AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿ ಸಿನಿಮಾ ಶೂಟಿಂಗ್ ಸಮಯದಲ್ಲಿ ಅವಘಡ, ಸ್ಟಂಟ್​ಮ್ಯಾನ್ ಸಾವು

ನಟ ಕಾರ್ತಿ ನಟಿಸುತ್ತಿರುವ ‘ಸರ್ದಾರ್ 2’ ಸಿನಿಮಾದ ಚಿತ್ರೀಕರಣದ ವೇಳೆ ಅವಘಡವೊಂದು ಘಟಿಸಿದ್ದು ಸ್ಟಂಟ್​ಮನ್ ಒಬ್ಬರು ಸಾವನ್ನಪ್ಪಿದ್ದಾರೆ. ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಕಾರ್ತಿ ಸಿನಿಮಾ ಶೂಟಿಂಗ್ ಸಮಯದಲ್ಲಿ ಅವಘಡ, ಸ್ಟಂಟ್​ಮ್ಯಾನ್ ಸಾವು
ಮಂಜುನಾಥ ಸಿ.
|

Updated on: Jul 18, 2024 | 12:55 PM

Share

ತಮಿಳಿನ ಸ್ಟಾರ್ ನಟ ಕಾರ್ತಿ ನಟಿಸುತ್ತಿದ್ದ ಸಿನಿಮಾದ ಸೆಟ್​ನಲ್ಲಿ ಅವಘಡ ಸಂಭವಿಸಿದ್ದು ಸ್ಟಂಟ್​ಮ್ಯಾನ್ ಒಬ್ಬರ ಸಾವಾಗಿದೆ. ಕಾರ್ತಿ ನಟನೆಯ ‘ಸರ್ದಾರ್ 2’ ಸಿನಿಮಾದ ಶೂಟಿಂಗ್ ಚೆನ್ನೈನ ಸಾಲಿಗ್ರಾಮಂನ ಪ್ರಸಾದ್ ಸ್ಟುಡಿಯೋನಲ್ಲಿ ನಡೆಯುತ್ತಿತ್ತು. ಸಿನಿಮಾಕ್ಕಾಗಿ ಆಕ್ಷನ್ ದೃಶ್ಯವೊಂದರ ಚಿತ್ರೀಕರಣ ಮಾಡಲಾಗುತ್ತಿತ್ತು. ಈ ವೇಳೆ ಸಂಭವಿಸಿದ ಅವಘಡದಲ್ಲಿ ಸ್ಟಂಟ್​ಮ್ಯಾನ್ ಒಬ್ಬ ಬಿದ್ದು ನಿಧನ ಹೊಂದಿದ್ದಾರೆ. ಈ ಬಗ್ಗೆ ‘ಸರ್ದಾರ್ 2’ ಚಿತ್ರತಂಡ ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿದ್ದು, ಪೊಲೀಸರು ದೂರು ಸಹ ದಾಖಲಿಸಿಕೊಂಡಿದ್ದಾರೆ.

ಚಿತ್ರತಂಡ ನೀಡಿರುವ ಹೇಳಿಕೆಯಂತೆ ‘ಜುಲೈ 16 ರಂದು ಸಿನಿಮಾದ ಚಿತ್ರೀಕರಣ ಎಲ್ಲ ಮುಗಿದ ಬಳಿಕ ಸ್ಟಂಟ್​ಮ್ಯಾನ್ ಇಳುಮಲೈ ಎಂಬುವರು ಸುಮಾರು 20 ಅಡಿ ಎತ್ತರದಿಂದ ಆಯತಪ್ಪಿ ಬಿದ್ದು ಗಾಯಗೊಂಡರಂತೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸತತ ಚಿಕಿತ್ಸೆಗಳ ಬಳಿಕ ಇಳುಮಲೈ ನಿಧನ ಹೊಂದಿದ್ದಾರೆ. ಇಳುಮಲೈ ಆಕ್ಷನ್ ದೃಶ್ಯಗಳಲ್ಲಿ ರಿಗ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರಂತೆ.

ಇಳುಮಲೈ ನಿಧನವಾದ ಬಳಿಕ ಚಿತ್ರತಂಡ ಚಿತ್ರೀಕರಣ ನಿಲ್ಲಿಸಿದೆ. ‘ಸರ್ದಾರ್ 2’ ಚಿತ್ರತಂಡವದವರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಚಿತ್ರೀಕರಣ ಮುಗಿದ ಬಳಿಕ ಪ್ಯಾಕ್ ಅಪ್ ಮಾಡುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಚಿತ್ರೀಕರಣದ ಸಂದರ್ಭದಲ್ಲಿ ಸೂಕ್ತವಾಗಿ ಎಲ್ಲ ಸುರಕ್ಷತಾ ನಿಯಮಗಳನ್ನು ಚಿತ್ರತಂಡ ಪಾಲಿಸಿತ್ತೆ ಇಲ್ಲವೆ ಎಂಬ ಬಗ್ಗೆ ಪ್ರಶ್ನೆ ಉದ್ಭವಿಸಿದೆ.

ಇದನ್ನೂ ಓದಿ:ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು

ಸ್ಟಂಟ್​ಮ್ಯಾನ್ ಇಳುಮಲೈ ನಿಧನದ ಬಗ್ಗೆ ‘ಸರ್ದಾರ್ 2’ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಪ್ರಿನ್ಸ್ ನಿರ್ಮಾಣ ಸಂಸ್ಥೆ ಸಂತಾಪ ವ್ಯಕ್ತಪಡಿಸಿದೆ. ಇಳುಮಲೈ ಸ್ಟಂಟ್​ಮ್ಯಾನ್ ಯೂನಿಯನ್​ನ ಸದಸ್ಯರಾಗಿದ್ದು, ಯೂನಿಯನ್ ಸಹ ಇಳುಮಲೈ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದೆ. ಅಸಲಿಗೆ ‘ಸರ್ದಾರ್ 2’ ಸಿನಿಮಾದ ಮುಹೂರ್ತ ಕೆಲವೇ ದಿನಗಳ ಮುಂಚೆಯಷ್ಟೆ ಆಗಿತ್ತು, ಜುಲೈ 12 ರಂದು ಮುಹೂರ್ತ ನಡೆದು, ಜುಲೈ 15 ರಂದು ಚಿತ್ರೀಕರಣ ಪ್ರಾರಂಭವಾಗಿತ್ತು. ಚಿತ್ರೀಕರಣ ಪ್ರಾರಂಭವಾದ ಒಂದೇ ದಿನಕ್ಕೆ ದುರ್ಘಟನೆ ನಡೆದಿದೆ.

‘ಸರ್ದಾರ್ 2’ ಸಿನಿಮಾದಲ್ಲಿ ಕಾರ್ತಿ ನಾಯಕನಾಗಿ ನಟಿಸುತ್ತಿದ್ದಾರೆ. ಸಿನಿಮಾವನ್ನು ಪಿಎಸ್ ಮಿತ್ರನ್ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಯುವನ್ ಶಂಕರ್ ರಾಜ ಸಂಗೀತ ನೀಡಿದ್ದಾರೆ. ದಿಲೀಪ್ ಸುಬ್ಬರಾಜನ್ ಆಕ್ಷನ್ ಕೊರಿಯೋಗ್ರಫಿ ಮಾಡಿದ್ದಾರೆ. ಇದೀಗ ಸಿನಿಮಾದ ಆಕ್ಷನ್ ನಿರ್ದೇಶಕ, ನಿರ್ದೇಶಕ ಹಾಗೂ ನಿರ್ಮಾಪಕರನ್ನು ಪೊಲೀಸರು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್