AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿ ಸಿನಿಮಾ ಶೂಟಿಂಗ್ ಸಮಯದಲ್ಲಿ ಅವಘಡ, ಸ್ಟಂಟ್​ಮ್ಯಾನ್ ಸಾವು

ನಟ ಕಾರ್ತಿ ನಟಿಸುತ್ತಿರುವ ‘ಸರ್ದಾರ್ 2’ ಸಿನಿಮಾದ ಚಿತ್ರೀಕರಣದ ವೇಳೆ ಅವಘಡವೊಂದು ಘಟಿಸಿದ್ದು ಸ್ಟಂಟ್​ಮನ್ ಒಬ್ಬರು ಸಾವನ್ನಪ್ಪಿದ್ದಾರೆ. ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಕಾರ್ತಿ ಸಿನಿಮಾ ಶೂಟಿಂಗ್ ಸಮಯದಲ್ಲಿ ಅವಘಡ, ಸ್ಟಂಟ್​ಮ್ಯಾನ್ ಸಾವು
ಮಂಜುನಾಥ ಸಿ.
|

Updated on: Jul 18, 2024 | 12:55 PM

Share

ತಮಿಳಿನ ಸ್ಟಾರ್ ನಟ ಕಾರ್ತಿ ನಟಿಸುತ್ತಿದ್ದ ಸಿನಿಮಾದ ಸೆಟ್​ನಲ್ಲಿ ಅವಘಡ ಸಂಭವಿಸಿದ್ದು ಸ್ಟಂಟ್​ಮ್ಯಾನ್ ಒಬ್ಬರ ಸಾವಾಗಿದೆ. ಕಾರ್ತಿ ನಟನೆಯ ‘ಸರ್ದಾರ್ 2’ ಸಿನಿಮಾದ ಶೂಟಿಂಗ್ ಚೆನ್ನೈನ ಸಾಲಿಗ್ರಾಮಂನ ಪ್ರಸಾದ್ ಸ್ಟುಡಿಯೋನಲ್ಲಿ ನಡೆಯುತ್ತಿತ್ತು. ಸಿನಿಮಾಕ್ಕಾಗಿ ಆಕ್ಷನ್ ದೃಶ್ಯವೊಂದರ ಚಿತ್ರೀಕರಣ ಮಾಡಲಾಗುತ್ತಿತ್ತು. ಈ ವೇಳೆ ಸಂಭವಿಸಿದ ಅವಘಡದಲ್ಲಿ ಸ್ಟಂಟ್​ಮ್ಯಾನ್ ಒಬ್ಬ ಬಿದ್ದು ನಿಧನ ಹೊಂದಿದ್ದಾರೆ. ಈ ಬಗ್ಗೆ ‘ಸರ್ದಾರ್ 2’ ಚಿತ್ರತಂಡ ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿದ್ದು, ಪೊಲೀಸರು ದೂರು ಸಹ ದಾಖಲಿಸಿಕೊಂಡಿದ್ದಾರೆ.

ಚಿತ್ರತಂಡ ನೀಡಿರುವ ಹೇಳಿಕೆಯಂತೆ ‘ಜುಲೈ 16 ರಂದು ಸಿನಿಮಾದ ಚಿತ್ರೀಕರಣ ಎಲ್ಲ ಮುಗಿದ ಬಳಿಕ ಸ್ಟಂಟ್​ಮ್ಯಾನ್ ಇಳುಮಲೈ ಎಂಬುವರು ಸುಮಾರು 20 ಅಡಿ ಎತ್ತರದಿಂದ ಆಯತಪ್ಪಿ ಬಿದ್ದು ಗಾಯಗೊಂಡರಂತೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸತತ ಚಿಕಿತ್ಸೆಗಳ ಬಳಿಕ ಇಳುಮಲೈ ನಿಧನ ಹೊಂದಿದ್ದಾರೆ. ಇಳುಮಲೈ ಆಕ್ಷನ್ ದೃಶ್ಯಗಳಲ್ಲಿ ರಿಗ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರಂತೆ.

ಇಳುಮಲೈ ನಿಧನವಾದ ಬಳಿಕ ಚಿತ್ರತಂಡ ಚಿತ್ರೀಕರಣ ನಿಲ್ಲಿಸಿದೆ. ‘ಸರ್ದಾರ್ 2’ ಚಿತ್ರತಂಡವದವರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಚಿತ್ರೀಕರಣ ಮುಗಿದ ಬಳಿಕ ಪ್ಯಾಕ್ ಅಪ್ ಮಾಡುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಚಿತ್ರೀಕರಣದ ಸಂದರ್ಭದಲ್ಲಿ ಸೂಕ್ತವಾಗಿ ಎಲ್ಲ ಸುರಕ್ಷತಾ ನಿಯಮಗಳನ್ನು ಚಿತ್ರತಂಡ ಪಾಲಿಸಿತ್ತೆ ಇಲ್ಲವೆ ಎಂಬ ಬಗ್ಗೆ ಪ್ರಶ್ನೆ ಉದ್ಭವಿಸಿದೆ.

ಇದನ್ನೂ ಓದಿ:ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು

ಸ್ಟಂಟ್​ಮ್ಯಾನ್ ಇಳುಮಲೈ ನಿಧನದ ಬಗ್ಗೆ ‘ಸರ್ದಾರ್ 2’ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಪ್ರಿನ್ಸ್ ನಿರ್ಮಾಣ ಸಂಸ್ಥೆ ಸಂತಾಪ ವ್ಯಕ್ತಪಡಿಸಿದೆ. ಇಳುಮಲೈ ಸ್ಟಂಟ್​ಮ್ಯಾನ್ ಯೂನಿಯನ್​ನ ಸದಸ್ಯರಾಗಿದ್ದು, ಯೂನಿಯನ್ ಸಹ ಇಳುಮಲೈ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದೆ. ಅಸಲಿಗೆ ‘ಸರ್ದಾರ್ 2’ ಸಿನಿಮಾದ ಮುಹೂರ್ತ ಕೆಲವೇ ದಿನಗಳ ಮುಂಚೆಯಷ್ಟೆ ಆಗಿತ್ತು, ಜುಲೈ 12 ರಂದು ಮುಹೂರ್ತ ನಡೆದು, ಜುಲೈ 15 ರಂದು ಚಿತ್ರೀಕರಣ ಪ್ರಾರಂಭವಾಗಿತ್ತು. ಚಿತ್ರೀಕರಣ ಪ್ರಾರಂಭವಾದ ಒಂದೇ ದಿನಕ್ಕೆ ದುರ್ಘಟನೆ ನಡೆದಿದೆ.

‘ಸರ್ದಾರ್ 2’ ಸಿನಿಮಾದಲ್ಲಿ ಕಾರ್ತಿ ನಾಯಕನಾಗಿ ನಟಿಸುತ್ತಿದ್ದಾರೆ. ಸಿನಿಮಾವನ್ನು ಪಿಎಸ್ ಮಿತ್ರನ್ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಯುವನ್ ಶಂಕರ್ ರಾಜ ಸಂಗೀತ ನೀಡಿದ್ದಾರೆ. ದಿಲೀಪ್ ಸುಬ್ಬರಾಜನ್ ಆಕ್ಷನ್ ಕೊರಿಯೋಗ್ರಫಿ ಮಾಡಿದ್ದಾರೆ. ಇದೀಗ ಸಿನಿಮಾದ ಆಕ್ಷನ್ ನಿರ್ದೇಶಕ, ನಿರ್ದೇಶಕ ಹಾಗೂ ನಿರ್ಮಾಪಕರನ್ನು ಪೊಲೀಸರು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ