AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR ಚಿತ್ರದ ಬಿಡುಗಡೆಯ ಬಗ್ಗೆ ಕೇಳಿಬರುತ್ತಿದೆ ಅಚ್ಚರಿಯ ಸುದ್ದಿ; ಏನದು? ಇಲ್ಲಿದೆ ಮಾಹಿತಿ

ರಾಜಮೌಳಿ ನಿರ್ದೇಶನದ, ಜ್ಯೂನಿಯರ್ ಎನ್​ಟಿಆರ್ ಹಾಗೂ ರಾಮ್ ಚರಣ್ ನಟಿಸುತ್ತಿರುವ ‘ಆರ್​ಆರ್​ಆರ್​’ ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇದೀಗ ಟಾಲಿವುಡ್​ ಅಂಗಳದಿಂದ ಹೊಸ ಸುದ್ದಿಯೊಂದು ಕೇಳಿಬಂದಿದ್ದು, ಅಭಿಮಾನಿಗಳು ಕುತೂಹಲಗೊಂಡಿದ್ದಾರೆ. ಏನಿದು ಸುದ್ದಿ? ಇಲ್ಲಿದೆ ಮಾಹಿತಿ.

RRR ಚಿತ್ರದ ಬಿಡುಗಡೆಯ ಬಗ್ಗೆ ಕೇಳಿಬರುತ್ತಿದೆ ಅಚ್ಚರಿಯ ಸುದ್ದಿ; ಏನದು? ಇಲ್ಲಿದೆ ಮಾಹಿತಿ
ರಾಮ್​ ಚರಣ್​, ಜ್ಯೂ. ಎನ್​ಟಿಆರ್​
TV9 Web
| Edited By: |

Updated on: Oct 01, 2021 | 6:01 PM

Share

ಪ್ರಸ್ತುತ ಭಾರತದಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳ ಸದ್ದು ಜೋರಾಗಿದೆ. ಸ್ಯಾಂಡಲ್​ವುಡ್, ಟಾಲಿವುಡ್, ಕಾಲಿವುಡ್ ಸೇರಿದಂತೆ ದಕ್ಷಿಣ ಭಾರತದ ಹಲವು ಚಿತ್ರಗಳು ತಮ್ಮ ಕಂಟೆಂಟ್ ಮುಖಾಂತರ ಇಡೀ ಭಾರತವನ್ನು ತಲುಪುತ್ತಿವೆ. ಜೊತೆಗೆ ಇದಕ್ಕೆ ಪ್ರೇಕ್ಷಕ ವರ್ಗವೂ ದೊಡ್ಡದಿದೆ. ಇಂತಹ ಸಿನಿಮಾಗಳ ಪಟ್ಟಿಯಲ್ಲಿ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’​ ಚಿತ್ರವೂ ಇದೆ. ಆದರೆ ಕೊರೊನಾ ಕಾರಣದಿಂದ ಚಿತ್ರಕ್ಕೆ ಹಿನ್ನೆಡೆಯಾಗಿತ್ತು. ಇತ್ತೀಚೆಗೆ ಅಕ್ಟೋಬರ್​​ನಲ್ಲಿ ಚಿತ್ರದ ಬಿಡುಗಡೆ ಎಂದು ಘೋಷಿಸಿದ್ದನ್ನು ಅನಿರ್ದಿಷ್ಟಾವಧಿಗೆ ಚಿತ್ರತಂಡ ಮುಂದೂಡಿತ್ತು. ಇದೀಗ ಟಾಲಿವುಡ್ ಅಂಗಳದಿಂದ ಅಚ್ಚರಿಯ ಸುದ್ದಿಯೊಂದು ಕೇಳಿಬಂದಿದೆ.

ಚಿತ್ರವು ಆರಂಭದಲ್ಲಿ ದಸರಾ ಹಬ್ಬಕ್ಕೆ ಉಡುಗೊರೆಯಾಗಿ ಬಿಡುಗಡೆಯಾಗಲಿದೆ ಎಂಬ ಸುದ್ದಿ ಬಂದಿತ್ತು. ನಂತರ ಅದನ್ನು ಚಿತ್ರ ತಂಡ ಮುಂದೂಡಲು ನಿರ್ಧರಿಸಿತು. ಕೆಲವು ದಿನಗಳ ನಂತರ ಕ್ರಿಸ್ಮಸ್ ಸಂದರ್ಭದಲ್ಲಿ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಸುದ್ದಿ ಕೇಳಿ ಬಂತು. ಆದರೆ ಅದಕ್ಕೆ ಸ್ಪಷ್ಟನೆ ಸಿಕ್ಕುವ ಮುನ್ನವೇ ಹೊಸ ಸುದ್ದಿ ಬಂದಿದೆ. ಚಿತ್ರವು ಸಂಕ್ರಾಂತಿಯಂದು ಬಿಡುಗಡೆಯಾಗಲಿದೆ ಎಂಬ ಸುದ್ದಿ ಟಾಲಿವುಡ್​ನಿಂದ ಜೋರಾಗಿಯೇ ಕೇಳಿಬರುತ್ತಿದೆ.

ಆದರೆ ಈ ಹಿಂದೆ ‘ಆರ್​ಆರ್​ಆರ್​’ ಚಿತ್ರತಂಡ ಘೋಷಿಸಿದಂತೆ ಬಿಡುಗಡೆಯ ಮುಂದಿನ ದಿನಾಂಕ ಇನ್ನೂ ಅಧಿಕೃತವಾಗಿಲ್ಲ. ಈ ಚಿತ್ರವು ಸಂಕ್ರಾಂತಿಗೆ ಬಿಡುಗಡೆಯಾಗಲಿದೆ ಎಂಬ ವಾದವನ್ನು ಅಭಿಮಾನಿಗಳಲ್ಲೇ ಹಲವರು ಒಪ್ಪಲು ತಯಾರಿಲ್ಲ. ಇದಕ್ಕೆ ಕಾರಣ ಭೀಮಲಾ ನಾಯಕ್, ಸರ್ಕಾರು ವಾರಿ ಪಾಟ, ರಾಧೇಶ್ಯಾಮ್, ಆಚಾರ್ಯ, ಅಖಂಡ ಮೊದಲಾದ ಚಿತ್ರಗಳು ಈಗಾಗಲೇ ಸಂಕ್ರಾಂತಿಯನ್ನು ಗುರಿಯಾಗಿಸಿಕೊಂಡು ಬಿಡುಗಡೆಗೆ ಸಿದ್ಧವಾಗುತ್ತಿವೆ. ಈ ಎಲ್ಲಾ ಬಿಗ್ ಬಜೆಟ್ ಸಿನಿಮಾಗಳ ನಡುವೆ ‘ಆರ್‌ಆರ್‌ಆರ್’ ಕೂಡ ಬರುತ್ತದೆಯೇ ಎಂಬ ಪ್ರಶ್ನೆಯನ್ನು ಹಲವರು ಎತ್ತಿದ್ದಾರೆ. ಆದ್ದರಿಂದಲೇ ಚಿತ್ರವು ಬೇಸಿಗೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈಗಾಗಲೇ ಚಿತ್ರದ ಟೀಸರ್‌ಗಳು ಬಿಡುಗಡೆಯಾಗಿದ್ದು, ದೋಸ್ತಿ ಹಾಡಿಗೆ ಭಾರೀ ಪ್ರತಿಕ್ರಿಯೆ ಸಿಕ್ಕಿದೆ. ಚಿತ್ರದ ಚಿತ್ರೀಕರಣ ಆರಂಭವಾಗಿ ಸುಮಾರು ಮೂರು ವರ್ಷಗಳಾಗಿವೆ. ಇಷ್ಟು ವರ್ಷದಿಂದ ಜ್ಯೂನಿಯರ್ ಎನ್​ಟಿಆರ್ ಹಾಗೂ ರಾಮ್ ಚರಣ್ ಅಭಿಮಾನಿಗಳು ಸಿನಿಮಾದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಒಂದು ವೇಳೆ ಈಗ ಕೇಳಿ ಬರುತ್ತಿರುವ ಸಂಕ್ರಾಂತಿಗೆ ಬಿಡುಗಡೆಯಾಗುವ ಸುದ್ದಿ ನಿಜವೇ ಆಗಿದ್ದಲ್ಲಿ, ಹೊಸ ವರ್ಷದ ಆರಂಭದಲ್ಲಿ ತೆಲುಗಿನಲ್ಲಿ ಸಾಲು ಸಾಲಾಗಿ ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಯಾಗಲಿವೆ. ಆದ್ದರಿಂದಲೇ ಅಭಿಮಾನಿಗಳು ಚಿತ್ರತಂಡದ ಅಧಿಕೃತ ಘೋಷಣೆಗೆ ಕಾತರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ:

ನ.2ರಂದು ‘ಜೈ ಭೀಮ್​’ ಸಿನಿಮಾ ರಿಲೀಸ್​; ಮತ್ತೆ ಓಟಿಟಿ ಮೇಲೆ ಭರವಸೆ ಇಟ್ಟ ಸೂರ್ಯ

‘ದುಡ್ಡಿನಿಂದ ಸೌಂದರ್ಯ ಪಡೆಯಬಹುದು’: ಮೌನಿ ರಾಯ್​ ಫೋಟೋ ತೋರಿಸಿ ಸಾಕ್ಷಿ ಸಮೇತ ವಿವರಿಸಿದ ಕಮಾಲ್ ಖಾನ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ