಪಾರಾಗಿರುವಂತಹ ಘಟನೆ ನಡೆದಿದೆ. ಇತ್ತೀಚೆಗೆ ಚೆನ್ನೈನ ಸ್ಟುಡಿಯೋದರಲ್ಲಿ ‘ಮಾರ್ಕ್ ಆ್ಯಂಟನಿ’ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಸಿನಿಮಾಗಾಗಿ ಲಾರಿ​ಗೆ ಸಂಬಂಧಿಸಿದ ದೃಶ್ಯವನ್ನು ಚಿತ್ರತಂಡ ಸೆರೆಹಿಡಿಯಲಾಗುತ್ತಿತ್ತು. ಈ ವೇಳೆ ಲಾರಿ ಡ್ರೈವರ್ ನಿಯಂತ್ರಣ ತಪ್ಪಿದ್ದು, ಎಲ್ಲಿ ಲಾರಿ ನಿಲ್ಲಬೇಕೋ ಅಲ್ಲಿ ನಿಲ್ಲದೆ ಮುಂದಕ್ಕೆ ನುಗ್ಗಿದೆ. ಅಲ್ಲೇ ಕೆಳಗಡೆ ಮಲಗಿದ್ದ ವಿಶಾಲ್​ ಅವರ ಪಕ್ಕದಲ್ಲೇ ಲಾರಿ ಹಾದು ಹೋಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯಣದಿಂದ ಪಾರಾಗಿದ್ದಾರೆ. ಸದ್ಯ ವಿಶಾಲ್​ ಅಪಘಾತದಿಂದ ಪಾರಾಗಿರುವ ವಿಚಾರ ತಿಳಿದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಈ ವಿಚಾರವಾಗಿ ಖುದ್ದು ವಿಶಾಲ್​ ಅವರು ಮಾಹಿತಿ ನೀಡಿದ್ದಾರೆ.

ಮಾರ್ಕ್​​ ಆಂಟೋನಿ ಚಿತ್ರದ ಚಿತ್ರೀಕರಣದ ವೇಳೆ ನಡೆದ ಅಪಘಾತದ ಕುರಿತಾಗಿ ವಿಶಾಲ್​ ಅವರು ಸೊಶೀಯಲ್​ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಕೆಲವೇ ಕ್ಷಣ ಸ್ವಲ್ಪವೇ ದೂರದಲ್ಲಿ ನನ್ನ ಸಾವು ಕಾಣಿಸಿತು. ದೇವರಿಗೆ ಧನ್ಯವಾದ ತಿಳಿಸುತ್ತೇನೆ. ಅವಘಡದಲ್ಲಿ ಯಾರಿಗೂ ಯಾವುದೇ ರೀತಿಯ ತೊಂದರೆ ಆಗಿಲ್ಲ. ಸ್ವಲ್ಪ ಸಮಯದ ಬಳಿಕ ಮತ್ತೆ ಶೂಟಿಂಗ್ ಮುಂದುವರೆಸಲಾಯಿತು’ ಎಂದು ವಿಶಾಲ್​ ಅವರು ತಮ್ಮ ಟ್ವೀಟರ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Rashmika Mandanna: ಮಿಲಾನ್​ಗೆ ಹಾರುವ ಮುನ್ನ ತಮ್ಮ ಸೌಂದರ್ಯದ ಗುಟ್ಟು ರಟ್ಟು ಮಾಡಿದ ರಶ್ಮಿಕಾ ಮಂದಣ್ಣ

ಇದನ್ನೂ ಓದಿ: Martin Teaser: ಮಾರ್ಟಿನ್ ಸಿನಿಮಾ ಟೀಸರ್ ನೋಡಲು ಟಿಕೆಟ್! ಕೊಟ್ಟ ಹಣ ಸತ್ಕಾರ್ಯಕ್ಕೆ ಬಳಕೆ

ಅವಘಡ ಸಂಭವಿಸಿದ ಸ್ಥಳದಲ್ಲಿ ವಿಶಾಲ್​ ಅವರು ಸೇರಿದಂತೆ ಅನೇಕ ಸಹ ಕಲಾವಿದರು, 100ಕ್ಕೂ ಹೆಚ್ಚು ಕಾರ್ಮಿಕರು, ತಂತ್ರಜ್ಞರು ಇದ್ದರು. ಲಾರಿ ನಿಯಂತ್ರಣ ಕಳೆದುಕೊಂಡು ತಮ್ಮ ಬಳಿ ಬರುತ್ತಿರುವುದನ್ನು ನೋಡಿ ಅದರಿಂದ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಇದು ತಾಂತ್ರಿಕ ದೋಷದಿಂದ ಸಂಭವಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಅಪಘಾತದ ವಿಡಿಯೋ ಸೊಶೀಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:49 pm, Wed, 22 February 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ